25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಯೂಟ್ಯೂಬರ್ ಸಮೀರ್ ಎಮ್.ಡಿ ವಿಚಾರಣೆಗೆ ಹಾಜರಾಗಲು ನೋಟಿಸ್‌ ಜಾರಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪ್ರಕರಣಗಳಿಗೆ ಸಂಬಂಧಿಸಿದಂತೆ ಯೂಟ್ಯೂಬ‌ರ್ ಸಮೀರ್ ಗೆ ಬೆಳ್ತಂಗಡಿ ಠಾಣೆಗೆ ಆ.23ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಬಗ್ಗೆ ದೂರುದಾರನ ಮಾಹಿತಿ ರಿವಿಲ್ ಮಾಡಿದ್ದು, ಕಾಲ್ಪನಿಕ ಮಾಹಿತಿಗಳನ್ನು ಮಾಡಿಟ್ಟು ದೂತ ಎಂಬ ಯೂಟ್ಯೂಬ್ ನಲ್ಲಿ ಸಮೀರ್ ಎಮ್.ಡಿ ವಿಡಿಯೋ ಪ್ರಸಾರ ಮಾಡಿದ ಬಗ್ಗೆ ಜು.12 ರಂದು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ಧರ್ಮಸ್ಥಳ ಪೊಲೀಸರು ಮೂರು ಭಾರಿ ನೋಟಿಸ್‌ ನೀಡಿದರೂ ವಿಚಾರಣೆಗೆ ಹಾಜರಾಗದೆ ಇರುವ ಕಾರಣ ಆ.21 ರಂದು ಧರ್ಮಸ್ಥಳ ಪೊಲೀಸರು ಬೆಂಗಳೂರು ಬಾಡಿಗೆ ಮನೆಯಿಂದ ಬಂಧಿಸಲು ಹೋಗಿದ್ದು, ಈ ವೇಳೆಗೆ ಅದೇ ದಿನ ಸಂಜೆ ಮಂಗಳೂರು ಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು. ನಿರೀಕ್ಷಣಾ ಜಾಮೀನು ನೀಡುವ ವೇಳೆ ಕೋರ್ಟ್ ಹಲವು ಷರತ್ತು ವಿಧಿಸಿದ್ದ. ಪೊಲೀಸರ ವಿಚಾರಣೆಗೆ ಹಾಜರಾಗಬೇಕು, ಸಾಕ್ಷಿ ನಾಶ ಮಾಡಬಾರದೆಂದು ಕೋರ್ಟ್ ಷರತ್ತು ವಿಧಿಸಿತ್ತು. ಅದರಂತೆ ಧರ್ಮಸ್ಥಳ ಪೊಲೀಸರ ವಿಚಾರಣೆ ಬಾಕಿ ಇರುವ ಕಾರಣದಿಂದ ಆ.22 ರಂದು ಮತ್ತೆ ಸಮೀರ್ ಎಮ್.ಡಿ ಗೆ ವಿಚಾರಣೆಗೆ ಆ.23 ರಂದು 10 ಗಂಟೆಗೆ ಧರ್ಮಸ್ಥಳ ಪೊಲೀಸ್ ಠಾಣೆ ಅಥವಾ ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ಕಚೇರಿಗೆ ಖುದ್ದು ಹಾಜರಾಗಿ ವಿಚಾರಣೆ ಎದುರಿಸಲು ನೋಟಿಸ್ ಜಾರಿ ಮಾಡಿದ್ದಾರೆ.

Related posts

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ ಮತ್ತು ದಂತ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ : ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್ & ಫರ್ನಿಚರ್‍ಸ್‌ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಉಚಿತ ಯೋಗ ಶಿಬಿರಕ್ಕೆ ಚಾಲನೆ

Suddi Udaya
error: Content is protected !!