22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿ

ನದಿಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಸಾವು

ಮುಂಡಾಜೆ: ನದಿಗೆ ಬಲೆಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವರ ಮೃತದೇಹ ಸ್ಥಳೀಯ ತೋಟವೊಂದರಲ್ಲಿ ಪತ್ತೆಯಾದ ಘಟನೆ ಆ.21ರಂದು ಮುಂಡಾಜೆಯಲ್ಲಿ ನಡೆದಿದೆ.ಮುಂಡಾಜೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ಚೆನ್ನಿಗುಡ್ಡೆ ನಿವಾಸಿ ಪೂವಪ್ಪ ನಾಯ್ಕ(7೦ವ) ಅಸಹಜವಾಗಿ ಮೃತಪಟ್ಟವರಾಗಿದ್ದಾರೆ.

ಈ ಬಗ್ಗೆ ಮೃತರ ಪುತ್ರ ದಿನೇಶ್ ನಾಯ್ಕ ಧರ್ಮಸ್ಥಳ ಠಾಣೆಗೆ ನೀಡಿದ ದೂರಿನಂತೆ ನನ್ನ ತಂದೆ ಪೂವಪ್ಪ ನಾಯ್ಕ ಅವರು ಆ.21 ರಂದು ಮಧ್ಯಾಹ್ನ 3 ಗಂಟೆಗೆ ಮುಂಡಾಜೆ ಗ್ರಾಮದ ಮುಂಡ್ರುಪ್ಪಾಡಿ ಸೇತುವೆಯ ಮೃತ್ಯುಂಜಯ ನದಿಗೆ ಮೀನು ಹಿಡಿಯಲೆಂದು ಬಲೆ ಹಿಡಿದುಕೊಂಡು ಹೋಗಿ ನದಿಯ ಸೇತುವೆ ಅಡಿಯಲ್ಲಿ ಬಲೆ ಹಾಕಿ ನನ್ನನ್ನು ಅಲ್ಲೇ ನಿಲ್ಲಿಸಿ, ಬೇರೆ ಸ್ಥಳದಲ್ಲಿ ಬಲೆ ಹಾಕಿ ಮೀನು ಹಿಡಿದುಕೊಂಡು ಸಂಜೆ 6.30 ಕ್ಕೆ ಬಂದವರು, ಡ್ಯಾಂ ಬಳಿ ಹಾಕಿದ ಬಲೆ ತೆಗೆಯಯಲೆಂದು ವಾಪಾಸ್ಸು ಹೋದವರು ರಾತ್ರಿ 7.30 ತನಕವೂ ಹಿಂತಿರುಗಿ ಬಾರದೇ ಇದ್ದುದರಿಂದ, ಕೂಗಿ ಕರೆದರೂ ಯಾವುದೇ ಉತ್ತರ ಬಾರದೇ ಇದ್ದು, ಈ ವಿಚಾರವನ್ನು ಮನೆಯವರಿಗೆ ,ನೆರೆಕರೆಯವರಿಗೆ ಹಾಗೂ ಸಂಬಂದಿಕರಿಗೆ ತಿಳಿಸಿ, ಹುಡುಕಾಡಿದಾಗ ರಾತ್ರಿ ತಂದೆ ಪೂವಪ್ಪ ನಾಯ್ಕರು ನದಿ ಬದಿಯಲ್ಲಿರುವ ಮುಂಡಾಜೆ ಗ್ರಾಮದ ಮುಂಡ್ರುಪ್ಪಾಡಿ ಸಂಜೀವ ಶೆಟ್ಟಿಯವರ ಅಡಿಕೆ ತೋಟದಲ್ಲಿ ಬಿದ್ದುಕೊಂಡಿದ್ದವರನ್ನು ಉಪಚರಿಸಿ ನೋಡಿದಾಗ ಬಾಯಲ್ಲಿ ನೊರೆ ಬಂದಿದ್ದು, ಮೃತ ಪಟ್ಟಿರುವುದು ಕಂಡು ಬಂದಿರುತ್ತದೆ ಎಂದು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2023-24ನೆಯ ಸಾಲಿನಲ್ಲಿ ದಾಖಲೆಯ ನೇರ ನೇಮಕಾತಿಯ ಮೂಲಕ ಉದ್ಯೋಗಾವಕಾಶ

Suddi Udaya

ಬೆಳ್ತಂಗಡಿ: ಮಾತೃ ವೃಂದ ಶಿಶುಪಾಲನ ಕೇಂದ್ರ ಉದ್ಘಾಟನೆ

Suddi Udaya

ಹುಣ್ಸೆಕಟ್ಟೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ 26ನೇ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.92.89 ಕೋಟಿ ವಾರ್ಷಿಕ ವ್ಯವಹಾರ, ರೂ.43 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya

ರಾಜ್ಯಮಟ್ಟದ ಎಸ್ ಡಿ ಎಂ ಬಿ.ವೊಕ್ ಉತ್ಸವ : ವಾಣಿ ಪ. ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ನೈಋತ್ಯ ರೈಲ್ವೆಯ ಡಿಆರ್‌ಯುಸಿಸಿ ಸದಸ್ಯರಾಗಿ ಬಂಗಾಡಿಯ ರಾಜೇಶ್ ಪುದುಶೇರಿ ನೇಮಕ

Suddi Udaya
error: Content is protected !!