July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿ

ನದಿಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಸಾವು

ಮುಂಡಾಜೆ: ನದಿಗೆ ಬಲೆಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವರ ಮೃತದೇಹ ಸ್ಥಳೀಯ ತೋಟವೊಂದರಲ್ಲಿ ಪತ್ತೆಯಾದ ಘಟನೆ ಆ.21ರಂದು ಮುಂಡಾಜೆಯಲ್ಲಿ ನಡೆದಿದೆ.ಮುಂಡಾಜೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ಚೆನ್ನಿಗುಡ್ಡೆ ನಿವಾಸಿ ಪೂವಪ್ಪ ನಾಯ್ಕ(7೦ವ) ಅಸಹಜವಾಗಿ ಮೃತಪಟ್ಟವರಾಗಿದ್ದಾರೆ.

ಈ ಬಗ್ಗೆ ಮೃತರ ಪುತ್ರ ದಿನೇಶ್ ನಾಯ್ಕ ಧರ್ಮಸ್ಥಳ ಠಾಣೆಗೆ ನೀಡಿದ ದೂರಿನಂತೆ ನನ್ನ ತಂದೆ ಪೂವಪ್ಪ ನಾಯ್ಕ ಅವರು ಆ.21 ರಂದು ಮಧ್ಯಾಹ್ನ 3 ಗಂಟೆಗೆ ಮುಂಡಾಜೆ ಗ್ರಾಮದ ಮುಂಡ್ರುಪ್ಪಾಡಿ ಸೇತುವೆಯ ಮೃತ್ಯುಂಜಯ ನದಿಗೆ ಮೀನು ಹಿಡಿಯಲೆಂದು ಬಲೆ ಹಿಡಿದುಕೊಂಡು ಹೋಗಿ ನದಿಯ ಸೇತುವೆ ಅಡಿಯಲ್ಲಿ ಬಲೆ ಹಾಕಿ ನನ್ನನ್ನು ಅಲ್ಲೇ ನಿಲ್ಲಿಸಿ, ಬೇರೆ ಸ್ಥಳದಲ್ಲಿ ಬಲೆ ಹಾಕಿ ಮೀನು ಹಿಡಿದುಕೊಂಡು ಸಂಜೆ 6.30 ಕ್ಕೆ ಬಂದವರು, ಡ್ಯಾಂ ಬಳಿ ಹಾಕಿದ ಬಲೆ ತೆಗೆಯಯಲೆಂದು ವಾಪಾಸ್ಸು ಹೋದವರು ರಾತ್ರಿ 7.30 ತನಕವೂ ಹಿಂತಿರುಗಿ ಬಾರದೇ ಇದ್ದುದರಿಂದ, ಕೂಗಿ ಕರೆದರೂ ಯಾವುದೇ ಉತ್ತರ ಬಾರದೇ ಇದ್ದು, ಈ ವಿಚಾರವನ್ನು ಮನೆಯವರಿಗೆ ,ನೆರೆಕರೆಯವರಿಗೆ ಹಾಗೂ ಸಂಬಂದಿಕರಿಗೆ ತಿಳಿಸಿ, ಹುಡುಕಾಡಿದಾಗ ರಾತ್ರಿ ತಂದೆ ಪೂವಪ್ಪ ನಾಯ್ಕರು ನದಿ ಬದಿಯಲ್ಲಿರುವ ಮುಂಡಾಜೆ ಗ್ರಾಮದ ಮುಂಡ್ರುಪ್ಪಾಡಿ ಸಂಜೀವ ಶೆಟ್ಟಿಯವರ ಅಡಿಕೆ ತೋಟದಲ್ಲಿ ಬಿದ್ದುಕೊಂಡಿದ್ದವರನ್ನು ಉಪಚರಿಸಿ ನೋಡಿದಾಗ ಬಾಯಲ್ಲಿ ನೊರೆ ಬಂದಿದ್ದು, ಮೃತ ಪಟ್ಟಿರುವುದು ಕಂಡು ಬಂದಿರುತ್ತದೆ ಎಂದು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪಾಲಕಾರೊಂದಿಗೆ ಸಂವಾದ ಕಾರ್ಯಕ್ರಮ

Suddi Udaya

ನ.15: ಉಜಿರೆಯ ಶ್ರೀ ಧ.ಮ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಹಳೇ ನಾಣ್ಯಗಳು ಹಾಗೂ ಪುರಾತನ ವಸ್ತುಗಳ ಪ್ರದರ್ಶನ

Suddi Udaya

ಬೆಳ್ತಂಗಡಿ: ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya

ನಂದಿ ರಥ ಯಾತ್ರೆಗೆ ಗುರುವಾಯನಕೆರೆಯಲ್ಲಿ ಸ್ವಾಗತ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಸಮಿತಿ ರಚನೆ 62 ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಚಂದ್ರಶೇಖರ ಕನ್ನಾಜೆ ಆಯ್ಕೆ

Suddi Udaya
error: Content is protected !!