22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

ಬೆಳ್ತಂಗಡಿ : ಇಲ್ಲಿಯ ಹುಣ್ಸೆಕಟ್ಟೆಯಲ್ಲಿ ಜಿಂಕೆಯೊಂದು ಗಾಯವಾಗಿ ಬಿದ್ದಿದ್ದು ಅರಣ್ಯ ಇಲಾಖಾ ಸಿಬ್ಬಂದಿಗಳು ಕ್ಲಪ್ತ ಸಮಯದಲ್ಲಿ ಧಾವಿಸಿ ಮುಂದಿನ ಚಿಕಿತ್ಸೆ ಗಾಗಿ ಕಳುಹಿಸಿ ಕೊಡಲಾಯಿತು.

ಅತೀ ಹೆಚ್ಚು ನಾಯಿಗಳ ಕಾಟದಿಂದ ಈ ಘಟನೆ ಸಂಭವಿಸಿದ್ದು, ನಾಯಿಗಳು ಕಾಡಿನಿಂದ ಅಟ್ಟಾಡಿಸಿ ನಾರಾಯಣ ಪೂಜಾರಿ ಯವರ ಮನೆಯ ಸಮೀಪವಿರುವ ಬಟ್ಟೆ ಒಗೆಯುವ ಕಲ್ಲಿಗೆ ತಾಗಿ ಗಾಯಗೊಂಡಿದೆ ಎನ್ನಲಾಗಿದೆ. ಘಟನೆಯ ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಂದಿದ್ದು ಜಿಂಕೆಯನ್ನು ರವಾನಿಸಿದ್ದಾರೆ. ಹಲವು ದಿನಗಳಿಂದ ಈ ಭಾಗದಲ್ಲಿ ಬೀದಿ ನಾಯಿಗಳಿಂದ ಊರಿನವರಿಗೆ ಮತ್ತು ಕಾಡು ಪ್ರಾಣಿಗಳಿಗೂ ಸಮಸ್ಯೆ ಆಗುತ್ತಿದೆ.

15ಕ್ಕಿಂತ ಹೆಚ್ಚು ನಾಯಿಗಳು ಈ ಪ್ರದೇಶದಲ್ಲಿದ್ದು, ಶಾಲೆಗೆ ತೆರಳುವ ಮಕ್ಕಳನ್ನು ಅಟ್ಟಾಡಿಸಿಕೊಂಡು ಹೋಗುತ್ತಿದ್ದು, ಪಾದಾಚಾರಿಗಳು, ಮಕ್ಕಳು ಭಯದಿಂದ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ನಗರ ಪಂಚಾಯತ್ ಇದರ ಬಗ್ಗೆ ತಕ್ಷಣ ಕ್ರಮ ಕೈ ಗೊಳ್ಳುವಂತೆ ಸ್ಥಳೀಯರ ಆಗ್ರಹಿಸಿದ್ದಾರೆ.

Related posts

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ ನಿಂದ ಕ್ರಿಸ್ಮಸ್ ಆಚರಣೆ

Suddi Udaya

ಮುಂಡೂರು ಶ್ರೀನಾಗಕಲ್ಲುರ್ಟಿ ಕ್ಷೇತ್ರದಲ್ಲಿ ಶ್ರೀನಾಗಬ್ರಹ್ಮ ದೇವರ ಪುನರ್ ಪ್ರತಿಷ್ಠಾ ಕಲಶೋತ್ಸವ

Suddi Udaya

ಕೊರಂಜ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya

ಉಜಿರೆಯಲ್ಲಿ ರೈತ ತರಬೇತಿ ಕಾರ್ಯಕ್ರಮ

Suddi Udaya
error: Content is protected !!