March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

ಬೆಳ್ತಂಗಡಿ : ಇಲ್ಲಿಯ ಹುಣ್ಸೆಕಟ್ಟೆಯಲ್ಲಿ ಜಿಂಕೆಯೊಂದು ಗಾಯವಾಗಿ ಬಿದ್ದಿದ್ದು ಅರಣ್ಯ ಇಲಾಖಾ ಸಿಬ್ಬಂದಿಗಳು ಕ್ಲಪ್ತ ಸಮಯದಲ್ಲಿ ಧಾವಿಸಿ ಮುಂದಿನ ಚಿಕಿತ್ಸೆ ಗಾಗಿ ಕಳುಹಿಸಿ ಕೊಡಲಾಯಿತು.

ಅತೀ ಹೆಚ್ಚು ನಾಯಿಗಳ ಕಾಟದಿಂದ ಈ ಘಟನೆ ಸಂಭವಿಸಿದ್ದು, ನಾಯಿಗಳು ಕಾಡಿನಿಂದ ಅಟ್ಟಾಡಿಸಿ ನಾರಾಯಣ ಪೂಜಾರಿ ಯವರ ಮನೆಯ ಸಮೀಪವಿರುವ ಬಟ್ಟೆ ಒಗೆಯುವ ಕಲ್ಲಿಗೆ ತಾಗಿ ಗಾಯಗೊಂಡಿದೆ ಎನ್ನಲಾಗಿದೆ. ಘಟನೆಯ ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಂದಿದ್ದು ಜಿಂಕೆಯನ್ನು ರವಾನಿಸಿದ್ದಾರೆ. ಹಲವು ದಿನಗಳಿಂದ ಈ ಭಾಗದಲ್ಲಿ ಬೀದಿ ನಾಯಿಗಳಿಂದ ಊರಿನವರಿಗೆ ಮತ್ತು ಕಾಡು ಪ್ರಾಣಿಗಳಿಗೂ ಸಮಸ್ಯೆ ಆಗುತ್ತಿದೆ.

15ಕ್ಕಿಂತ ಹೆಚ್ಚು ನಾಯಿಗಳು ಈ ಪ್ರದೇಶದಲ್ಲಿದ್ದು, ಶಾಲೆಗೆ ತೆರಳುವ ಮಕ್ಕಳನ್ನು ಅಟ್ಟಾಡಿಸಿಕೊಂಡು ಹೋಗುತ್ತಿದ್ದು, ಪಾದಾಚಾರಿಗಳು, ಮಕ್ಕಳು ಭಯದಿಂದ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ನಗರ ಪಂಚಾಯತ್ ಇದರ ಬಗ್ಗೆ ತಕ್ಷಣ ಕ್ರಮ ಕೈ ಗೊಳ್ಳುವಂತೆ ಸ್ಥಳೀಯರ ಆಗ್ರಹಿಸಿದ್ದಾರೆ.

Related posts

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್, ನಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟರ್ಸ್ ವತಿಯಿಂದ ಪೂಲ್ ಕ್ಯಾಂಪಸ್ ಡ್ರೈವ್

Suddi Udaya

ಶಿಶಿಲ: ಅಡ್ಡಹಳ್ಳ ನಿವಾಸಿ ಡೀಕಯ್ಯ ಗೌಡ ರವರ ಮನೆ ಮೇಲೆ ಮರ ಬಿದ್ದು ಹಾನಿ

Suddi Udaya

ಎಸ್‌ಜಿಎಫ್‌ಐ ರಾಷ್ಟ್ರೀಯ ಕಬಡ್ಡಿ ಪಂದ್ಯಾಟ: ರಾಜ್ಯ ಪ್ರತಿನಿಧಿಸಲಿರುವ ಉಜಿರೆಯ ಎಸ್.ಡಿ.ಎಂ ತಂಡ

Suddi Udaya

ಕೊಕ್ಕಡ ಟೀಂ ಸುಹಾಸ್ ಶೆಟ್ಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya

ನೆರಿಯ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಸರೋಜಾ ನಿವೃತ್ತಿ

Suddi Udaya
error: Content is protected !!