23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

ಬೆಳ್ತಂಗಡಿ : ಇಲ್ಲಿಯ ಹುಣ್ಸೆಕಟ್ಟೆಯಲ್ಲಿ ಜಿಂಕೆಯೊಂದು ಗಾಯವಾಗಿ ಬಿದ್ದಿದ್ದು ಅರಣ್ಯ ಇಲಾಖಾ ಸಿಬ್ಬಂದಿಗಳು ಕ್ಲಪ್ತ ಸಮಯದಲ್ಲಿ ಧಾವಿಸಿ ಮುಂದಿನ ಚಿಕಿತ್ಸೆ ಗಾಗಿ ಕಳುಹಿಸಿ ಕೊಡಲಾಯಿತು.

ಅತೀ ಹೆಚ್ಚು ನಾಯಿಗಳ ಕಾಟದಿಂದ ಈ ಘಟನೆ ಸಂಭವಿಸಿದ್ದು, ನಾಯಿಗಳು ಕಾಡಿನಿಂದ ಅಟ್ಟಾಡಿಸಿ ನಾರಾಯಣ ಪೂಜಾರಿ ಯವರ ಮನೆಯ ಸಮೀಪವಿರುವ ಬಟ್ಟೆ ಒಗೆಯುವ ಕಲ್ಲಿಗೆ ತಾಗಿ ಗಾಯಗೊಂಡಿದೆ ಎನ್ನಲಾಗಿದೆ. ಘಟನೆಯ ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಂದಿದ್ದು ಜಿಂಕೆಯನ್ನು ರವಾನಿಸಿದ್ದಾರೆ. ಹಲವು ದಿನಗಳಿಂದ ಈ ಭಾಗದಲ್ಲಿ ಬೀದಿ ನಾಯಿಗಳಿಂದ ಊರಿನವರಿಗೆ ಮತ್ತು ಕಾಡು ಪ್ರಾಣಿಗಳಿಗೂ ಸಮಸ್ಯೆ ಆಗುತ್ತಿದೆ.

15ಕ್ಕಿಂತ ಹೆಚ್ಚು ನಾಯಿಗಳು ಈ ಪ್ರದೇಶದಲ್ಲಿದ್ದು, ಶಾಲೆಗೆ ತೆರಳುವ ಮಕ್ಕಳನ್ನು ಅಟ್ಟಾಡಿಸಿಕೊಂಡು ಹೋಗುತ್ತಿದ್ದು, ಪಾದಾಚಾರಿಗಳು, ಮಕ್ಕಳು ಭಯದಿಂದ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ನಗರ ಪಂಚಾಯತ್ ಇದರ ಬಗ್ಗೆ ತಕ್ಷಣ ಕ್ರಮ ಕೈ ಗೊಳ್ಳುವಂತೆ ಸ್ಥಳೀಯರ ಆಗ್ರಹಿಸಿದ್ದಾರೆ.

Related posts

ಬೆಳಾಲು ಪ್ಯಾಕ್ಸ್: ಆರ್ಥಿಕ ಅವ್ಯವಹಾರ ಪ್ರಕರಣಎರಡನೇ ಆರೋಪಿ ಪ್ರಶಾಂತ್ ಬಂಧನ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ : ಪೂರ್ವ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ವಾರ್ಷಿಕ ಕ್ರೀಡಾಕೂಟ

Suddi Udaya

ನ.7: ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya
error: Content is protected !!