23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಯೂಟ್ಯೂಬರ್ ಸಮೀರ್ ಎಮ್.ಡಿ ವಿಚಾರಣೆಗೆ ಹಾಜರಾಗಲು ನೋಟಿಸ್‌ ಜಾರಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪ್ರಕರಣಗಳಿಗೆ ಸಂಬಂಧಿಸಿದಂತೆ ಯೂಟ್ಯೂಬ‌ರ್ ಸಮೀರ್ ಗೆ ಬೆಳ್ತಂಗಡಿ ಠಾಣೆಗೆ ಆ.23ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಬಗ್ಗೆ ದೂರುದಾರನ ಮಾಹಿತಿ ರಿವಿಲ್ ಮಾಡಿದ್ದು, ಕಾಲ್ಪನಿಕ ಮಾಹಿತಿಗಳನ್ನು ಮಾಡಿಟ್ಟು ದೂತ ಎಂಬ ಯೂಟ್ಯೂಬ್ ನಲ್ಲಿ ಸಮೀರ್ ಎಮ್.ಡಿ ವಿಡಿಯೋ ಪ್ರಸಾರ ಮಾಡಿದ ಬಗ್ಗೆ ಜು.12 ರಂದು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ಧರ್ಮಸ್ಥಳ ಪೊಲೀಸರು ಮೂರು ಭಾರಿ ನೋಟಿಸ್‌ ನೀಡಿದರೂ ವಿಚಾರಣೆಗೆ ಹಾಜರಾಗದೆ ಇರುವ ಕಾರಣ ಆ.21 ರಂದು ಧರ್ಮಸ್ಥಳ ಪೊಲೀಸರು ಬೆಂಗಳೂರು ಬಾಡಿಗೆ ಮನೆಯಿಂದ ಬಂಧಿಸಲು ಹೋಗಿದ್ದು, ಈ ವೇಳೆಗೆ ಅದೇ ದಿನ ಸಂಜೆ ಮಂಗಳೂರು ಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು. ನಿರೀಕ್ಷಣಾ ಜಾಮೀನು ನೀಡುವ ವೇಳೆ ಕೋರ್ಟ್ ಹಲವು ಷರತ್ತು ವಿಧಿಸಿದ್ದ. ಪೊಲೀಸರ ವಿಚಾರಣೆಗೆ ಹಾಜರಾಗಬೇಕು, ಸಾಕ್ಷಿ ನಾಶ ಮಾಡಬಾರದೆಂದು ಕೋರ್ಟ್ ಷರತ್ತು ವಿಧಿಸಿತ್ತು. ಅದರಂತೆ ಧರ್ಮಸ್ಥಳ ಪೊಲೀಸರ ವಿಚಾರಣೆ ಬಾಕಿ ಇರುವ ಕಾರಣದಿಂದ ಆ.22 ರಂದು ಮತ್ತೆ ಸಮೀರ್ ಎಮ್.ಡಿ ಗೆ ವಿಚಾರಣೆಗೆ ಆ.23 ರಂದು 10 ಗಂಟೆಗೆ ಧರ್ಮಸ್ಥಳ ಪೊಲೀಸ್ ಠಾಣೆ ಅಥವಾ ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ಕಚೇರಿಗೆ ಖುದ್ದು ಹಾಜರಾಗಿ ವಿಚಾರಣೆ ಎದುರಿಸಲು ನೋಟಿಸ್ ಜಾರಿ ಮಾಡಿದ್ದಾರೆ.

Related posts

ಪುಂಜಾಲಕಟ್ಟೆ ಕೆ.ಪಿ.ಎಸ್ ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ

Suddi Udaya

ಎಸ್.ಎನ್.ಡಿ.ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಪೂಜೆ

Suddi Udaya

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲಾ 2006ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಂದ “ಮೆಲುಕು” ಕಾರ್ಯಕ್ರಮ

Suddi Udaya

ಮಿತ್ತಬಾಗಿಲು: ಪ್ರಗತಿಪರ ಕೃಷಿಕ ಕೃಷ್ಣಪ್ಪ ಗೌಡ ನಿಧನ

Suddi Udaya

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya

ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿದ ಸ್ಟೀಲ್ ಪಾತ್ರೆ ಒಳಗೆ ವ್ಯಕ್ತಿಯ ಶವ ಪತ್ತೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!