September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

ಬೆಳ್ತಂಗಡಿ : ಇಲ್ಲಿಯ ಹುಣ್ಸೆಕಟ್ಟೆಯಲ್ಲಿ ಜಿಂಕೆಯೊಂದು ಗಾಯವಾಗಿ ಬಿದ್ದಿದ್ದು ಅರಣ್ಯ ಇಲಾಖಾ ಸಿಬ್ಬಂದಿಗಳು ಕ್ಲಪ್ತ ಸಮಯದಲ್ಲಿ ಧಾವಿಸಿ ಮುಂದಿನ ಚಿಕಿತ್ಸೆ ಗಾಗಿ ಕಳುಹಿಸಿ ಕೊಡಲಾಯಿತು.

ಅತೀ ಹೆಚ್ಚು ನಾಯಿಗಳ ಕಾಟದಿಂದ ಈ ಘಟನೆ ಸಂಭವಿಸಿದ್ದು, ನಾಯಿಗಳು ಕಾಡಿನಿಂದ ಅಟ್ಟಾಡಿಸಿ ನಾರಾಯಣ ಪೂಜಾರಿ ಯವರ ಮನೆಯ ಸಮೀಪವಿರುವ ಬಟ್ಟೆ ಒಗೆಯುವ ಕಲ್ಲಿಗೆ ತಾಗಿ ಗಾಯಗೊಂಡಿದೆ ಎನ್ನಲಾಗಿದೆ. ಘಟನೆಯ ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಂದಿದ್ದು ಜಿಂಕೆಯನ್ನು ರವಾನಿಸಿದ್ದಾರೆ. ಹಲವು ದಿನಗಳಿಂದ ಈ ಭಾಗದಲ್ಲಿ ಬೀದಿ ನಾಯಿಗಳಿಂದ ಊರಿನವರಿಗೆ ಮತ್ತು ಕಾಡು ಪ್ರಾಣಿಗಳಿಗೂ ಸಮಸ್ಯೆ ಆಗುತ್ತಿದೆ.

15ಕ್ಕಿಂತ ಹೆಚ್ಚು ನಾಯಿಗಳು ಈ ಪ್ರದೇಶದಲ್ಲಿದ್ದು, ಶಾಲೆಗೆ ತೆರಳುವ ಮಕ್ಕಳನ್ನು ಅಟ್ಟಾಡಿಸಿಕೊಂಡು ಹೋಗುತ್ತಿದ್ದು, ಪಾದಾಚಾರಿಗಳು, ಮಕ್ಕಳು ಭಯದಿಂದ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ನಗರ ಪಂಚಾಯತ್ ಇದರ ಬಗ್ಗೆ ತಕ್ಷಣ ಕ್ರಮ ಕೈ ಗೊಳ್ಳುವಂತೆ ಸ್ಥಳೀಯರ ಆಗ್ರಹಿಸಿದ್ದಾರೆ.

Related posts

ಕಲ್ಮಂಜ ನಿವಾಸಿ ರಘು ನಿಧನ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಎ.19-26: ಪಾರಸ್‌ ಪೃಥ್ವಿ ಜುವೆಲ್ಸ್‌ನಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನಾಭರಣಗಳ ಮೇಲೆ ವಿಶೇಷ ಕೊಡುಗೆ

Suddi Udaya

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು: ಮಂಗಳೂರಿನ ಕೇಂದ್ರಕ್ಕೆ ರೂ. 1.49 ಕೋಟಿ ಅನುದಾನ ಮೀಸಲು: ಸಂಸದ ಕ್ಯಾ. ಚೌಟ

Suddi Udaya

ಬಂದಾರು: ಪೆರ್ಲ ಬೈಪಾಡಿಯ ಕಾಡಂಡ ಬಳಿ ಗುಡ್ಡಕ್ಕೆ ಬೆಂಕಿ

Suddi Udaya
error: Content is protected !!