23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

ಬೆಳ್ತಂಗಡಿ : ಇಲ್ಲಿಯ ಹುಣ್ಸೆಕಟ್ಟೆಯಲ್ಲಿ ಜಿಂಕೆಯೊಂದು ಗಾಯವಾಗಿ ಬಿದ್ದಿದ್ದು ಅರಣ್ಯ ಇಲಾಖಾ ಸಿಬ್ಬಂದಿಗಳು ಕ್ಲಪ್ತ ಸಮಯದಲ್ಲಿ ಧಾವಿಸಿ ಮುಂದಿನ ಚಿಕಿತ್ಸೆ ಗಾಗಿ ಕಳುಹಿಸಿ ಕೊಡಲಾಯಿತು.

ಅತೀ ಹೆಚ್ಚು ನಾಯಿಗಳ ಕಾಟದಿಂದ ಈ ಘಟನೆ ಸಂಭವಿಸಿದ್ದು, ನಾಯಿಗಳು ಕಾಡಿನಿಂದ ಅಟ್ಟಾಡಿಸಿ ನಾರಾಯಣ ಪೂಜಾರಿ ಯವರ ಮನೆಯ ಸಮೀಪವಿರುವ ಬಟ್ಟೆ ಒಗೆಯುವ ಕಲ್ಲಿಗೆ ತಾಗಿ ಗಾಯಗೊಂಡಿದೆ ಎನ್ನಲಾಗಿದೆ. ಘಟನೆಯ ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಂದಿದ್ದು ಜಿಂಕೆಯನ್ನು ರವಾನಿಸಿದ್ದಾರೆ. ಹಲವು ದಿನಗಳಿಂದ ಈ ಭಾಗದಲ್ಲಿ ಬೀದಿ ನಾಯಿಗಳಿಂದ ಊರಿನವರಿಗೆ ಮತ್ತು ಕಾಡು ಪ್ರಾಣಿಗಳಿಗೂ ಸಮಸ್ಯೆ ಆಗುತ್ತಿದೆ.

15ಕ್ಕಿಂತ ಹೆಚ್ಚು ನಾಯಿಗಳು ಈ ಪ್ರದೇಶದಲ್ಲಿದ್ದು, ಶಾಲೆಗೆ ತೆರಳುವ ಮಕ್ಕಳನ್ನು ಅಟ್ಟಾಡಿಸಿಕೊಂಡು ಹೋಗುತ್ತಿದ್ದು, ಪಾದಾಚಾರಿಗಳು, ಮಕ್ಕಳು ಭಯದಿಂದ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ನಗರ ಪಂಚಾಯತ್ ಇದರ ಬಗ್ಗೆ ತಕ್ಷಣ ಕ್ರಮ ಕೈ ಗೊಳ್ಳುವಂತೆ ಸ್ಥಳೀಯರ ಆಗ್ರಹಿಸಿದ್ದಾರೆ.

Related posts

ಮಳೆಗಾಲದ ವಿಪತ್ತು ಎದುರಿಸಲು ತಂಡ ರಚನೆ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ -ಕಾಲೇಜು ಗಣರಾಜ್ಯೋತ್ಸವ ಆಚರಣೆ

Suddi Udaya

ಕಕ್ಕಿಂಜೆಗೆ ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರು ಸಚಿವರಿಗೆ ಅಭಿನಂದನೆ

Suddi Udaya

ಬಳಂಜ ಬೊಂಟ್ರೋಟ್ಟು ಗುತ್ತು ಮನೆತನದ ಶಾಂಭವಿ ಅನಾರೋಗ್ಯದಿಂದ ನಿಧನ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಿಯವರೆಗೆ ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya

ಉಜಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!