23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿ

ನದಿಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಸಾವು

ಮುಂಡಾಜೆ: ನದಿಗೆ ಬಲೆಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವರ ಮೃತದೇಹ ಸ್ಥಳೀಯ ತೋಟವೊಂದರಲ್ಲಿ ಪತ್ತೆಯಾದ ಘಟನೆ ಆ.21ರಂದು ಮುಂಡಾಜೆಯಲ್ಲಿ ನಡೆದಿದೆ.ಮುಂಡಾಜೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ಚೆನ್ನಿಗುಡ್ಡೆ ನಿವಾಸಿ ಪೂವಪ್ಪ ನಾಯ್ಕ(7೦ವ) ಅಸಹಜವಾಗಿ ಮೃತಪಟ್ಟವರಾಗಿದ್ದಾರೆ.

ಈ ಬಗ್ಗೆ ಮೃತರ ಪುತ್ರ ದಿನೇಶ್ ನಾಯ್ಕ ಧರ್ಮಸ್ಥಳ ಠಾಣೆಗೆ ನೀಡಿದ ದೂರಿನಂತೆ ನನ್ನ ತಂದೆ ಪೂವಪ್ಪ ನಾಯ್ಕ ಅವರು ಆ.21 ರಂದು ಮಧ್ಯಾಹ್ನ 3 ಗಂಟೆಗೆ ಮುಂಡಾಜೆ ಗ್ರಾಮದ ಮುಂಡ್ರುಪ್ಪಾಡಿ ಸೇತುವೆಯ ಮೃತ್ಯುಂಜಯ ನದಿಗೆ ಮೀನು ಹಿಡಿಯಲೆಂದು ಬಲೆ ಹಿಡಿದುಕೊಂಡು ಹೋಗಿ ನದಿಯ ಸೇತುವೆ ಅಡಿಯಲ್ಲಿ ಬಲೆ ಹಾಕಿ ನನ್ನನ್ನು ಅಲ್ಲೇ ನಿಲ್ಲಿಸಿ, ಬೇರೆ ಸ್ಥಳದಲ್ಲಿ ಬಲೆ ಹಾಕಿ ಮೀನು ಹಿಡಿದುಕೊಂಡು ಸಂಜೆ 6.30 ಕ್ಕೆ ಬಂದವರು, ಡ್ಯಾಂ ಬಳಿ ಹಾಕಿದ ಬಲೆ ತೆಗೆಯಯಲೆಂದು ವಾಪಾಸ್ಸು ಹೋದವರು ರಾತ್ರಿ 7.30 ತನಕವೂ ಹಿಂತಿರುಗಿ ಬಾರದೇ ಇದ್ದುದರಿಂದ, ಕೂಗಿ ಕರೆದರೂ ಯಾವುದೇ ಉತ್ತರ ಬಾರದೇ ಇದ್ದು, ಈ ವಿಚಾರವನ್ನು ಮನೆಯವರಿಗೆ ,ನೆರೆಕರೆಯವರಿಗೆ ಹಾಗೂ ಸಂಬಂದಿಕರಿಗೆ ತಿಳಿಸಿ, ಹುಡುಕಾಡಿದಾಗ ರಾತ್ರಿ ತಂದೆ ಪೂವಪ್ಪ ನಾಯ್ಕರು ನದಿ ಬದಿಯಲ್ಲಿರುವ ಮುಂಡಾಜೆ ಗ್ರಾಮದ ಮುಂಡ್ರುಪ್ಪಾಡಿ ಸಂಜೀವ ಶೆಟ್ಟಿಯವರ ಅಡಿಕೆ ತೋಟದಲ್ಲಿ ಬಿದ್ದುಕೊಂಡಿದ್ದವರನ್ನು ಉಪಚರಿಸಿ ನೋಡಿದಾಗ ಬಾಯಲ್ಲಿ ನೊರೆ ಬಂದಿದ್ದು, ಮೃತ ಪಟ್ಟಿರುವುದು ಕಂಡು ಬಂದಿರುತ್ತದೆ ಎಂದು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಮುಂಡಾಜೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯ ಕ್ರಮ

Suddi Udaya

ಅಂಚೆ ಕಛೇರಿ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಏರಿಕೆ

Suddi Udaya

ಬೆಳ್ತಂಗಡಿ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ನೇಲ್ಯಡ್ಕಕ್ಕೆ ವಿಜ್ಞಾನ ಉಪಕರಣಗಳ ಕೊಡುಗೆ

Suddi Udaya

ಕಕ್ಕಿಂಜೆಯಲ್ಲಿ ಎಸ್‌ಡಿಪಿಐ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಗೌಡ ಸಮಾಜ ಬಾಂಧವರು ಜಾತಿ ಕಾಲಂ ನಲ್ಲಿ ಒಕ್ಕಲಿಗ , ಉಪಜಾತಿಯ ಕಾಲಂ ನಲ್ಲಿ ಗೌಡ ಎಂದು ನಮೂದಿಸುವಂತೆ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಗೌರವಾಧ್ಯಕ್ಷ ಹೆಚ್ ಪದ್ಮಗೌಡ ಹೇಳಿಕೆ

Suddi Udaya

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್‌ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯುಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

Suddi Udaya
error: Content is protected !!