23.7 C
ಪುತ್ತೂರು, ಬೆಳ್ತಂಗಡಿ
April 24, 2026
ಶಾಲಾ ಕಾಲೇಜು

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜು ಎನ್.ಎಸ್.ಎಸ್. ಕಾರ್ಯಕ್ರಮಗಳ ಉದ್ಘಾಟನೆ

ಬೆಳ್ತಂಗಡಿ: ‘ರಾಷ್ಟ್ರೀಯ ಸೇವಾ ಯೋಜನೆ ಬದುಕಿನಲ್ಲಿ ಶಿಸ್ತು ಮತ್ತು ಬದ್ಧತೆಯನ್ನು ರೂಪಿಸುವಂತಹುದು. ಅಲ್ಲಿ ಸಿಗುವ ತರಬೇತಿ ಮತ್ತು ಜೀವನ ಶಿಕ್ಷಣ ಬೇರೆ ಕಡೆ ಸಿಗಲಾರದು’ ಎಂದು ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಹೇಳಿದರು.

ಅವರು ಶುಕ್ರವಾರ ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕದ 2024 – 25ನೇ ಸಾಲಿನ ಕಾರ್ಯಚಟುವಟಿಕೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

‘ಸವಾಲುಗಳು ತುಂಬಿರುವ ಈ ಸಂಕೀರ್ಣ ಯುಗದಲ್ಲಿ ನಾವು ನಾವಾಗಿರುವ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕಾಗಿದೆ. ಬದುಕಿನಲ್ಲಿ ಏನೇ ಬಂದರೂ ಅದನ್ನು ಹೇಗೆ ಮೆಟ್ಟಿ ನಿಲ್ಲಬೇಕು ಎಂಬ ಪ್ರಯತ್ನದ ಛಲವನ್ನು ಎನ್.ಎಸ್.ಎಸ್ . ಕಲಿಸಿಕೊಡುತ್ತದೆ. ಹಾಗಾಗಿ ಪ್ರತಿ ವಿದ್ಯಾರ್ಥಿಯೂ ಅದರಲ್ಲಿ ಭಾಗವಹಿಸಿ ತನ್ನನ್ನು ತಾನು ಸಮಾಜಮುಖಿಯಾಗಿ ಬೆಳೆಸಿಕೊಳ್ಳಬೇಕು’ ಎಂದರು.

ಯುವ ಸಾಹಿತಿ ಹಾಗೂ ತರಬೇತುದಾರ ಚಂದ್ರಹಾಸ ಬಳಂಜ ಮಾತನಾಡಿ, ‘ ನಮ್ಮಲ್ಲಿ ಯಾವುದೇ ಹಿಂಜರಿಕೆ ಇರಬಾರದು. ಸಿಕ್ಕ ಒಳ್ಳೆಯ ಅವಕಾಶಗಳನ್ನು ಕೈ ಚೆಲ್ಲುವ ಗುಣವೂ ಇರಬಾರದು. ತನ್ನೊಳಗಿನ ಕೀಳರಿಮೆಯನ್ನು ದೂರ ಮಾಡಿ ಅವಕಾಶಗಳನ್ನು ಹೇಗೆ ಪಡೆಯಬೇಕು ಎಂಬುದನ್ನು ಎನ್.ಎಸ್.ಎಸ್.ಸದಾ ಕಲಿಸಿಕೊಡುತ್ತದೆ. ಹಾಗಾಗಿ ಅದರಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವ ಮೂಲಕ ಸಮಾಜದ ಸತ್ಪ್ರಜೆಯಾಗಿ ಬಾಳಬೇಕು’ ಎಂದು ತಿಳಿಸಿ ಅನೇಕ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಉತ್ಸಾಹ ತುಂಬಿದರು.

ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ ಅಧ್ಯಕ್ಷತೆ ವಹಿಸಿದ್ದರು.ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಬಿ. ಎ. ಶಮೀವುಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿದರು.

ವೇದಿಕೆಯಲ್ಲಿ ಕಾಲೇಜಿನ ಎನ್.ಎಸ್.ಎಸ್.ಘಟಕದ ನಾಯಕ ದ್ವಿತೀಯ ಕಲಾ ವಿಭಾಗದ ಮಹಮ್ಮದ್ ಜುನೈದ್, ನಾಯಕಿ ದ್ವಿತೀಯ ವಿಜ್ಞಾನ ವಿಭಾಗದ ಸಂಧ್ಯಾ ಇದ್ದರು.ಕಾಲೇಜಿನ ಎನ್.ಎಸ್.ಎಸ್.ಯೋಜನಾಧಿಕಾರಿ ಗಣೇಶ್ ಬಿ ಶಿರ್ಲಾಲು ಪ್ರಸ್ತಾವಿಸಿ ಸ್ವಾಗತಿಸಿದರು. ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಸೌಜನ್ಯ, ಸಹ ಯೋಜನಾಧಿಕಾರಿ ಚಂದನ ಅತಿಥಿಗಳನ್ನು ಪರಿಚಯಿಸಿದರು. ಸಹ ಯೋಜನಾಧಿಕಾರಿ ಸುಷ್ಮಾ ವಂದಿಸಿದರು. ಎನ್.ಎಸ್.ಎಸ್.ವಿದ್ಯಾರ್ಥಿ ದೀಪಕ್ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ: ಶ್ರೀ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ :ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ ಉಜಿರೆಯಲ್ಲಿ ಶಿಕ್ಷಕರ ದಿನಾಚರಣೆ ಜೊತೆಗೆ ಓಣಂ ಹಬ್ಬದ ಆಚರಣೆ

Suddi Udaya

ವ್ಯವಹಾರ ಆಡಳಿತ ನಿರ್ವಹಣೆ ಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ವೈಜ್ಞಾನಿಕ ಆವಿಷ್ಕಾರಗಳು ಅವಕಾಶಗಳನ್ನೂ ಸೃಷ್ಟಿಸುತ್ತದೆ ” ಎನ್ನುವ ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ಭಾರೀ ಮಳೆ ಹಿನ್ನಲೆ: ನಾಳೆ ದ.ಕ. ಜಿಲ್ಲಾದ್ಯಂತ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಸರಸ್ವತಿ ಗೋಮಂದಿರ ಲೋಕಾರ್ಪಣೆ: ಅಳಿವಿನಂಚಿನಲ್ಲಿರುವ ದೇಸಿ ಮಲೆನಾಡು ಗಿಡ್ಡ ತಳಿಯ ಗೋವುಗಳನ್ನು ಸಾಕಿ ಬೆಳೆಸುವ ವಿಶಿಷ್ಟ ಯೋಜನೆ :ಕಾಲೇಜು ಕ್ಯಾಂಪಸ್ ನಲ್ಲಿ ಗೋಶಾಲೆ, ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ

Suddi Udaya
error: Content is protected !!