July 23, 2026
ಚಿತ್ರ ವರದಿತಾಲೂಕು ಸುದ್ದಿವರದಿ

ಪೆರಾಡಿ ಸಂಘದಲ್ಲಿ ಪಶು ಆಹಾರ ಸರಬರಾಜು ಅಭಿಯಾನ

ಪೆರಾಡಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಪಶು ಆಹಾರ, ಸೈಲೇಜ್ ನ್ನು ಸದಸ್ಯರ ಮನೆಗೆ ಸರಬರಾಜು ಮಾಡುವ ಅಭಿಯಾನಕ್ಕೆ ಸಂಘದ ಅಧ್ಯಕ್ಷ ಯಶೋಧರ ಆಚಾರ್ಯ ಇವರು ಚಾಲನೆ ನೀಡಿದರು. ‘ಹಾಗೂ ಸದಸ್ಯರಿಗೆ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಪಶು ಆಹಾರ ಸೈಲೇಜನ್ನು ಸರಬರಾಜು ಮಾಡುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಮಾಡಲಾಗಿದ್ದು ಸದಸ್ಯರು ಇದರ ಸದುಪಯೋಗಪಡಿಸಿಕೊಂಡು ಹೆಚ್ಚಿನ ಹಾಲು ಉತ್ಪಾದನೆಯನ್ನು ಮಾಡುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ದ.ಕ ಹಾಲು ಒಕ್ಕೂಟದ ಉಪವ್ಯವಸ್ಥಾಪಕರು ಡಾ| ಸತೀಶ್ ರಾವ್ ಭಾಗವಹಿಸಿ ಬೆಳ್ತಂಗಡಿ ತಾಲೂಕಿನಲ್ಲಿ ಇದು ಪ್ರಥಮವಾಗಿದ್ದು ನಂದಿನಿ ಪಶು ಆಹಾರ ಉತ್ಕೃಷ್ಟ ಗುಣಮಟ್ಟ ಬಿಐಎಸ್ ಸರ್ಟಿಫಿಕೇಟ್ ಹೊಂದಿದ್ದು ಎಲ್ಲಾ ಸದಸ್ಯರು ನಂದಿನಿ ಪಶು ಆಹಾರವನ್ನು ಉಪಯೋಗಿಸಿ ಜಾನುವಾರು ನಿರ್ವಹಣಾ ವೆಚ್ಚವನ್ನು ಕಡಿತಗೊಳಿಸಬಹುದಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ದ.ಕ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಶ್ರೀಮತಿ ಸುಚಿತ್ರ, ಸಂಘದ ಉಪಾಧ್ಯಕ್ಷ ಬಾಹುಬಲಿ ಜೈನ್, ನಿರ್ದೇಶಕರಾದ ರಮೇಶ್ ಕುಲಾಲ್, ಡೊಂಬಯ್ಯ ಮೂಲ್ಯ ಹಾಗೂ ಕಾರ್ಯದರ್ಶಿ ಸುಭಾಶ್ ಜೈನ್ ಹಾಗೂ ಸಿಬ್ಬಂದಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ವೈಭವಪೂರ್ಣ ಹಸಿರುವಾಣಿ ಸಮರ್ಪಣೆ ಹಾಗೂ ನೂತನ ಅಕ್ಷೋಭ್ಯ ಅನ್ನಛತ್ರ ಉದ್ಘಾಟನೆ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

Suddi Udaya

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಗಣರಾಜ್ಯೋತ್ಸವ

Suddi Udaya
error: Content is protected !!