22.6 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿತಾಲೂಕು ಸುದ್ದಿವರದಿ

ಪೆರಾಡಿ ಸಂಘದಲ್ಲಿ ಪಶು ಆಹಾರ ಸರಬರಾಜು ಅಭಿಯಾನ

ಪೆರಾಡಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಪಶು ಆಹಾರ, ಸೈಲೇಜ್ ನ್ನು ಸದಸ್ಯರ ಮನೆಗೆ ಸರಬರಾಜು ಮಾಡುವ ಅಭಿಯಾನಕ್ಕೆ ಸಂಘದ ಅಧ್ಯಕ್ಷ ಯಶೋಧರ ಆಚಾರ್ಯ ಇವರು ಚಾಲನೆ ನೀಡಿದರು. ‘ಹಾಗೂ ಸದಸ್ಯರಿಗೆ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಪಶು ಆಹಾರ ಸೈಲೇಜನ್ನು ಸರಬರಾಜು ಮಾಡುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಮಾಡಲಾಗಿದ್ದು ಸದಸ್ಯರು ಇದರ ಸದುಪಯೋಗಪಡಿಸಿಕೊಂಡು ಹೆಚ್ಚಿನ ಹಾಲು ಉತ್ಪಾದನೆಯನ್ನು ಮಾಡುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ದ.ಕ ಹಾಲು ಒಕ್ಕೂಟದ ಉಪವ್ಯವಸ್ಥಾಪಕರು ಡಾ| ಸತೀಶ್ ರಾವ್ ಭಾಗವಹಿಸಿ ಬೆಳ್ತಂಗಡಿ ತಾಲೂಕಿನಲ್ಲಿ ಇದು ಪ್ರಥಮವಾಗಿದ್ದು ನಂದಿನಿ ಪಶು ಆಹಾರ ಉತ್ಕೃಷ್ಟ ಗುಣಮಟ್ಟ ಬಿಐಎಸ್ ಸರ್ಟಿಫಿಕೇಟ್ ಹೊಂದಿದ್ದು ಎಲ್ಲಾ ಸದಸ್ಯರು ನಂದಿನಿ ಪಶು ಆಹಾರವನ್ನು ಉಪಯೋಗಿಸಿ ಜಾನುವಾರು ನಿರ್ವಹಣಾ ವೆಚ್ಚವನ್ನು ಕಡಿತಗೊಳಿಸಬಹುದಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ದ.ಕ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಶ್ರೀಮತಿ ಸುಚಿತ್ರ, ಸಂಘದ ಉಪಾಧ್ಯಕ್ಷ ಬಾಹುಬಲಿ ಜೈನ್, ನಿರ್ದೇಶಕರಾದ ರಮೇಶ್ ಕುಲಾಲ್, ಡೊಂಬಯ್ಯ ಮೂಲ್ಯ ಹಾಗೂ ಕಾರ್ಯದರ್ಶಿ ಸುಭಾಶ್ ಜೈನ್ ಹಾಗೂ ಸಿಬ್ಬಂದಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ನಾರಾವಿ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ ಹಾಗೂ ಬೆಸ್ಟ್ ಫೌಂಡೇಶನ್ ಜಂಟಿ ಆಶ್ರಯದಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಬಳಂಜ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಗೌರವಾರ್ಪಣೆ

Suddi Udaya

ಉಜಿರೆ : ನೇಹಾ ಹೀರೆಮಠ ಹತ್ಯೆಯನ್ನು ಖಂಡಿಸಿ ಎಬಿವಿಪಿ ಬೆಳ್ತಂಗಡಿ ಘಟಕದಿಂದ ಕಪ್ಪುಪಟ್ಟಿ ಪ್ರದರ್ಶಿಸಿ, ರಸ್ತೆ ತಡೆದು ಪ್ರತಿಭಟನೆ

Suddi Udaya

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

Suddi Udaya
error: Content is protected !!