23.7 C
ಪುತ್ತೂರು, ಬೆಳ್ತಂಗಡಿ
April 24, 2026
ಶಾಲಾ ಕಾಲೇಜು

ಕರ್ನೋಡಿ ಸ.ಉ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಖೋ ಖೋ ಪಂದ್ಯಾಟ

ಲಾಯಿಲ: ಕರ್ನೋಡಿ ಸ.ಉ.ಪ್ರಾ. ಶಾಲೆಯಲ್ಲಿ ಬೆಳ್ತಂಗಡಿ ಹಾಗೂ ಬಂಗಾಡಿ ವಲಯ ಮಟ್ಟದ ಖೋ ಖೋ ಪಂದ್ಯಾಟವು ಆ.22ರಂದು ನಡೆಯಿತು.ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮವನ್ನು ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಎಂ.ಕೆ. ಅವರು ದೀಪ ಪ್ರಜ್ವಲಿಸಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷರಾಗಿ ಎಸ್‌ಡಿಎಂಸಿ ಉಪಾಧ್ಯಕ್ಷೆ ವಿಜಯ, ಮುಖ್ಯ ಅತಿಥಿಗಳಾಗಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಸುರೇಶ್ ಶೆಟ್ಟಿ ಲಾಯಿಲ, ತಾಲೂಕು ದೈ. ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಜಯ, ವಲಯ ಕ್ರೀಡಾ ಸಂಯೋಜಕ ಅಖಿಲ್ ಕುಮಾರ್, CRP ವಾರಿಜಾ ಹಾಗೂ ಶಾಲಾ ಮುಖ್ಯ ಶಿಕ್ಷಕ ಜಗನ್ನಾಥ್ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಗಂಗಾರಾಣಿ ನಿರೂಪಿಸಿ, ಮುಖ್ಯ ಶಿಕ್ಷಕ ಜಗನ್ನಾಥ್ ಎಂ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ತ್ರಿಶಾಲ ರವರು ಧನ್ಯವಾದವಿತ್ತರು.

ಖೋ ಖೋ ಪಂದ್ಯಾಟದ ಸಮಾರೋಪ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ ವಹಿಸಿದ್ದರು.ವೇದಿಕೆಯಲ್ಲಿ ಗ್ರಾ.ಪಂ. ಸದಸ್ಯರೂ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗಣೇಶ್ ಆರ್, ಕ್ರೀಡಾ ವಲಯ ಸಂಯೋಜಕ ಅಖಿಲ್ ಕುಮಾರ್, SDMC ಅಧ್ಯಕ್ಷೆ ಸೌಮ್ಯ, ಮುಖ್ಯ ಶಿಕ್ಷಕ ಜಗನ್ನಾಥ ಎಂ, ದೈ. ಶಿ. ಶಿಕ್ಷಕಿ ತ್ರಿಶಾಲರವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಹಾಗೂ ಬಂಗಾಡಿ ವಲಯದ ಹಲವು ಶಾಲೆಗಳು ಭಾಗವಹಿಸಿದ್ದು, ಬಾಲಕರ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಕೊಯ್ಯೂರು ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಸ. ಹಿ ಪ್ರಾ ಶಾಲೆ ಕೊಯ್ಯೂರು ಪಡೆದುಕೊಂಡಿತು. ಬಾಲಕಿಯರ ವಿಭಾಗದಲ್ಲಿ ಸ.ಉ ಪ್ರಾ ಶಾಲೆ ಕೊಯ್ಯೂರು ಪ್ರಥಮ ಸ್ಥಾನವನ್ನು ಪಡೆದು, ದ್ವಿತೀಯ ಸ್ಥಾನವನ್ನು ಸ.ಉ ಪ್ರಾ. ಶಾಲೆ ಕರ್ನೋಡಿ ಗಳಿಸಿತು. ಈ ಸಂದರ್ಭದಲ್ಲಿ ಶಾಲೆಗಳ ಪೋಷಕರು, ಎಸ್ ಡಿ ಎಂ ಸಿ ಪದಾಧಿಕಾರಿಗಳು, ಶಿಕ್ಷಕರು ಭಾಗವಹಿಸಿದ್ದರು.

ಶಿಕ್ಷಣ ಇಲಾಖೆ, ಸ.ಉ.ಪ್ರಾ. ಶಾಲೆ ಕರ್ನೋಡಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ನಡೆದ ಈ ಕಾರ್ಯಕ್ರಮವನ್ನು ಶಿಕ್ಷಕ ಕೃಷ್ಣಕುಮಾರ್ ನಿರೂಪಿಸಿ, ಶಿಕ್ಷಕಿಯರಾದ ಮಮತಾ ಕೆ ಸ್ವಾಗತಿಸಿ, ಉಷಾ ಕೆ ಧನ್ಯವಾದವಿತ್ತರು.

Related posts

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

Suddi Udaya

ಕಟ್ಟದಬೈಲು ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿಯ ನೂತನ ಅಧ್ಯಕ್ಷರಾಗಿ ರತ್ನಾಕರ ಆಚಾರ್ಯ ಉಪಾಧ್ಯಕ್ಷರಾಗಿ ದೀಪಾ ಎಸ್ ಮೇಚೆರಿ ಆಯ್ಕೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ “ಸುವರ್ಣ ಸಮ್ಮಿಲನ”: ಮೋಹನ್ ಕುಮಾರ್ ಹಾಗೂ ರವಿ ಕಟಪಾಡಿ ಯವರಿಗೆ ಸುವರ್ಣ ಸೇವಾ ರತ್ನ ಪ್ರಶಸ್ತಿ ಪ್ರದಾನ: ಸೇವಾ ಪಥ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ತೆಕ್ಕಾರು: ಕುಟ್ಟಿಗಳ ಬಜಾರ್ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕ್ರಿಕೆಟ್ ಆಟಗಾರ ಯೋಗೀಶ್ ಶೆಟ್ಟಿ ಸಂಬೋಳ್ಯ ನಿಧನ

Suddi Udaya

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
error: Content is protected !!