25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿ

ನದಿಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಸಾವು

ಮುಂಡಾಜೆ: ನದಿಗೆ ಬಲೆಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವರ ಮೃತದೇಹ ಸ್ಥಳೀಯ ತೋಟವೊಂದರಲ್ಲಿ ಪತ್ತೆಯಾದ ಘಟನೆ ಆ.21ರಂದು ಮುಂಡಾಜೆಯಲ್ಲಿ ನಡೆದಿದೆ.ಮುಂಡಾಜೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ಚೆನ್ನಿಗುಡ್ಡೆ ನಿವಾಸಿ ಪೂವಪ್ಪ ನಾಯ್ಕ(7೦ವ) ಅಸಹಜವಾಗಿ ಮೃತಪಟ್ಟವರಾಗಿದ್ದಾರೆ.

ಈ ಬಗ್ಗೆ ಮೃತರ ಪುತ್ರ ದಿನೇಶ್ ನಾಯ್ಕ ಧರ್ಮಸ್ಥಳ ಠಾಣೆಗೆ ನೀಡಿದ ದೂರಿನಂತೆ ನನ್ನ ತಂದೆ ಪೂವಪ್ಪ ನಾಯ್ಕ ಅವರು ಆ.21 ರಂದು ಮಧ್ಯಾಹ್ನ 3 ಗಂಟೆಗೆ ಮುಂಡಾಜೆ ಗ್ರಾಮದ ಮುಂಡ್ರುಪ್ಪಾಡಿ ಸೇತುವೆಯ ಮೃತ್ಯುಂಜಯ ನದಿಗೆ ಮೀನು ಹಿಡಿಯಲೆಂದು ಬಲೆ ಹಿಡಿದುಕೊಂಡು ಹೋಗಿ ನದಿಯ ಸೇತುವೆ ಅಡಿಯಲ್ಲಿ ಬಲೆ ಹಾಕಿ ನನ್ನನ್ನು ಅಲ್ಲೇ ನಿಲ್ಲಿಸಿ, ಬೇರೆ ಸ್ಥಳದಲ್ಲಿ ಬಲೆ ಹಾಕಿ ಮೀನು ಹಿಡಿದುಕೊಂಡು ಸಂಜೆ 6.30 ಕ್ಕೆ ಬಂದವರು, ಡ್ಯಾಂ ಬಳಿ ಹಾಕಿದ ಬಲೆ ತೆಗೆಯಯಲೆಂದು ವಾಪಾಸ್ಸು ಹೋದವರು ರಾತ್ರಿ 7.30 ತನಕವೂ ಹಿಂತಿರುಗಿ ಬಾರದೇ ಇದ್ದುದರಿಂದ, ಕೂಗಿ ಕರೆದರೂ ಯಾವುದೇ ಉತ್ತರ ಬಾರದೇ ಇದ್ದು, ಈ ವಿಚಾರವನ್ನು ಮನೆಯವರಿಗೆ ,ನೆರೆಕರೆಯವರಿಗೆ ಹಾಗೂ ಸಂಬಂದಿಕರಿಗೆ ತಿಳಿಸಿ, ಹುಡುಕಾಡಿದಾಗ ರಾತ್ರಿ ತಂದೆ ಪೂವಪ್ಪ ನಾಯ್ಕರು ನದಿ ಬದಿಯಲ್ಲಿರುವ ಮುಂಡಾಜೆ ಗ್ರಾಮದ ಮುಂಡ್ರುಪ್ಪಾಡಿ ಸಂಜೀವ ಶೆಟ್ಟಿಯವರ ಅಡಿಕೆ ತೋಟದಲ್ಲಿ ಬಿದ್ದುಕೊಂಡಿದ್ದವರನ್ನು ಉಪಚರಿಸಿ ನೋಡಿದಾಗ ಬಾಯಲ್ಲಿ ನೊರೆ ಬಂದಿದ್ದು, ಮೃತ ಪಟ್ಟಿರುವುದು ಕಂಡು ಬಂದಿರುತ್ತದೆ ಎಂದು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಅಳದಂಗಡಿ ಶ್ರೀ ಸತ್ಯ ದೇವತೆಗೆ ಹರಕೆ ರೂಪದಲ್ಲಿ ಗಗ್ಗರ ಸಮಪ೯ಣೆ

Suddi Udaya

ಶಿಶಿಲದಲ್ಲಿ 28ನೇ ವರ್ಷದ ಮೊಸರು ಕುಡಿಕೆ ಉತ್ಸವ, ಪ್ರತಿಭಾ ಪುರಸ್ಕಾರ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ಮೂರನೆಯ ಅಧ್ಯಾಯ

Suddi Udaya

ಉಜಿರೆಯಲ್ಲಿ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ : ಮುಂಡಾಜೆಯ ತೇಜಲ್ ಕೆ .ಆರ್ ರವರಿಗೆ ಬೆಳ್ಳಿಯ ಪದಕ

Suddi Udaya

ಮೇ 12-16 ಉಜಿರೆ ಎಸ್ ಡಿ ಎಂ ನ್ಯಾಚುರೋಪತಿ ಕಾಲೇಜಿನಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನದ ಮಹಾಸಮ್ಮೇಳನ

Suddi Udaya
error: Content is protected !!