September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

ಬೆಳ್ತಂಗಡಿ : ಇಲ್ಲಿಯ ಹುಣ್ಸೆಕಟ್ಟೆಯಲ್ಲಿ ಜಿಂಕೆಯೊಂದು ಗಾಯವಾಗಿ ಬಿದ್ದಿದ್ದು ಅರಣ್ಯ ಇಲಾಖಾ ಸಿಬ್ಬಂದಿಗಳು ಕ್ಲಪ್ತ ಸಮಯದಲ್ಲಿ ಧಾವಿಸಿ ಮುಂದಿನ ಚಿಕಿತ್ಸೆ ಗಾಗಿ ಕಳುಹಿಸಿ ಕೊಡಲಾಯಿತು.

ಅತೀ ಹೆಚ್ಚು ನಾಯಿಗಳ ಕಾಟದಿಂದ ಈ ಘಟನೆ ಸಂಭವಿಸಿದ್ದು, ನಾಯಿಗಳು ಕಾಡಿನಿಂದ ಅಟ್ಟಾಡಿಸಿ ನಾರಾಯಣ ಪೂಜಾರಿ ಯವರ ಮನೆಯ ಸಮೀಪವಿರುವ ಬಟ್ಟೆ ಒಗೆಯುವ ಕಲ್ಲಿಗೆ ತಾಗಿ ಗಾಯಗೊಂಡಿದೆ ಎನ್ನಲಾಗಿದೆ. ಘಟನೆಯ ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಂದಿದ್ದು ಜಿಂಕೆಯನ್ನು ರವಾನಿಸಿದ್ದಾರೆ. ಹಲವು ದಿನಗಳಿಂದ ಈ ಭಾಗದಲ್ಲಿ ಬೀದಿ ನಾಯಿಗಳಿಂದ ಊರಿನವರಿಗೆ ಮತ್ತು ಕಾಡು ಪ್ರಾಣಿಗಳಿಗೂ ಸಮಸ್ಯೆ ಆಗುತ್ತಿದೆ.

15ಕ್ಕಿಂತ ಹೆಚ್ಚು ನಾಯಿಗಳು ಈ ಪ್ರದೇಶದಲ್ಲಿದ್ದು, ಶಾಲೆಗೆ ತೆರಳುವ ಮಕ್ಕಳನ್ನು ಅಟ್ಟಾಡಿಸಿಕೊಂಡು ಹೋಗುತ್ತಿದ್ದು, ಪಾದಾಚಾರಿಗಳು, ಮಕ್ಕಳು ಭಯದಿಂದ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ನಗರ ಪಂಚಾಯತ್ ಇದರ ಬಗ್ಗೆ ತಕ್ಷಣ ಕ್ರಮ ಕೈ ಗೊಳ್ಳುವಂತೆ ಸ್ಥಳೀಯರ ಆಗ್ರಹಿಸಿದ್ದಾರೆ.

Related posts

ಎಕ್ಸೆಲ್ ಕಾಲೇಜಿನಲ್ಲಿ ನ್ಯೂಸ್ 18 ವತಿಯಿಂದ ವಿದ್ಯಾದೀಪ ವಿಶೇಷ ಕಾರ್ಯಕ್ರಮ

Suddi Udaya

ವಿಶ್ವ ವೈದ್ಯರ ದಿನಾಚರಣೆ: ಉಪ್ಪಿನಂಗಡಿಯ ವೈದ್ಯರಿಗೆ ಯುವವಾಹಿನಿ ಉಪ್ಪಿನಂಗಡಿ ಘಟಕದ ವತಿಯಿಂದ ಗೌರವಾರ್ಪಣೆ

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

Suddi Udaya

ಆ.30: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya

ಎಸ್.ಕೆ.ಎಸ್.ಎಸ್.ಎಫ್ ಬೊಳ್ಮನಾರ್ ಶಾಖೆಯ ವತಿಯಿಂದ ಕೆಮ್ಮಟೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!