23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿ

ನದಿಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಸಾವು

ಮುಂಡಾಜೆ: ನದಿಗೆ ಬಲೆಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವರ ಮೃತದೇಹ ಸ್ಥಳೀಯ ತೋಟವೊಂದರಲ್ಲಿ ಪತ್ತೆಯಾದ ಘಟನೆ ಆ.21ರಂದು ಮುಂಡಾಜೆಯಲ್ಲಿ ನಡೆದಿದೆ.ಮುಂಡಾಜೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ಚೆನ್ನಿಗುಡ್ಡೆ ನಿವಾಸಿ ಪೂವಪ್ಪ ನಾಯ್ಕ(7೦ವ) ಅಸಹಜವಾಗಿ ಮೃತಪಟ್ಟವರಾಗಿದ್ದಾರೆ.

ಈ ಬಗ್ಗೆ ಮೃತರ ಪುತ್ರ ದಿನೇಶ್ ನಾಯ್ಕ ಧರ್ಮಸ್ಥಳ ಠಾಣೆಗೆ ನೀಡಿದ ದೂರಿನಂತೆ ನನ್ನ ತಂದೆ ಪೂವಪ್ಪ ನಾಯ್ಕ ಅವರು ಆ.21 ರಂದು ಮಧ್ಯಾಹ್ನ 3 ಗಂಟೆಗೆ ಮುಂಡಾಜೆ ಗ್ರಾಮದ ಮುಂಡ್ರುಪ್ಪಾಡಿ ಸೇತುವೆಯ ಮೃತ್ಯುಂಜಯ ನದಿಗೆ ಮೀನು ಹಿಡಿಯಲೆಂದು ಬಲೆ ಹಿಡಿದುಕೊಂಡು ಹೋಗಿ ನದಿಯ ಸೇತುವೆ ಅಡಿಯಲ್ಲಿ ಬಲೆ ಹಾಕಿ ನನ್ನನ್ನು ಅಲ್ಲೇ ನಿಲ್ಲಿಸಿ, ಬೇರೆ ಸ್ಥಳದಲ್ಲಿ ಬಲೆ ಹಾಕಿ ಮೀನು ಹಿಡಿದುಕೊಂಡು ಸಂಜೆ 6.30 ಕ್ಕೆ ಬಂದವರು, ಡ್ಯಾಂ ಬಳಿ ಹಾಕಿದ ಬಲೆ ತೆಗೆಯಯಲೆಂದು ವಾಪಾಸ್ಸು ಹೋದವರು ರಾತ್ರಿ 7.30 ತನಕವೂ ಹಿಂತಿರುಗಿ ಬಾರದೇ ಇದ್ದುದರಿಂದ, ಕೂಗಿ ಕರೆದರೂ ಯಾವುದೇ ಉತ್ತರ ಬಾರದೇ ಇದ್ದು, ಈ ವಿಚಾರವನ್ನು ಮನೆಯವರಿಗೆ ,ನೆರೆಕರೆಯವರಿಗೆ ಹಾಗೂ ಸಂಬಂದಿಕರಿಗೆ ತಿಳಿಸಿ, ಹುಡುಕಾಡಿದಾಗ ರಾತ್ರಿ ತಂದೆ ಪೂವಪ್ಪ ನಾಯ್ಕರು ನದಿ ಬದಿಯಲ್ಲಿರುವ ಮುಂಡಾಜೆ ಗ್ರಾಮದ ಮುಂಡ್ರುಪ್ಪಾಡಿ ಸಂಜೀವ ಶೆಟ್ಟಿಯವರ ಅಡಿಕೆ ತೋಟದಲ್ಲಿ ಬಿದ್ದುಕೊಂಡಿದ್ದವರನ್ನು ಉಪಚರಿಸಿ ನೋಡಿದಾಗ ಬಾಯಲ್ಲಿ ನೊರೆ ಬಂದಿದ್ದು, ಮೃತ ಪಟ್ಟಿರುವುದು ಕಂಡು ಬಂದಿರುತ್ತದೆ ಎಂದು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಉಜಿರೆ : ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಏ.18: ಯ೦ಗ್‌ ಬಾಯ್ಸ್ ಸವಣಾಲು ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ 2ನೇ ವರ್ಷದ “ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ”

Suddi Udaya

ಅಳದಂಗಡಿ ದೈಲ ಮರಿಯಣ್ ಡಿಸೋಜ ನಿವಾಸಕ್ಕೆ ಸ್ಪೀಕರ್ ಯು ಟಿ ಖಾದರ್ ಭೇಟಿ

Suddi Udaya

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya
error: Content is protected !!