March 7, 2026
ಅಪರಾಧ ಸುದ್ದಿಪ್ರಮುಖ ಸುದ್ದಿ

ಯೂಟ್ಯೂಬರ್ ಸಮೀರ್ ಎಮ್.ಡಿ ಎರಡು ಮನೆಗೆ ಪೊಲೀಸ್ ಎಂಟ್ರಿ

ಬೆಳ್ತಂಗಡಿ: ಯೂಟ್ಯೂಬರ್ ಸಮೀರ್ ಎಮ್.ಡಿಗೆ ಮಂಗಳೂರು ಕೋರ್ಟ್ ನಿಂದ ಜಾಮೀನು ಲಭಿಸಿದರೂ ಧರ್ಮಸ್ಥಳ ಪೊಲೀಸರ ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಧರ್ಮಸ್ಥಳ ಪೊಲೀಸರು ಸಮೀರ್ ಎಮ್.ಡಿ ಕೋರ್ಟ್ ಗೆ ನೀಡಿದ ವಿಳಾಸಗಳಾದ ಬಳ್ಳಾರಿ ಜಿಲ್ಲೆಯ ಕೌಲ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಬಂಡಿಹಟ್ಟಿ ನಿವಾಸಕ್ಕೆ ಆ.22 ರಂದು ನೋಟಿಸ್ ನೀಡಲು ತೆರಳಿದಾಗ ಮನೆ ಬಾಗಿಲಿಗೆ ಬೀಗ ಹಾಕಿದ್ದು ನಂತರ ನೋಟಿಸ್ ಮನೆಯ ಗೋಡೆಗೆ ಅಂಟಿಸಿದ್ದಾರೆ.

ಧರ್ಮಸ್ಥಳ ಪೊಲೀಸರ ಮತ್ತೊಂದು ತಂಡ ಬೆಂಗಳೂರು ಜಿಗಣಿಯಲ್ಲಿರುವ ಹುಲ್ಲಹಳ್ಳಿಯಲ್ಲಿರುವ ಬಾಡಿಗೆ ಮನೆಗೆ ಹೋದಾಗ ಕೂಡ ಮನೆ ಬಾಗಿಲಿಗೆ ಬೀಗ ಹಾಕಲಾಗಿತ್ತು ಬಳಿಕ ಪೊಲೀಸರು ಗೋಡೆಗೆ ನೋಟಿಸ್ ಅಂಟಿಸಿದ್ದಾರೆ. ಧರ್ಮಸ್ಥಳ ಪೊಲೀಸರು ಇ-ಮೇಲ್ ಹಾಗೂ ಮೊಬೈಲ್ ನಂಬರ್ ಗೆ ಸಂಪರ್ಕ ಮಾಡಿದ್ರೂ ಯಾವುದೇ ಉತ್ತರ ಬರುತ್ತಿಲ್ಲ. ನೋಟಿಸ್ ನಲ್ಲಿ ಆ.24 ರಂದು ಭಾನುವಾರ ಧರ್ಮಸ್ಥಳ ಪೊಲೀಸ್ ಠಾಣೆ ಅಥವಾ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ಕಚೇರಿಗೆ ತನಿಖೆಗೆ ಬರಲು ಸೂಚನೆ ನೀಡಿದ್ದಾರೆ. ಧರ್ಮಸ್ಥಳ ಪೊಲೀಸರು ಕೋರ್ಟ್ ಗೆ ದಾಖಲೆ ಸಲ್ಲಿಸಿ ನಿರೀಕ್ಷಣಾ ಜಾಮೀನು ರದ್ದು ಮಾಡಿ ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಶ್ರಾವಣ ತರಬೇತಿ ಸಪ್ತಾಹದ ಉದ್ಘಾಟನೆ

Suddi Udaya

ಸರಕಾರದಿಂದ 2024ರ ಸಾರ್ವತ್ರಿಕ ರಜೆ ದಿನ ಪ್ರಕಟ

Suddi Udaya

ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಬ್ರಹ್ಮಕುಂಭಾಭಿಷೇಕ ಸಂಪನ್ನ: ವೈಭವ ಪೂರ್ಣವಾಗಿ ನಡೆದ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಐದನೇ ವರ್ಷದ ದೀಪಾವಳಿ ದೋಸೆ ಹಬ್ಬ

Suddi Udaya

ಸಾಮರಸ್ಯ ಸಾರಿದ ಮಂಗಳೂರು ದಸರಾ ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಹರ್ಷ

Suddi Udaya
error: Content is protected !!