September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿಗೆಉಡುಪಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು

ಬೆಳ್ತಂಗಡಿ: ಮಹೇಶ ಶೆಟ್ಟಿ ತಿಮರೋಡಿ ಅವರನ್ನು ಎರಡು ಗಂಟೆಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ಆದೇಶದ ಬಳಿಕ ಸಂಜೆ ಪೊಲೀಸರು ಮತ್ತೆ ಹಾಜರು ಪಡಿಸಿದ್ದು ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡುವಂತೆ ಬ್ರಹ್ಮಾವರ ಪೊಲೀಸರು ಅರ್ಜಿ ಸಲ್ಲಿಸಿದರು.

ಈ ಹಿನ್ನೆಲೆಯಲ್ಲಿ ನ್ಯಾಯಾಧೀಶ ನಾಗೇಶ್ ಅವರು ತಿಮರೋಡಿ ಅವರನ್ನು ಕೋರ್ಟಿಗೆ ಹಾಜರುಪಡಿಸುವಂತೆ ಆದೇಶ ನೀಡಿದರು. ಅದರಂತೆ ಪೊಲೀಸರು ಹಿರಿಯಡ್ಕ ಜೈಲಿನಲ್ಲಿದ್ದ ತಿಮರೋಡಿ ಅವರನ್ನು ಬಿಗಿ ಪೊಲೀಸ್‌ ಭದ್ರತೆಯಲ್ಲಿ ಮಧ್ಯಾಹ್ನ 1:30 ಸುಮಾರಿಗೆ ಕೋರ್ಟಿಗೆ ಹಾಜರು ಪಡಿಸಿದರುಬಳಿಕ ನ್ಯಾಯಾಧೀಶರು ತಿಮರೋಡಿ ಅವರನ್ನು ವಿಚಾರಣೆಗಾಗಿ ಪೊಲೀಸ್ ಎರಡು ಗಂಟೆ ಕಸ್ಟಡಿಗೆ ನೀಡಿದ್ದು, ಮಧ್ಯಾಹ್ನ 3:40ಕ್ಕೆ ಮತ್ತೆ ಕೋರ್ಟ್ ಗೆ ಹಾಜರುಪಡಿಸುವಂತೆ ಆದೇಶಿಸಿದರು.

ಅದರಂತೆ ಕಸ್ಟಡಿಗೆ ಪಡೆದುಕೊಂಡ ಪೊಲೀಸರು, ವಿಚಾರಣೆಗಾಗಿ ತಿಮರೋಡಿ ಅವರನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ ಬಳಿಕ ಮತ್ತೆ ಕೋಟಿ೯ಗೆ ಹಾಜರು ಪಡಿಸಿದ್ದರು. ನ್ಯಾಯಾಲಯ ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು ನೀಡಿದೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ.ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದರು ಇನ್ನೂ ಪತ್ತೆಯಾಗದ ಕಳೇಬರ ಕಾರ್ಯಾಚರಣೆಗೆ ಶ್ವಾನ ದಳ ಎಂಟ್ರಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ದಾನಿಗಳ ನೆರವಿನಿಂದ ನಿರ್ಮಾಣಗೊಂಡ ಹೊಸಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಉಜಿರೆಯ ಎಸ್‌ಡಿಎಂ ಕಲಾ ಕೇಂದ್ರಕ್ಕೆ ಅಮೇರಿಕಾದ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಭೇಟಿ- ಸಂಸ್ಥೆಗೆ ಒಂದು ಲಕ್ಷ ಧನ ಸಹಾಯ ಹಸ್ತಾಂತರ- ವಿದ್ಯಾರ್ಥಿಗಳ ಪ್ರತಿಭೆ ಮತ್ತು ಪರಿಶ್ರಮಕ್ಕೆ ಮೆಚ್ಚುಗೆ

Suddi Udaya

ಜೂ.24: ಜನಸಂಪರ್ಕ ಸಭೆ

Suddi Udaya
error: Content is protected !!