25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾರ್ಕಳ ಸೀಮೆಯ ಜೈನ ಸಮಾಜದಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ


ಧರ್ಮಸ್ಥಳ: ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳ ಚರ್ತುವಿಧ ದಾನ ಪರಂಪರೆಯೊಂದಿಗೆ ಇಂದು ವಿಶ್ವವಿಖ್ಯಾತವಾಗಿದೆ. ಕ್ಷುಲ್ಲಕ ಕಾರಣದಿಂದ, ಮಾಧ್ಯಮಗಳಲ್ಲಿ ಅಪಪ್ರಚಾರದಿಂದ ಎಲ್ಲರಿಗೂ ತೀವ್ರ ದುಃಖವಾಗಿದೆ. ಧರ್ಮಸ್ಥಳದ ಭವ್ಯ ಪರಂಪರೆ ಹಾಗೂ ಹೆಗ್ಗಡೆಯವರ ಬಹುಮುಖಿ ಸಮಾಜಸೇವಾ ಕಾರ್ಯಗಳನ್ನು ಬೆಂಬಲಿಸಿ ಸಕ್ರಿಯ ಸಹಕಾರ ನೀಡುವುದು ಸಮಗ್ರ ಜೈನಸಮಾಜದ ಕರ್ತವ್ಯವಾಗಿದೆ ಎಂದು ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.

ಅವರು ಕಾರ್ಕಳ ಸೀಮೆಯ ಜೈನ ಬಾಂಧವರೊಂದಿಗೆ ಆ.23 ರಂದು ಧರ್ಮಸ್ಥಳಕ್ಕೆ ಬಂದು ಹೆಗ್ಗಡೆಯವರನ್ನು ಗೌರವಿಸಿ ಶುಭ ಹಾರೈಸಿದರು.


ಕೆಸರಾದ ನೀರನ್ನು ಮತ್ತೆ ತಿಳಿಯಾಗಿ ಪರಿಶುದ್ಧಗೊಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಅಪಪ್ರಚಾರ, ಆರೋಪಗಳಲೆಲ್ಲ ದೂರವಾಗಲಿ. ಹೆಗ್ಗಡೆಯವರಿಗೆ ಎಲ್ಲಾ ದೈವ-ದೇವರುಗಳು ದೀರ್ಘಾಯುರಾರೋಗ್ಯವನ್ನಿತ್ತು ಇನ್ನಷ್ಟು ಲೋಕಕಲ್ಯಾಣ ಕಾರ್ಯಗಳನ್ನು ಮಾಡುವಂತೆ ಹರಸಲೆಂದು ಸ್ವಾಮೀಜಿ ಪ್ರಾರ್ಥಿಸಿದರು.
ಕಾರ್ಕಳ ಸೀಮೆಯ ಎಲ್ಲಾ ಬಸದಿಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಪುರೋಹಿತರು ತಂದ ಪ್ರಸಾದವನ್ನು ಹೆಗ್ಗಡೆಯವರಿಗೆ ಅರ್ಪಿಸಿದರು.


ಸ್ವಾಮೀಜಿಯವರು ಕಾರ್ಕಳ ಮಠದ ಬಸದಿಯ ವಿಶೇಷ ಪ್ರಸಾದವನ್ನು ಹೆಗ್ಗಡೆಯವರಿಗೆ ನೀಡಿ ಶುಭ ಹಾರೈಸಿದರು.
ಕಾರ್ಕಳದ ಡಾ. ಎಂ.ಎನ್. ರಾಜೇಂದ್ರಕುಮಾರ್ ಮಾತನಾಡಿ, ಸತ್ಯಕ್ಕೆ ಸದಾ ಜಯವಿದೆ. ಮಾತುಬಿಡ ಮಂಜುನಾಥ ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಸತ್ಯ ಪ್ರಕಟವಾಗುವುದರೊಂದಿಗೆ ಆರೋಪಿಗಳಿಗೆ ಶಿಕ್ಷೆಯಾಗಲಿ. ಹೆಗ್ಗಡೆಯವರ  ಜೊತೆ ನಾವೆಲ್ಲ ಸದಾ ಪೂರ್ಣ ಬೆಂಬಲ ನೀಡಲು ಸಿದ್ಧರು, ಬದ್ಧರು ಎಂದು ಅವರು ಭರವಸೆ ನೀಡಿದರು.


ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.
ಶಿರ್ತಾಡಿಯ ಎಸ್.ಡಿ. ಸಂಪತ್ ಸಾಮ್ರಾಜ್ಯ, ಸುದರ್ಶನ ಜೈನ್ ಬಂಟ್ವಾಳ, ಪುಷ್ಪರಾಜ ಜೈನ್, ಮಂಗಳೂರು, ಕುಲದೀಪ್, ಚೌಟರ ಅರಮನೆ, ಮೂಡಬಿದ್ರೆ, ಅಂಡಾರು ಮಹಾವೀರ ಹೆಗ್ಡೆ, ಅನಂತ್ರಾಜ ಪೂವಣಿ, ಶಿಶುಪಾಲ ಜೈನ್, ಮೋಹನ ಪಡಿವಾಳ್, ನಿವೃತ್ತ ಪ್ರಾಂಶುಪಾಲ ಗುಣಪಾಲ ಕಡಂಬ, ಗುಣವರ್ಮ ಜೈನ್, ಕಾರ್ಕಳ, ನೇಮಿರಾಜ ಆರಿಗಾ ಮೊದಲಾದವರು ಇದ್ದರು.
ತಮ್ಮ ಬಗ್ಯೆ ಹಾಗೂ ಧರ್ಮಸ್ಥಳ ಕ್ಷೇತ್ರದ ಬಗ್ಯೆ ಸಮಾಜ ಬಾಂಧವರ ಭಕ್ತಿ-ಗೌರವ, ಅಭಿಮಾನ ಸದಾ ಇದೇ ರೀತಿ ಇರಲೆಂದು ಹಾರೈಸಿ, ಹೆಗ್ಗಡೆಯವರು ಎಲ್ಲರಿಗೂ ಶುಭ ಹಾರೈಸಿದರು.


ಕಾರ್ಕಳ ಸೀಮೆಯಿಂದ ಸುಮಾರು ಮುನ್ನೂರು ಮಂದಿ ಶ್ರಾವಕರು-ಶ್ರಾವಕಿಯರು ಆಗಮಿಸಿದರು.

Related posts

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 13 ದಿನಗಳ ಕಾಲ ನಡೆದೆ ಸಿಸಿ ಕ್ಯಾಮರ ಆಳವಡಿಕೆ ಮತ್ತು ದುರಸ್ತಿ ತರಬೇತಿಯ ಸಮಾರೋಪ

Suddi Udaya

ಜೂ. 24: ಪಟ್ರಮೆ ಹಾಗೂ ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಧರ್ಮಸ್ಥಳ: 13ನೇ ಸ್ಥಳದಲ್ಲಿ ಜಿ.ಪಿ.ಆರ್ ಕಾರ್ಯಾಚರಣೆ: ಮಧ್ಯಾಹ್ನದ ಬಳಿಕ ಶವದ ಅವಶೇಷಕ್ಕಾಗಿ ಶೋಧ ಕಾರ್ಯಾಚರಣೆ

Suddi Udaya

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

Suddi Udaya

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya
error: Content is protected !!