September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಪುಟ್ ಬಾಲ್ ಪಂದ್ಯಾಟ

ಮಡಂತ್ಯಾರು: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ) ಮಂಗಳೂರು ದ.ಕ ಹಾಗೂ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜು ಮಡಂತ್ಯಾರು ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಬಾಲಕರ ಪುಟ್ ಬಾಲ್ ಪಂದ್ಯಾಟವು ಜರಗಿತು.

ಮಡಂತ್ಯಾರು ಸೇಕ್ರೆಡ್ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಪಡ್ಪು ಪಂದ್ಯಾಟವನ್ನು ಉದ್ಘಾಟಿಸಿದರು. ಪುಟ್ಬಾಲ್ ಆಟ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ನೀಡುವುದರ ಜೊತೆಗೆ ಶಾರೀರಿಕ ಹತೋಟಿಯನ್ನು ನೀಡುತ್ತದೆ. ಪುಟ್ಬಾಲ್ ವಿಶ್ವದಲ್ಲೇ ಪ್ರಥಮ ಸ್ಥಾನ ಪಡೆದ ಕ್ರೀಡೆಯಾಗಿದೆ. ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ.ಎರಡನ್ನು ಸ್ವೀಕರಿಸುವ ಮನೋಭಾವವನ್ನು ಕ್ರೀಡಾ ಪಟುಗಳು ಬೆಳೆಸಿಕೊಳ್ಳಬೇಕು.ತಾಲೂಕು ಮಟ್ಟದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಪಟುಗಳು ಸಾಧನೆ ಮಾಡುವಂತಾಗಲೆಂದು ಅವರು ಶುಭಹಾರೈಸಿದರು.

ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ಜೊತೆ ಕಾರ್ಯದರ್ಶಿ ವಂ|ಡಾ| ಸ್ಟ್ಯಾನಿ ಗೋವಿಯಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸೇಕ್ರೆಡ್ ಹಾರ್ಟ್ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಜೆರಾಲ್ಡ್ ಮೋರಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು, ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸೂರಜ್ ಚಾರ್ಲ್ಸ್ ನ್ಯೂನೆಸ್ ಸ್ವಾಗತಿಸಿ, ಉಪನ್ಯಾಸಕರಾದ ವಸಂತ್ ಶೆಟ್ಟಿ ವಂದಿಸಿ,ಕಾರ್ಯಕ್ರಮ ನಿರೂಪಿಸಿದರು.


ಫಲಿತಾಂಶ:
ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು ಮಡಂತ್ಯಾರು ಪ್ರಥಮ ಸ್ಥಾನ ಹಾಗೂ ಎಸ್.ಡಿ.ಎಂ ಪಿಯು
ಕಾಲೇಜು ಉಜಿರೆ ದ್ವಿತೀಯ ಸ್ಥಾನ ಪಡೆಯಿತು. ಸಮಾರೋಪ ಕಾರ್ಯಕ್ರಮದಲ್ಲಿ.ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸೂರಜ್ ಚಾರ್ಲ್ಸ್ ನ್ಯೂನೆಸ್ ಬಹುಮಾನ ವಿತರಿಸಿದರು.ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡೆನ್ನಿಸ್ ಫೆರ್ನಾಂಡಿಸ್ ಹಾಗೂ ಸಂಜಿತ್ ಕುಮಾರ್ ಶೆಟ್ಟಿ, ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಪಂದ್ಯಾಟದ ಯಶಸ್ಸಿಗೆ ಸಹಕರಿಸಿದರು.

Related posts

ಆ 9-15 ಬೆಳ್ತಂಗಡಿಯಲ್ಲಿ ಶ್ರೀಮದ್ ಭಾಗವತ ಪ್ರವಚನ ಸಪ್ತಾಹ,

Suddi Udaya

ಜಿಯೋ ಭಾರತ್ 4g ಮೊಬೈಲ್ ಕೇವಲ 999 ಕ್ಕೆ

Suddi Udaya

ಬೆಳ್ತಂಗಡಿ: ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಸಹಾಯಧನ ವಿತರಣೆ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ.ಶಾಲೆಯ ವಿದ್ಯಾರ್ಥಿ ಚಾರ್ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya
error: Content is protected !!