22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

ಚಾರ್ಮಾಡಿ : 2024-25 ನೇ ಸಾಲಿನ ತ್ರಿ ವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಚಾರ್ಮಾಡಿ ಇದರ ಮಹಾಸಭೆಯನ್ನು ಒಕ್ಕೂಟದ ಅಧ್ಯಕ್ಷ ಶ್ರೀಮತಿ ಜಯಂತಿ ಯವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.


ಸಭೆಯಲ್ಲಿ ಹಿಂದಿನ ಮಹಾಸಭೆ ಮತ್ತು ವಾರ್ಷಿಕ ವರದಿಯನ್ನು ಮಂಡಿಸಿ ಅನುಮೋದಿಸಲಾಯಿತು. ಒಕ್ಕೂಟದ 2024-25 ನೇ ಸಾಲಿನ ಲೆಕ್ಕಪರಿಶೋಧನೆ ಮಂಡಿಸಿ ಅನುಮೋದಿಸಲಾಯಿತು ಮುಂದಿನ ವರ್ಷದ ಒಕ್ಕೂಟದ ಆಯವ್ಯಯ ಕ್ರಿಯಾ ಯೋಜನ ವರದಿಯನ್ನು ಮಂಡಿಸಲಾಯಿತು. ಪದಾಧಿಕಾರಿಗಳ ಪದಗ್ರಹಣ ಮಾಡಲಾಯಿತು. ಸಂಜೀವಿನಿ ಯೋಜನೆಗಳ ಸಮಗ್ರ ಮಾಹಿತಿ ಯನ್ನು ನೀಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಸರ್ವ ಪದಾಧಿಕಾರಿಗಳು, ತಾಲೂಕು ಸಂಜೀವಿನಿ ಅಭಿಯಾನ ಘಟಕ ಬೆಳ್ತಂಗಡಿ ಇದರ ವಲಯ ಮೇಲ್ವಿಚಾರಕ ಜಯಾನಂದ , ಸ್ವ ಸಹಾಯ ಸಂಘದ ಪ್ರತಿನಿಧಿಗಳು, ಎಲ್ ಸಿ ಆರ್ ಪಿ, ಪಶು ಸಖಿ ಉಪಸ್ಥಿತರಿದ್ದರು.
ಕೃಷಿ ಸಖಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿ, ಎಮ್ ಬಿ ಕೆ ಭವ್ಯ ಸ್ವಾಗತಿಸಿದರು. ಎಲ್ ಸಿ ಆರ್ ಪಿ ರಮ್ಯಾ ಧನ್ಯವಾದವಿತ್ತರು.

Related posts

ಇಳಂತಿಲ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವೆಂಕಟ್ರಮಣ ಭಟ್, ಉಪಾಧ್ಯಕ್ಷರಾಗಿ ಉಮಾವತಿ ಆಯ್ಕೆ

Suddi Udaya

ಗುರುವಾಯನಕೆರೆಯಲ್ಲಿ ಹೊಂಡಗಳ ಹಾವಳಿ: ವಾಹನ ಸವಾರರ ಪರದಾಟ – ತಕ್ಷಣ ರಸ್ತೆ ದುರಸ್ತಿಗೆ ಸಾರ್ವಜನಿಕರ ಆಗ್ರಹ

Suddi Udaya

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಇಂಟರ್ ಆಕ್ಟಿವ್ ಸ್ಮಾರ್ಟ್ ಬೋರ್ಡ್ ಕೊಡುಗೆ, ಉದ್ಘಾಟನೆ

Suddi Udaya

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya
error: Content is protected !!