September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ರೂ. 164.75 ಕೋಟಿ ವ್ಯವಹಾರ, ರೂ.72.70 ಲಕ್ಷ ನಿವ್ವಳ ಲಾಭ, ಶೇ.16 ಡಿವಿಡೆಂಟ್ ಘೋಷಣೆ

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ 2024-25 ನೇ ಸಾಲಿನ 16 ನೇ ವಾರ್ಷಿಕ ಮಹಾಸಭೆ ಆ. 23 ರಂದು ಲ್ಯಾಲ ಜ್ಯೋತಿ ಹಾಸ್ಪಿಟಲ್ ಬಳಿ ಇರುವ ಸಂಗಮ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಅನಿಲ್ ಎ.ಜೆ ರವರ ಅಧ್ಯಕ್ಷತೆಯಲ್ಲಿ ಜರುಗಿತು.

ಸಂಘ ಸತತ 14 ವರ್ಷ ದಿಂದ ಲಾಭ ಗಳಿಸಿದ್ದು. 2024-25 ನೇ ಸಾಲಿನಲ್ಲಿ ರೂ 164. 75 ಕೋಟಿ ವ್ಯವಹಾರ ನಡೆಸಿ ನಿವ್ವಳ ರೂ 72.70ಲಕ್ಷ ಲಾಭ ಗಳಿಸಿದೆ. ಸದಸ್ಯರಿಗೆ ಶೇ.16 ರಷ್ಟು ಡಿವಿಡೆಂಟ್ ನೀಡಲು ತೀರ್ಮಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಎ.ಜೆ ರವರು ತಿಳಿಸಿದರು.


ಸಂಘದ ಉಪಾಧ್ಯಕ್ಷ ಜಾರ್ಜ್ ಎಮ್. ವಿ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೋಜ್ ಪಿ.ಎ 2024-25 ಸಾಲಿನ ಲೆಕ್ಕ ಪತ್ರವನ್ನು ಮಂಡಿಸಿದರು.


ನಿರ್ದೇಶಕರುಗಳಾದ ಸೆಭಾಸ್ಟೀನ್ ವಿ.ಟಿ, ಜ್ಯೆಸನ್ ಪಟ್ಟೇರಿಲ್, ಅಂದಾನಿ ಕೆ.ಡಿ, ಬಾಬು ತೋಮಸ್, ಬಿಜು ಪಿ.ಪಿ, ಬಿಜು ಎಮ್.ಜೆ, ಸೆಬಾಸ್ಟೀನ್, ಸೋಪಿ ಜೋಸೆಫ್, ಫಿಲೋಮಿನಾ ವಿ ಉಪಸ್ಥಿತರಿದ್ದರು.


ಬೆಳ್ತಂಗಡಿ ಮತ್ತು ಕಡಬ ತಾಲೂಕಿನಲ್ಲಿರುವ ನಮ್ಮ ಸಂಘದ ಸದಸ್ಯರುಗಳ ಮಕ್ಕಳು ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಶೇಕಡಾ 95 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಮಕ್ಕಳನ್ನು ಸಂಘದ ವತಿಯಿಂದ ಅಭಿನಂದಿಸಲಾಯಿತ್ತು. ಕ್ರೀಡೆಯಲ್ಲಿ ಸಾಧನೆ ಮಾಡಿದ ಓರ್ವ ರನ್ನು ಹಾಗೂ ಅದೇ ರೀತಿ ಸಂಘದ ಸದಸ್ಯರುಗಳಾಗಿರುವ 15 ಮಂದಿ ಮಾಜಿ ಸೈನಿಕರನ್ನು ಗುರುತಿಸಿ ಸನ್ಮಾನಿಸಲಾಯಿತು.


ನಿರ್ದೇಶಕ ಸೆಬಾಸ್ಟೀನ್ ಬಂಗಾಡಿ ವಂದಿಸಿ, ಕಾರ್ಯಕ್ರಮಗಳನ್ನು ಯಶ್ವಸಿಯಾಗಿ ನಡೆಸಲು ಸಿಬ್ಬಂದಿ ವರ್ಗದವರು ಸಹಕರಿಸಿದರು. ಶಾಖಾ ವ್ಯವಸ್ಥಾಪಕ ಸುಜಾ ಜೇಮ್ಸ್ & ರೇಷ್ಮಾ ಅಬ್ರಾಹಂ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕರಾಯ ಅಲ್ ಬಿರ್ರ್ ಸ್ಕೂಲಿನಲ್ಲಿ ಇಶ್ಕೇ ರಸೂಲ್ ಮೀಲಾದ್ ಕಾರ್ಯಕ್ರಮ: ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ

Suddi Udaya

ಸೆ.17: ನಾರಾವಿ ಸಂತ ಅಂತೋನಿ ಪದವಿ ಕಾಲೇಜು ಎನ್ ಎಸ್ ಎಸ್ ವತಿಯಿಂದ ಉಚಿತ ಫಿಸಿಯೋಥೆರಪಿ ಹಾಗೂ ಹೊಮಿಯೋಪತಿಕ್ ತಪಾಸಣಾ ಶಿಬಿರ

Suddi Udaya

ಅಶಕ್ತರ ಪಾಲಿನ ಆಶಾಕಿರಣ ದೀಪಕ್ ಜಿ. ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya

ಉಜಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲಾ ವಾರ್ಷಿಕೋತ್ಸವ “ಮನೋಲ್ಲಾಸ ಸಾಂಸ್ಕೃತಿಕ ಸಂಭ್ರಮ -2025”

Suddi Udaya
error: Content is protected !!