July 23, 2026
ಚಿತ್ರ ವರದಿತಾಲೂಕು ಸುದ್ದಿವರದಿ

ಪೆರಾಡಿ ಸಂಘದಲ್ಲಿ ಪಶು ಆಹಾರ ಸರಬರಾಜು ಅಭಿಯಾನ

ಪೆರಾಡಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಪಶು ಆಹಾರ, ಸೈಲೇಜ್ ನ್ನು ಸದಸ್ಯರ ಮನೆಗೆ ಸರಬರಾಜು ಮಾಡುವ ಅಭಿಯಾನಕ್ಕೆ ಸಂಘದ ಅಧ್ಯಕ್ಷ ಯಶೋಧರ ಆಚಾರ್ಯ ಇವರು ಚಾಲನೆ ನೀಡಿದರು. ‘ಹಾಗೂ ಸದಸ್ಯರಿಗೆ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಪಶು ಆಹಾರ ಸೈಲೇಜನ್ನು ಸರಬರಾಜು ಮಾಡುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಮಾಡಲಾಗಿದ್ದು ಸದಸ್ಯರು ಇದರ ಸದುಪಯೋಗಪಡಿಸಿಕೊಂಡು ಹೆಚ್ಚಿನ ಹಾಲು ಉತ್ಪಾದನೆಯನ್ನು ಮಾಡುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ದ.ಕ ಹಾಲು ಒಕ್ಕೂಟದ ಉಪವ್ಯವಸ್ಥಾಪಕರು ಡಾ| ಸತೀಶ್ ರಾವ್ ಭಾಗವಹಿಸಿ ಬೆಳ್ತಂಗಡಿ ತಾಲೂಕಿನಲ್ಲಿ ಇದು ಪ್ರಥಮವಾಗಿದ್ದು ನಂದಿನಿ ಪಶು ಆಹಾರ ಉತ್ಕೃಷ್ಟ ಗುಣಮಟ್ಟ ಬಿಐಎಸ್ ಸರ್ಟಿಫಿಕೇಟ್ ಹೊಂದಿದ್ದು ಎಲ್ಲಾ ಸದಸ್ಯರು ನಂದಿನಿ ಪಶು ಆಹಾರವನ್ನು ಉಪಯೋಗಿಸಿ ಜಾನುವಾರು ನಿರ್ವಹಣಾ ವೆಚ್ಚವನ್ನು ಕಡಿತಗೊಳಿಸಬಹುದಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ದ.ಕ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಶ್ರೀಮತಿ ಸುಚಿತ್ರ, ಸಂಘದ ಉಪಾಧ್ಯಕ್ಷ ಬಾಹುಬಲಿ ಜೈನ್, ನಿರ್ದೇಶಕರಾದ ರಮೇಶ್ ಕುಲಾಲ್, ಡೊಂಬಯ್ಯ ಮೂಲ್ಯ ಹಾಗೂ ಕಾರ್ಯದರ್ಶಿ ಸುಭಾಶ್ ಜೈನ್ ಹಾಗೂ ಸಿಬ್ಬಂದಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ಚೀಟಿಗೆ ಇ-ಕೆವೈಸಿ ಕಡ್ಡಾಯ

Suddi Udaya

ಗರ್ಡಾಡಿ: ಸತ್ಯ ಶೋಧಕ ವೇದಿಕೆಯಿಂದ ಹಚ್ಚಾಡಿ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಡಿರುದ್ಯಾವರ : ಶಿರಿಬೈಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಟಾರ್ಗೆಟ್ ಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಐಟಿ ಪೆಸ್ಟ್ ನಲ್ಲಿ ಶ್ರೀ ಗುರುದೇವ ಕಾಲೇಜು ಸಮಗ್ರ ಚಾಂಪಿಯನ್

Suddi Udaya

ಸೆ.23: ಮಡಂತ್ಯಾರು ಪ್ರಾ.ಕೃ.ಪ.ಸ. ಸಂಘದ 50 ರ ಸುವರ್ಣ ಮಹೋತ್ಸವ ಸಂಭ್ರಮ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಇದರ ಉದ್ಘಾಟನಾ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ‌ ಶುಭ ಹಾರೈಸಿದ ಸಹಕಾರ ರತ್ನ ಡಾ‌. ಎಂ.ಎನ್ ರಾಜೇಂದ್ರ ಕುಮಾರ್

Suddi Udaya
error: Content is protected !!