September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಯೂಟ್ಯೂಬರ್ ಸಮೀರ್ ಎಮ್.ಡಿ ವಿಚಾರಣೆಗೆ ಹಾಜರಾಗಲು ನೋಟಿಸ್‌ ಜಾರಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪ್ರಕರಣಗಳಿಗೆ ಸಂಬಂಧಿಸಿದಂತೆ ಯೂಟ್ಯೂಬ‌ರ್ ಸಮೀರ್ ಗೆ ಬೆಳ್ತಂಗಡಿ ಠಾಣೆಗೆ ಆ.23ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಬಗ್ಗೆ ದೂರುದಾರನ ಮಾಹಿತಿ ರಿವಿಲ್ ಮಾಡಿದ್ದು, ಕಾಲ್ಪನಿಕ ಮಾಹಿತಿಗಳನ್ನು ಮಾಡಿಟ್ಟು ದೂತ ಎಂಬ ಯೂಟ್ಯೂಬ್ ನಲ್ಲಿ ಸಮೀರ್ ಎಮ್.ಡಿ ವಿಡಿಯೋ ಪ್ರಸಾರ ಮಾಡಿದ ಬಗ್ಗೆ ಜು.12 ರಂದು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ಧರ್ಮಸ್ಥಳ ಪೊಲೀಸರು ಮೂರು ಭಾರಿ ನೋಟಿಸ್‌ ನೀಡಿದರೂ ವಿಚಾರಣೆಗೆ ಹಾಜರಾಗದೆ ಇರುವ ಕಾರಣ ಆ.21 ರಂದು ಧರ್ಮಸ್ಥಳ ಪೊಲೀಸರು ಬೆಂಗಳೂರು ಬಾಡಿಗೆ ಮನೆಯಿಂದ ಬಂಧಿಸಲು ಹೋಗಿದ್ದು, ಈ ವೇಳೆಗೆ ಅದೇ ದಿನ ಸಂಜೆ ಮಂಗಳೂರು ಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು. ನಿರೀಕ್ಷಣಾ ಜಾಮೀನು ನೀಡುವ ವೇಳೆ ಕೋರ್ಟ್ ಹಲವು ಷರತ್ತು ವಿಧಿಸಿದ್ದ. ಪೊಲೀಸರ ವಿಚಾರಣೆಗೆ ಹಾಜರಾಗಬೇಕು, ಸಾಕ್ಷಿ ನಾಶ ಮಾಡಬಾರದೆಂದು ಕೋರ್ಟ್ ಷರತ್ತು ವಿಧಿಸಿತ್ತು. ಅದರಂತೆ ಧರ್ಮಸ್ಥಳ ಪೊಲೀಸರ ವಿಚಾರಣೆ ಬಾಕಿ ಇರುವ ಕಾರಣದಿಂದ ಆ.22 ರಂದು ಮತ್ತೆ ಸಮೀರ್ ಎಮ್.ಡಿ ಗೆ ವಿಚಾರಣೆಗೆ ಆ.23 ರಂದು 10 ಗಂಟೆಗೆ ಧರ್ಮಸ್ಥಳ ಪೊಲೀಸ್ ಠಾಣೆ ಅಥವಾ ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ಕಚೇರಿಗೆ ಖುದ್ದು ಹಾಜರಾಗಿ ವಿಚಾರಣೆ ಎದುರಿಸಲು ನೋಟಿಸ್ ಜಾರಿ ಮಾಡಿದ್ದಾರೆ.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರ ಸಭೆ

Suddi Udaya

ಧರ್ಮಸ್ಥಳ ಭಜನಾ ಪರಿಷತ್ ಪದಾಧಿಕಾರಿಗಳ ವಾರ್ಷಿಕ ಸಭೆ

Suddi Udaya

ಬಳಂಜ ವಲಯದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ

Suddi Udaya

ನೈಮಿಷರವರ ಕೋಕೋ ಡ್ಯೂ ಶುದ್ದ ಗಾಣದ ಕೊಬ್ಬರಿ ಎಣ್ಣೆ ಬಿಡುಗಡೆ

Suddi Udaya
error: Content is protected !!