September 6, 2026
ಚಿತ್ರ ವರದಿತಾಲೂಕು ಸುದ್ದಿವರದಿ

ಪೆರಾಡಿ ಸಂಘದಲ್ಲಿ ಪಶು ಆಹಾರ ಸರಬರಾಜು ಅಭಿಯಾನ

ಪೆರಾಡಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಪಶು ಆಹಾರ, ಸೈಲೇಜ್ ನ್ನು ಸದಸ್ಯರ ಮನೆಗೆ ಸರಬರಾಜು ಮಾಡುವ ಅಭಿಯಾನಕ್ಕೆ ಸಂಘದ ಅಧ್ಯಕ್ಷ ಯಶೋಧರ ಆಚಾರ್ಯ ಇವರು ಚಾಲನೆ ನೀಡಿದರು. ‘ಹಾಗೂ ಸದಸ್ಯರಿಗೆ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಪಶು ಆಹಾರ ಸೈಲೇಜನ್ನು ಸರಬರಾಜು ಮಾಡುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಮಾಡಲಾಗಿದ್ದು ಸದಸ್ಯರು ಇದರ ಸದುಪಯೋಗಪಡಿಸಿಕೊಂಡು ಹೆಚ್ಚಿನ ಹಾಲು ಉತ್ಪಾದನೆಯನ್ನು ಮಾಡುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ದ.ಕ ಹಾಲು ಒಕ್ಕೂಟದ ಉಪವ್ಯವಸ್ಥಾಪಕರು ಡಾ| ಸತೀಶ್ ರಾವ್ ಭಾಗವಹಿಸಿ ಬೆಳ್ತಂಗಡಿ ತಾಲೂಕಿನಲ್ಲಿ ಇದು ಪ್ರಥಮವಾಗಿದ್ದು ನಂದಿನಿ ಪಶು ಆಹಾರ ಉತ್ಕೃಷ್ಟ ಗುಣಮಟ್ಟ ಬಿಐಎಸ್ ಸರ್ಟಿಫಿಕೇಟ್ ಹೊಂದಿದ್ದು ಎಲ್ಲಾ ಸದಸ್ಯರು ನಂದಿನಿ ಪಶು ಆಹಾರವನ್ನು ಉಪಯೋಗಿಸಿ ಜಾನುವಾರು ನಿರ್ವಹಣಾ ವೆಚ್ಚವನ್ನು ಕಡಿತಗೊಳಿಸಬಹುದಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ದ.ಕ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಶ್ರೀಮತಿ ಸುಚಿತ್ರ, ಸಂಘದ ಉಪಾಧ್ಯಕ್ಷ ಬಾಹುಬಲಿ ಜೈನ್, ನಿರ್ದೇಶಕರಾದ ರಮೇಶ್ ಕುಲಾಲ್, ಡೊಂಬಯ್ಯ ಮೂಲ್ಯ ಹಾಗೂ ಕಾರ್ಯದರ್ಶಿ ಸುಭಾಶ್ ಜೈನ್ ಹಾಗೂ ಸಿಬ್ಬಂದಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಯಕ್ಷಯಾನ-2026: ಉಜಿರೆ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರಕ್ಕೆ ಸಮಗ್ರ ದ್ವಿತೀಯ ತಂಡ ಪ್ರಶಸ್ತಿ

Suddi Udaya

ಕಾಜೂರು ಉರೂಸ್; ಪ್ರತಿದಿನ‌‌ ವಿಭಿನ್ನ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನ

Suddi Udaya

ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಎರಡನೇ ಭಾರಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ

Suddi Udaya

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

Suddi Udaya

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

Suddi Udaya
error: Content is protected !!