23.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿತಾಲೂಕು ಸುದ್ದಿವರದಿ

ಪೆರಾಡಿ ಸಂಘದಲ್ಲಿ ಪಶು ಆಹಾರ ಸರಬರಾಜು ಅಭಿಯಾನ

ಪೆರಾಡಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಪಶು ಆಹಾರ, ಸೈಲೇಜ್ ನ್ನು ಸದಸ್ಯರ ಮನೆಗೆ ಸರಬರಾಜು ಮಾಡುವ ಅಭಿಯಾನಕ್ಕೆ ಸಂಘದ ಅಧ್ಯಕ್ಷ ಯಶೋಧರ ಆಚಾರ್ಯ ಇವರು ಚಾಲನೆ ನೀಡಿದರು. ‘ಹಾಗೂ ಸದಸ್ಯರಿಗೆ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಪಶು ಆಹಾರ ಸೈಲೇಜನ್ನು ಸರಬರಾಜು ಮಾಡುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಮಾಡಲಾಗಿದ್ದು ಸದಸ್ಯರು ಇದರ ಸದುಪಯೋಗಪಡಿಸಿಕೊಂಡು ಹೆಚ್ಚಿನ ಹಾಲು ಉತ್ಪಾದನೆಯನ್ನು ಮಾಡುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ದ.ಕ ಹಾಲು ಒಕ್ಕೂಟದ ಉಪವ್ಯವಸ್ಥಾಪಕರು ಡಾ| ಸತೀಶ್ ರಾವ್ ಭಾಗವಹಿಸಿ ಬೆಳ್ತಂಗಡಿ ತಾಲೂಕಿನಲ್ಲಿ ಇದು ಪ್ರಥಮವಾಗಿದ್ದು ನಂದಿನಿ ಪಶು ಆಹಾರ ಉತ್ಕೃಷ್ಟ ಗುಣಮಟ್ಟ ಬಿಐಎಸ್ ಸರ್ಟಿಫಿಕೇಟ್ ಹೊಂದಿದ್ದು ಎಲ್ಲಾ ಸದಸ್ಯರು ನಂದಿನಿ ಪಶು ಆಹಾರವನ್ನು ಉಪಯೋಗಿಸಿ ಜಾನುವಾರು ನಿರ್ವಹಣಾ ವೆಚ್ಚವನ್ನು ಕಡಿತಗೊಳಿಸಬಹುದಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ದ.ಕ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಶ್ರೀಮತಿ ಸುಚಿತ್ರ, ಸಂಘದ ಉಪಾಧ್ಯಕ್ಷ ಬಾಹುಬಲಿ ಜೈನ್, ನಿರ್ದೇಶಕರಾದ ರಮೇಶ್ ಕುಲಾಲ್, ಡೊಂಬಯ್ಯ ಮೂಲ್ಯ ಹಾಗೂ ಕಾರ್ಯದರ್ಶಿ ಸುಭಾಶ್ ಜೈನ್ ಹಾಗೂ ಸಿಬ್ಬಂದಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಕಾಯರ್ತಡ್ಕ: ಇತ್ತೀಚೆಗೆ ನಿಧನರಾದ ಕುಶಾಲಪ್ಪ ನಾಯ್ಕ ರವರ ಮನೆಗೆ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ: ಎಸ್. ಡಿ. ಪಿ. ಐ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಗಾಗಿ ಆಹಾರ ನಿರೀಕ್ಷಕರಿಗೆ ಮನವಿ

Suddi Udaya

ಶಿಶಿಲೇಶ್ವರ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು : ಕೊಲೆಯೇ, ಆತ್ಮಹತ್ಯೆಯೇ ಪೊಲೀಸರ ತನಿಖೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ಸ್ಥಾನ ಮತ್ತು ತಾಲೂಕಿಗೆ ದ್ವಿತೀಯ ಸ್ಥಾನ ಪಡೆದ ಪ್ರತೀಕ್ ವಿ ಎಸ್ ರಿಗೆ ಸನ್ಮಾನ

Suddi Udaya
error: Content is protected !!