September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿ

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ: ಗಿರೀಶ್ ಮಟ್ಟಣ್ಣನವ‌ರ್, ಜಯಂತ್ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು

ಬೆಳ್ತಂಗಡಿ : ಉಜಿರೆ ತಿಮರೋಡಿ ಮನೆಯಲ್ಲಿ ಮಹೇಶ್ ಶೆಟ್ಟಿ ಬಂಧನ ಮಾಡಲು ಬ್ರಹ್ಮವಾರ ಪೊಲೀಸರು ಹೋದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.

ಯೂಟ್ಯೂಬ್ ಮೂಲಕ ಬಿ.ಎಲ್.ಸಂತೋಷ್ ವಿರುದ್ಧ ಮಹೇಶ್ ಶೆಟ್ಟಿ ತಿಮರೋಡಿ ಅವಹೇಳನಕಾರಿ ಹೇಳಿಕೆ ನೀಡಿದ ವಿರುದ್ಧ ಉಡುಪಿ ಜಿಲ್ಲೆಯ ಬ್ರಹ್ಮವಾರ ಪೊಲೀಸ್ ಠಾಣೆಯಲ್ಲಿ ಆ.18 ರಂದು ರಾಜೀವ್ ಕುಲಾಲ್ ದಾಖಲಾದ ಪ್ರಕರಣದಲ್ಲಿ ಆ.21 ರಂದು ಠಾಣೆಗೆ ಹಾಜರಾಗಲು ನೋಟಿಸ್ ನೀಡಿದ್ರೂ ಮಹೇಶ್ ಶೆಟ್ಟಿ ತಿಮರೋಡಿ ಹಾಜರಾಗದ ಹಿನ್ನಲೆಯಲ್ಲಿ ಆ.21 ರಂದು ಬೆಳಗ್ಗೆ ಉಜಿರೆ ತಿಮರೋಡಿ ಮನೆಯಲ್ಲಿ ಬ್ರಹ್ಮವಾರ ಪೊಲೀಸರು ಬಂಧನ ಮಾಡಲು ಬಂದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಆ.21 ರಂದು ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಬ್ರಹ್ಮವಾರ ಪೊಲೀಸ್ ಠಾಣೆಯ ಸಬ್ ಇನ್ಸೆಕ್ಟ‌ರ್ ಅಶೋಕ್‌ ಮಲಬಾಗಿಲು ಅವರು ದೂರು ನೀಡಿದ್ದು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣಣವರ್, ಜಯಂತ್.ಟಿ ಹಾಗೂ ಇತರ 10-15 ಮಂದಿ ಇಲಾಖಾ ಕರ್ತವ್ಯ ನಿರ್ವಹುಸದಂತೆ ಬಲಪ್ರಯೋಗ ಮಾಡಿ ಅಡ್ಡಿಪಡಿಸಿದ್ದಾರೆ, ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರವಾಗಿ ಸಂದೇಶಗಳನ್ನು ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ, ಅಲ್ಲದೆ ಮಹೇಶ್ ಶೆಟ್ಟಿಯನ್ನು ವಶಕ್ಕೆ ಪಡೆದ ಬಳಿಕ ಇಲಾಖಾ ವಾಹನದಲ್ಲಿ ಬರಲು ನಿರಾಕರಿಸಿದ್ದು ಖಾಸಗಿ ಕಾರಿನಲ್ಲಿ ಬಂದಿದ್ದು ಈ ವೇಳೆ ಸ್ಥಳದಲ್ಲಿ ನೆರೆದಿದ್ದ 10ರಿಂದ 15 ಮಂದಿ ಕಾರುಗಳನ್ನು ಹಿಂಬಾಲಿಸಿ ಬಂದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ದೂರು ನೀಡಿದ್ದು ಅದರಂತೆ ಆರೋಪಿಗಳ ವಿರುದ್ಧ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಬಗ್ಗೆ ಆ.22 ರಂದು ಬೆಳ್ತಂಗ ಪೊಲೀಸ್‌ ಠಾಣೆಯಲ್ಲಿ
132,189(2),351(2), 263a, 190, 262, ರಂತೆ ಪ್ರಕರಣ ದಾಖಲಾಗಿದೆ.

Related posts

ನಾಳ: ದ್ವಿತೀಯ ವರ್ಷದ ಶ್ರೀ ದುರ್ಗಾ ಕಪ್ ಹಿರಿಯರ ಕ್ರಿಕೆಟ್ ಪಂದ್ಯಾಟ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಅಳದಂಗಡಿ: ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದ ಕಾರ್ಯಕಾರಿ ಸಭೆ

Suddi Udaya

ನಿರೂಪಕ ಅಜಿತ್ ಕೊಕ್ರಾಡಿ ಯವರಿಗೆ ” ನಿರೂಪಣಾ ರತ್ನ ರಾಜ್ಯ ಪ್ರಶಸ್ತಿ -2026″

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಕಾರ್ಯಕ್ರಮ

Suddi Udaya

ಉರುವಾಲು: ಗ್ರಾಮ ದೈವಗಳಿಗೆ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya
error: Content is protected !!