September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮುಳಿಯದಲ್ಲಿ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ,ಮುದ್ದು ಮಕ್ಕಳಾಟವೇ ಕೃಷ್ಣ ಆಟ: ನೂರಾರು ಕೃಷ್ಣವೇಷ ಸ್ಪರ್ಧಿಗಳು ಭಾಗಿ,

ಬೆಳ್ತಂಗಡಿ: ಚಿನ್ನ, ವಜ್ರಾಭರಣಗಳಲ್ಲಿ ಸದಾ ಹೊಸತನ ಪರಿಚಯಿಸುವ ಮೂಲಕ ಗ್ರಾಹಕರ ಪ್ರೀತಿಗೆ ಪಾತ್ರವಾಗಿರುವ ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುಳಿಯ ಗೋಲ್ಡ್ & ಡೈಮಂಡ್ ಪ್ರಸ್ತುತ ಪಡಿಸುವ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆಯ ಉದ್ಘಾಟನಾ ಸಮಾರಂಭ ಆ.23ರಂದು ಬೆಳ್ತಂಗಡಿ ರಕ್ಷಾ ಆರ್ಕೆಡ್ ನ ಆವರಣದಲ್ಲಿ ನಡೆಯಿತು.

ಬೆಳ್ತಂಗಡಿ ಅಮರ್ ಡ್ರಗ್ ಹೌಸ್ ನ ಮಾಲಕಿ ಸುಜಾತಾ ಗಣಪತಿ ಭಟ್ ರವರು ದೀಪ ಪ್ರಜ್ವಲನೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಸುದ್ದಿ ಉದಯ ವಾರಪತ್ರಿಕೆಯ ಉಪ ಸಂಪಾದಕರಾದ ಸಂತೋಷ್ ಪಿ ಕೋಟ್ಯಾನ್ ಬಳಂಜ, ತೀರ್ಪುಗಾರರಾದ ಕನ್ನಡ ಪ್ರಾಧ್ಯಾಪಕ ಮಹಾಬಲ, ಉಪನ್ಯಾಸಕಿ ಹೇಮಾವತಿ, ಸುದ್ದಿ ಬಿಡುಗಡೆ ನಿರೂಪಕಿ ಶ್ರೇಯಾ, ಶಾಖಾ ಪ್ರಬಂಧಕ ಲೋಹಿತ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನೂರಾರು ಕೃಷ್ಣ ವೇಷ ಸ್ಪರ್ಧಿಗಳು, ಪೋಷಕರು, ಮುಳಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಖ್ಯಾತ ನಿರೂಪಕಿ ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

ಲಾಯಿಲ: ಕಾಣೆಯಾಗಿದ್ದ ಸೂಚನ ಫಲಕ : ಆವರಿಸಿದ್ದ ಗಿಡ ಗಂಟಿಗಳ ತೆರವು: “ಸುದ್ದಿ ಉದಯ” ಜನಧ್ವನಿ Effect

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಕೆ.ವಿ ಶ್ರೀನಿವಾಸ್ ಅಧಿಕಾರ ಸ್ವೀಕಾರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಜೈನ್ ಮೊಬೈಲ್‌ನಲ್ಲಿ ದಸರಾ ಹಾಗೂ 20ನೇ ವರ್ಷದ ಸಂಭ್ರಮದ ಪ್ರಯುಕ್ತ ಬಿಗ್ ಡಿಸ್ಕೌಂಟ್ ಆಫರ್: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಗೆ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆಯವರಿಂದ 650 ಊಟದ ಸ್ಟೀಲ್ ತಟ್ಟೆ ಹಸ್ತಾಂತರ

Suddi Udaya
error: Content is protected !!