23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಶುಚಿ-ರುಚಿಯಾದ ಊಟೋಪಚಾರಗಳಿಗೆ ಹೆಸರುವಾಸಿಯಾದ ಶ್ರೀದೇವಿ ಹೋಟೆಲ್ ಬೆಳ್ತಂಗಡಿಯಲ್ಲಿ ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಮುಖ್ಯರಸ್ತೆ ಮುಳಿಯ ಜ್ಯುವೆಲ್ಲರ್ಸ್ ಬಳಿ ಶ್ರೀಮತಿ ಸುಚಿತ್ರಾ ಮತ್ತು ಗೋಪಾಲ್ ಮಾಲಕತ್ವದ ಶುಚಿ ರುಚಿಯಾದ ಊಟೋಪಚಾರಗಳಿಗೆ ಹೆಸರುವಾಸಿಯಾದ ಹೋಟೆಲ್ ಶ್ರೀದೇವಿ ಶುದ್ಧ ಸಸ್ಯಾಹಾರಿ ಇದರ ಶುಭಾರಂಭವು ಆ.22 ರಂದು ನಡೆಯಿತು.

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ‘ಪ್ರಜ್ವಲ್’ ದೀಪ ಬೆಳಗಿಸಿ ನೂತನ ಹೋಟೇಲನ್ನು ಉದ್ಘಾಟಿಸಿ ಬರುವ ಗ್ರಾಹಕರಿಗೆ ನಗು ಮೊಗದ ಸೇವೆ ನೀಡಿದಾಗ ಸಂಸ್ಥೆಯು ಪ್ರಗತಿ ಹೊಂದುತ್ತದೆ.ದೈವ ದೇವರ ಅನುಗ್ರಹದಿಂದ ಹೋಟೇಲ್ ನಲ್ಲಿ ಒಳ್ಳೆಯ ವ್ಯಾಪಾರ ವಹಿವಾಟು ನಡೆಯಲಿ ಎಂದರು.

ಈ ಸಂದರ್ಭದಲ್ಲಿ ಮಯೂರ ಟೆಕ್ಸ್ಟ್ ಟೈಲ್ಸ್ ಮಾಲಕ ಪದ್ಮನಾಭ, ಉದ್ಯಮಿ ಸುಧೀರ್, ಸುದ್ದಿ ಉದಯ ವಾರಪತ್ರಿಕೆಯ ಬಿ.ಎಸ್ ಕುಲಾಲ್, ಸಂತೋಷ್ ಪಿ ಕೋಟ್ಯಾನ್, ತುಕರಾಮ್ ಬಿ, ತಿಮ್ಮಪ್ಪ ಗೌಡ, ಸುಧೀತ್, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಮುಖ್ ನವೀನ್ ನೆರಿಯ, ಬ್ಯಾಂಕ್ ಉದ್ಯೋಗಿಯಾದ ವಿನಯ್ ಶೆಟ್ಟಿ, ರೇಖಾ ಸುಧೀರ್, ಜತ್ತಪ್ಪ ಸುವರ್ಣ-ನಾರಾಯಿಣಿ ಧರ್ಮಸ್ಥಳ, ಡೀಕಯ್ಯ ಪೂಜಾರಿ-ಪ್ರೇಮ ಕೊಯ್ಯೂರು, ಹರೀಶ್, ಮೋಹನ್ ಹಾಗೂ ಬಂಧು ಬಳಗದವರು ಉಪಸ್ಥಿತರಿದ್ದು ಶುಭ ಕೋರಿದರು.

ಸಂಸ್ಥೆಯ ಮಾಲಕರಾದ ಗೋಪಾಲ್ ಪೂಜಾರಿ-ಶ್ರೀಮತಿ ಸುಚಿತ್ರಾ, ಚಿಂತನ್, ಚಾರ್ವಿ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

ಹೋಟೆಲ್‌ನಲ್ಲಿ ಫ್ರೆಶ್ ಜ್ಯೂಸ್, ಚಹಾ, ಕಾಫಿ, ತಿಂಡಿ, ಚಾಟ್ಸ್, ಚೈನೀಸ್ ಐಟಂ ಹಾಗೂ ಊಟ ದೊರೆಯುತ್ತದೆ ಹಾಗೂ ವಿಶೇಷ ಕಾರ್ಯಕ್ರಮಗಳಿಗೆ ಕ್ಯಾಟರಿಂಗ್ ಸೌಲಭ್ಯವು ಕೂಡ ಲಭ್ಯವಿದೆ ಎಂದು ಮಾಲಕರು ತಿಳಿಸಿದರು.

Related posts

ಬೆಳ್ತಂಗಡಿ: ಸಮಾಜ ಸೇವಕ ಚಾರ್ಮಾಡಿ ಹಸನಬ್ಬರವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಸೇವೆಯ ಅಂಬುಲೆನ್ಸ್ ಜಿಲ್ಲಾ ಉಸ್ತುವಾರಿ ಸಚಿವರಿಂದ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ : 20 ಸರಕಾರಿ ಶಾಲೆಯ1500ಕ್ಕೂ ಹೆಚ್ವು ವಿದ್ಯಾರ್ಥಿಗಳು ಭಾಗಿ, ವಿಜೇತರಿಗೆ ಬಹುಮಾನ ವಿತರಣೆ

Suddi Udaya

“ಬೆಳ್ತಂಗಡಿ ಮೊಬೈಲ್ ಅಸೋಸಿಯೇಷನ್ ವತಿಯಿಂದ ಲಕ್ಕಿ ಕೂಪನ್ ಡ್ರಾ

Suddi Udaya

ಮಚ್ಚಿನ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಶ್ರೀ ಈಶ್ವರ ದೇವರ ಗರ್ಭಗುಡಿಯ ಷಡಾಧಾರ ಪ್ರತಿಷ್ಠೆ

Suddi Udaya

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್ ವರಿಗೆ ಗೌರವ ಸನ್ಮಾನ

Suddi Udaya
error: Content is protected !!