September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಯೂಟ್ಯೂಬರ್ ಸಮೀರ್ ಎಮ್.ಡಿ ವಿಚಾರಣೆಗೆ ಹಾಜರಾಗಲು ನೋಟಿಸ್‌ ಜಾರಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪ್ರಕರಣಗಳಿಗೆ ಸಂಬಂಧಿಸಿದಂತೆ ಯೂಟ್ಯೂಬ‌ರ್ ಸಮೀರ್ ಗೆ ಬೆಳ್ತಂಗಡಿ ಠಾಣೆಗೆ ಆ.23ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಬಗ್ಗೆ ದೂರುದಾರನ ಮಾಹಿತಿ ರಿವಿಲ್ ಮಾಡಿದ್ದು, ಕಾಲ್ಪನಿಕ ಮಾಹಿತಿಗಳನ್ನು ಮಾಡಿಟ್ಟು ದೂತ ಎಂಬ ಯೂಟ್ಯೂಬ್ ನಲ್ಲಿ ಸಮೀರ್ ಎಮ್.ಡಿ ವಿಡಿಯೋ ಪ್ರಸಾರ ಮಾಡಿದ ಬಗ್ಗೆ ಜು.12 ರಂದು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ಧರ್ಮಸ್ಥಳ ಪೊಲೀಸರು ಮೂರು ಭಾರಿ ನೋಟಿಸ್‌ ನೀಡಿದರೂ ವಿಚಾರಣೆಗೆ ಹಾಜರಾಗದೆ ಇರುವ ಕಾರಣ ಆ.21 ರಂದು ಧರ್ಮಸ್ಥಳ ಪೊಲೀಸರು ಬೆಂಗಳೂರು ಬಾಡಿಗೆ ಮನೆಯಿಂದ ಬಂಧಿಸಲು ಹೋಗಿದ್ದು, ಈ ವೇಳೆಗೆ ಅದೇ ದಿನ ಸಂಜೆ ಮಂಗಳೂರು ಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು. ನಿರೀಕ್ಷಣಾ ಜಾಮೀನು ನೀಡುವ ವೇಳೆ ಕೋರ್ಟ್ ಹಲವು ಷರತ್ತು ವಿಧಿಸಿದ್ದ. ಪೊಲೀಸರ ವಿಚಾರಣೆಗೆ ಹಾಜರಾಗಬೇಕು, ಸಾಕ್ಷಿ ನಾಶ ಮಾಡಬಾರದೆಂದು ಕೋರ್ಟ್ ಷರತ್ತು ವಿಧಿಸಿತ್ತು. ಅದರಂತೆ ಧರ್ಮಸ್ಥಳ ಪೊಲೀಸರ ವಿಚಾರಣೆ ಬಾಕಿ ಇರುವ ಕಾರಣದಿಂದ ಆ.22 ರಂದು ಮತ್ತೆ ಸಮೀರ್ ಎಮ್.ಡಿ ಗೆ ವಿಚಾರಣೆಗೆ ಆ.23 ರಂದು 10 ಗಂಟೆಗೆ ಧರ್ಮಸ್ಥಳ ಪೊಲೀಸ್ ಠಾಣೆ ಅಥವಾ ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ಕಚೇರಿಗೆ ಖುದ್ದು ಹಾಜರಾಗಿ ವಿಚಾರಣೆ ಎದುರಿಸಲು ನೋಟಿಸ್ ಜಾರಿ ಮಾಡಿದ್ದಾರೆ.

Related posts

ಗೀತೆ ಜತೆ ಸಾಹಿತ್ಯ ಸಾಂಗತ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ಮೂರನೆಯ ಅಧ್ಯಾಯ

Suddi Udaya

ಧರ್ಮಸ್ಥಳದ ಬುರುಡೆ ಷಡ್ಯಂತ್ರದಲ್ಲಿ ಯೂಟ್ಯೂಬರ್ ಗಳ ಕೈವಾಡ : ಪ್ರಶಾಂತ್ ಸಂಬರಗಿಯಿಂದ ಎಸ್.ಐ.ಟಿಗೆ ದೂರು

Suddi Udaya

ಮಡಂತ್ಯಾರು ಜೆಸಿಐ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ಆಚರಣೆ

Suddi Udaya

ದೇಹದಾನ ನೋಂದಣಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದ ವಸಂತ ಪೂಜಾರಿ ಮತ್ತು ಸುಶೀಲ ಹೆಗ್ಡೆ

Suddi Udaya

ಬೆಳ್ತಂಗಡಿ ಲಯನ್ಸ್ ಲಿಯೋ ಕ್ಲಬ್ ಅಧ್ಯಕ್ಷರಾಗಿ ಭಾಷಿನಿ, ಕಾರ್ಯದರ್ಶಿಯಾಗಿ ದೀಕ್ಷಿತ್ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!