23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿ

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ: ಗಿರೀಶ್ ಮಟ್ಟಣ್ಣನವ‌ರ್, ಜಯಂತ್ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು

ಬೆಳ್ತಂಗಡಿ : ಉಜಿರೆ ತಿಮರೋಡಿ ಮನೆಯಲ್ಲಿ ಮಹೇಶ್ ಶೆಟ್ಟಿ ಬಂಧನ ಮಾಡಲು ಬ್ರಹ್ಮವಾರ ಪೊಲೀಸರು ಹೋದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.

ಯೂಟ್ಯೂಬ್ ಮೂಲಕ ಬಿ.ಎಲ್.ಸಂತೋಷ್ ವಿರುದ್ಧ ಮಹೇಶ್ ಶೆಟ್ಟಿ ತಿಮರೋಡಿ ಅವಹೇಳನಕಾರಿ ಹೇಳಿಕೆ ನೀಡಿದ ವಿರುದ್ಧ ಉಡುಪಿ ಜಿಲ್ಲೆಯ ಬ್ರಹ್ಮವಾರ ಪೊಲೀಸ್ ಠಾಣೆಯಲ್ಲಿ ಆ.18 ರಂದು ರಾಜೀವ್ ಕುಲಾಲ್ ದಾಖಲಾದ ಪ್ರಕರಣದಲ್ಲಿ ಆ.21 ರಂದು ಠಾಣೆಗೆ ಹಾಜರಾಗಲು ನೋಟಿಸ್ ನೀಡಿದ್ರೂ ಮಹೇಶ್ ಶೆಟ್ಟಿ ತಿಮರೋಡಿ ಹಾಜರಾಗದ ಹಿನ್ನಲೆಯಲ್ಲಿ ಆ.21 ರಂದು ಬೆಳಗ್ಗೆ ಉಜಿರೆ ತಿಮರೋಡಿ ಮನೆಯಲ್ಲಿ ಬ್ರಹ್ಮವಾರ ಪೊಲೀಸರು ಬಂಧನ ಮಾಡಲು ಬಂದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಆ.21 ರಂದು ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಬ್ರಹ್ಮವಾರ ಪೊಲೀಸ್ ಠಾಣೆಯ ಸಬ್ ಇನ್ಸೆಕ್ಟ‌ರ್ ಅಶೋಕ್‌ ಮಲಬಾಗಿಲು ಅವರು ದೂರು ನೀಡಿದ್ದು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣಣವರ್, ಜಯಂತ್.ಟಿ ಹಾಗೂ ಇತರ 10-15 ಮಂದಿ ಇಲಾಖಾ ಕರ್ತವ್ಯ ನಿರ್ವಹುಸದಂತೆ ಬಲಪ್ರಯೋಗ ಮಾಡಿ ಅಡ್ಡಿಪಡಿಸಿದ್ದಾರೆ, ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರವಾಗಿ ಸಂದೇಶಗಳನ್ನು ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ, ಅಲ್ಲದೆ ಮಹೇಶ್ ಶೆಟ್ಟಿಯನ್ನು ವಶಕ್ಕೆ ಪಡೆದ ಬಳಿಕ ಇಲಾಖಾ ವಾಹನದಲ್ಲಿ ಬರಲು ನಿರಾಕರಿಸಿದ್ದು ಖಾಸಗಿ ಕಾರಿನಲ್ಲಿ ಬಂದಿದ್ದು ಈ ವೇಳೆ ಸ್ಥಳದಲ್ಲಿ ನೆರೆದಿದ್ದ 10ರಿಂದ 15 ಮಂದಿ ಕಾರುಗಳನ್ನು ಹಿಂಬಾಲಿಸಿ ಬಂದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ದೂರು ನೀಡಿದ್ದು ಅದರಂತೆ ಆರೋಪಿಗಳ ವಿರುದ್ಧ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಬಗ್ಗೆ ಆ.22 ರಂದು ಬೆಳ್ತಂಗ ಪೊಲೀಸ್‌ ಠಾಣೆಯಲ್ಲಿ
132,189(2),351(2), 263a, 190, 262, ರಂತೆ ಪ್ರಕರಣ ದಾಖಲಾಗಿದೆ.

Related posts

ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಗುಡ್ಡದಲ್ಲಿ ಅಪರಿಚಿತ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ :ಆಶ್ರಮದಿಂದ ಕಾಣೆಯಾಗಿದ್ದ ವ್ಯಕ್ತಿಯದೆಂದು ಶಂಕೆ

Suddi Udaya

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

Suddi Udaya

ಪತ್ರಕರ್ತ ಭುವನೇಶ್ ಗೇರುಕಟ್ಟೆಯವರಿಂದ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಕೇಶದಾನ

Suddi Udaya

ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya
error: Content is protected !!