25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

ಬೆಳ್ತಂಗಡಿ : ಇಲ್ಲಿಯ ಹುಣ್ಸೆಕಟ್ಟೆಯಲ್ಲಿ ಜಿಂಕೆಯೊಂದು ಗಾಯವಾಗಿ ಬಿದ್ದಿದ್ದು ಅರಣ್ಯ ಇಲಾಖಾ ಸಿಬ್ಬಂದಿಗಳು ಕ್ಲಪ್ತ ಸಮಯದಲ್ಲಿ ಧಾವಿಸಿ ಮುಂದಿನ ಚಿಕಿತ್ಸೆ ಗಾಗಿ ಕಳುಹಿಸಿ ಕೊಡಲಾಯಿತು.

ಅತೀ ಹೆಚ್ಚು ನಾಯಿಗಳ ಕಾಟದಿಂದ ಈ ಘಟನೆ ಸಂಭವಿಸಿದ್ದು, ನಾಯಿಗಳು ಕಾಡಿನಿಂದ ಅಟ್ಟಾಡಿಸಿ ನಾರಾಯಣ ಪೂಜಾರಿ ಯವರ ಮನೆಯ ಸಮೀಪವಿರುವ ಬಟ್ಟೆ ಒಗೆಯುವ ಕಲ್ಲಿಗೆ ತಾಗಿ ಗಾಯಗೊಂಡಿದೆ ಎನ್ನಲಾಗಿದೆ. ಘಟನೆಯ ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಂದಿದ್ದು ಜಿಂಕೆಯನ್ನು ರವಾನಿಸಿದ್ದಾರೆ. ಹಲವು ದಿನಗಳಿಂದ ಈ ಭಾಗದಲ್ಲಿ ಬೀದಿ ನಾಯಿಗಳಿಂದ ಊರಿನವರಿಗೆ ಮತ್ತು ಕಾಡು ಪ್ರಾಣಿಗಳಿಗೂ ಸಮಸ್ಯೆ ಆಗುತ್ತಿದೆ.

15ಕ್ಕಿಂತ ಹೆಚ್ಚು ನಾಯಿಗಳು ಈ ಪ್ರದೇಶದಲ್ಲಿದ್ದು, ಶಾಲೆಗೆ ತೆರಳುವ ಮಕ್ಕಳನ್ನು ಅಟ್ಟಾಡಿಸಿಕೊಂಡು ಹೋಗುತ್ತಿದ್ದು, ಪಾದಾಚಾರಿಗಳು, ಮಕ್ಕಳು ಭಯದಿಂದ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ನಗರ ಪಂಚಾಯತ್ ಇದರ ಬಗ್ಗೆ ತಕ್ಷಣ ಕ್ರಮ ಕೈ ಗೊಳ್ಳುವಂತೆ ಸ್ಥಳೀಯರ ಆಗ್ರಹಿಸಿದ್ದಾರೆ.

Related posts

ಪತ್ರಕರ್ತ, ಭುವನೇಶ್ ಗೇರುಕಟ್ಟೆ ರವರಿಗೆ ಮಾತೃವಿಯೋಗ

Suddi Udaya

ಇಂದಬೆಟ್ಟು: ಸಂವಿಧಾನ ಜಾಗೃತಿ ಜಾಥ

Suddi Udaya

ಮೂಡುಬಿದಿರೆ:ಸ್ಥಳಾಂತರಿತ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಶಾಖೆ ಉದ್ಘಾಟನೆ

Suddi Udaya

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

Suddi Udaya

ರೇಪ್ ಕೇಸ್ ವಿಚಾರವಾಗಿ ನಕಲಿ ಕರೆ: ಪಟ್ರಮೆಯ ದಂಪತಿಯಿಂದ ಕರೆ ಮಾಡಿದ ವಂಚಕನಿಗೆ ತರಾಟೆ

Suddi Udaya

ತೋಟತ್ತಾಡಿ: ಪಾದೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಸ್ಥಾಪಿಸುವಂತೆ ಹೈನುಗಾರರಿಂದ ಸಭೆ

Suddi Udaya
error: Content is protected !!