September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿ

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ: ಗಿರೀಶ್ ಮಟ್ಟಣ್ಣನವ‌ರ್, ಜಯಂತ್ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು

ಬೆಳ್ತಂಗಡಿ : ಉಜಿರೆ ತಿಮರೋಡಿ ಮನೆಯಲ್ಲಿ ಮಹೇಶ್ ಶೆಟ್ಟಿ ಬಂಧನ ಮಾಡಲು ಬ್ರಹ್ಮವಾರ ಪೊಲೀಸರು ಹೋದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.

ಯೂಟ್ಯೂಬ್ ಮೂಲಕ ಬಿ.ಎಲ್.ಸಂತೋಷ್ ವಿರುದ್ಧ ಮಹೇಶ್ ಶೆಟ್ಟಿ ತಿಮರೋಡಿ ಅವಹೇಳನಕಾರಿ ಹೇಳಿಕೆ ನೀಡಿದ ವಿರುದ್ಧ ಉಡುಪಿ ಜಿಲ್ಲೆಯ ಬ್ರಹ್ಮವಾರ ಪೊಲೀಸ್ ಠಾಣೆಯಲ್ಲಿ ಆ.18 ರಂದು ರಾಜೀವ್ ಕುಲಾಲ್ ದಾಖಲಾದ ಪ್ರಕರಣದಲ್ಲಿ ಆ.21 ರಂದು ಠಾಣೆಗೆ ಹಾಜರಾಗಲು ನೋಟಿಸ್ ನೀಡಿದ್ರೂ ಮಹೇಶ್ ಶೆಟ್ಟಿ ತಿಮರೋಡಿ ಹಾಜರಾಗದ ಹಿನ್ನಲೆಯಲ್ಲಿ ಆ.21 ರಂದು ಬೆಳಗ್ಗೆ ಉಜಿರೆ ತಿಮರೋಡಿ ಮನೆಯಲ್ಲಿ ಬ್ರಹ್ಮವಾರ ಪೊಲೀಸರು ಬಂಧನ ಮಾಡಲು ಬಂದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಆ.21 ರಂದು ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಬ್ರಹ್ಮವಾರ ಪೊಲೀಸ್ ಠಾಣೆಯ ಸಬ್ ಇನ್ಸೆಕ್ಟ‌ರ್ ಅಶೋಕ್‌ ಮಲಬಾಗಿಲು ಅವರು ದೂರು ನೀಡಿದ್ದು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣಣವರ್, ಜಯಂತ್.ಟಿ ಹಾಗೂ ಇತರ 10-15 ಮಂದಿ ಇಲಾಖಾ ಕರ್ತವ್ಯ ನಿರ್ವಹುಸದಂತೆ ಬಲಪ್ರಯೋಗ ಮಾಡಿ ಅಡ್ಡಿಪಡಿಸಿದ್ದಾರೆ, ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರವಾಗಿ ಸಂದೇಶಗಳನ್ನು ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ, ಅಲ್ಲದೆ ಮಹೇಶ್ ಶೆಟ್ಟಿಯನ್ನು ವಶಕ್ಕೆ ಪಡೆದ ಬಳಿಕ ಇಲಾಖಾ ವಾಹನದಲ್ಲಿ ಬರಲು ನಿರಾಕರಿಸಿದ್ದು ಖಾಸಗಿ ಕಾರಿನಲ್ಲಿ ಬಂದಿದ್ದು ಈ ವೇಳೆ ಸ್ಥಳದಲ್ಲಿ ನೆರೆದಿದ್ದ 10ರಿಂದ 15 ಮಂದಿ ಕಾರುಗಳನ್ನು ಹಿಂಬಾಲಿಸಿ ಬಂದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ದೂರು ನೀಡಿದ್ದು ಅದರಂತೆ ಆರೋಪಿಗಳ ವಿರುದ್ಧ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಬಗ್ಗೆ ಆ.22 ರಂದು ಬೆಳ್ತಂಗ ಪೊಲೀಸ್‌ ಠಾಣೆಯಲ್ಲಿ
132,189(2),351(2), 263a, 190, 262, ರಂತೆ ಪ್ರಕರಣ ದಾಖಲಾಗಿದೆ.

Related posts

ಶಿಬಾಜೆ: ಫತ್ತಿಮಾರುನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya

ಪಟ್ರಮೆ: ಪಟ್ಟೂರು ಪಿತ್ತಿಲ್ತಾರು ನಿವಾಸಿ ಮೋನಪ್ಪ ಎಂ. ಕೆ ನಿಧನ

Suddi Udaya

ಓಡಿಲ್ನಾಳ ಸ.ಉ. ಪ್ರಾ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆ

Suddi Udaya

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಈ ಭಾರಿ ಹೆಚ್ಚು ಕ್ರೀಡಾಭಿಮಾನಿಗಳು ಸೇರುವ ನಿರೀಕ್ಷೆ, ವಿಜೇತ ತಂಡಗಳಿಗೆ ನಗದು ಹಾಗೂ ಟ್ರೋಪಿ,

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ರವರಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!