July 23, 2026
ಅಪರಾಧ ಸುದ್ದಿಪ್ರಮುಖ ಸುದ್ದಿ

ಯೂಟ್ಯೂಬರ್ ಸಮೀರ್ ಎಮ್.ಡಿ ಎರಡು ಮನೆಗೆ ಪೊಲೀಸ್ ಎಂಟ್ರಿ

ಬೆಳ್ತಂಗಡಿ: ಯೂಟ್ಯೂಬರ್ ಸಮೀರ್ ಎಮ್.ಡಿಗೆ ಮಂಗಳೂರು ಕೋರ್ಟ್ ನಿಂದ ಜಾಮೀನು ಲಭಿಸಿದರೂ ಧರ್ಮಸ್ಥಳ ಪೊಲೀಸರ ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಧರ್ಮಸ್ಥಳ ಪೊಲೀಸರು ಸಮೀರ್ ಎಮ್.ಡಿ ಕೋರ್ಟ್ ಗೆ ನೀಡಿದ ವಿಳಾಸಗಳಾದ ಬಳ್ಳಾರಿ ಜಿಲ್ಲೆಯ ಕೌಲ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಬಂಡಿಹಟ್ಟಿ ನಿವಾಸಕ್ಕೆ ಆ.22 ರಂದು ನೋಟಿಸ್ ನೀಡಲು ತೆರಳಿದಾಗ ಮನೆ ಬಾಗಿಲಿಗೆ ಬೀಗ ಹಾಕಿದ್ದು ನಂತರ ನೋಟಿಸ್ ಮನೆಯ ಗೋಡೆಗೆ ಅಂಟಿಸಿದ್ದಾರೆ.

ಧರ್ಮಸ್ಥಳ ಪೊಲೀಸರ ಮತ್ತೊಂದು ತಂಡ ಬೆಂಗಳೂರು ಜಿಗಣಿಯಲ್ಲಿರುವ ಹುಲ್ಲಹಳ್ಳಿಯಲ್ಲಿರುವ ಬಾಡಿಗೆ ಮನೆಗೆ ಹೋದಾಗ ಕೂಡ ಮನೆ ಬಾಗಿಲಿಗೆ ಬೀಗ ಹಾಕಲಾಗಿತ್ತು ಬಳಿಕ ಪೊಲೀಸರು ಗೋಡೆಗೆ ನೋಟಿಸ್ ಅಂಟಿಸಿದ್ದಾರೆ. ಧರ್ಮಸ್ಥಳ ಪೊಲೀಸರು ಇ-ಮೇಲ್ ಹಾಗೂ ಮೊಬೈಲ್ ನಂಬರ್ ಗೆ ಸಂಪರ್ಕ ಮಾಡಿದ್ರೂ ಯಾವುದೇ ಉತ್ತರ ಬರುತ್ತಿಲ್ಲ. ನೋಟಿಸ್ ನಲ್ಲಿ ಆ.24 ರಂದು ಭಾನುವಾರ ಧರ್ಮಸ್ಥಳ ಪೊಲೀಸ್ ಠಾಣೆ ಅಥವಾ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ಕಚೇರಿಗೆ ತನಿಖೆಗೆ ಬರಲು ಸೂಚನೆ ನೀಡಿದ್ದಾರೆ. ಧರ್ಮಸ್ಥಳ ಪೊಲೀಸರು ಕೋರ್ಟ್ ಗೆ ದಾಖಲೆ ಸಲ್ಲಿಸಿ ನಿರೀಕ್ಷಣಾ ಜಾಮೀನು ರದ್ದು ಮಾಡಿ ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Related posts

ನಾರಾವಿ-ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಸಚಿವ ಗುಂಡೂರಾವ್ ಚಾಲನೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟೀಸ್

Suddi Udaya

ಕುವೆಟ್ಟು ಅನಧಿಕೃತವಾಗಿ ನಿರ್ಮಿಸುತ್ತಿರುವ ಕಟ್ಟಡ ರಚನೆ ಕಾಮಗಾರಿ ಸ್ಥಗಿತ

Suddi Udaya

ಅಂಡೆತಡ್ಕ : ಕರಾಯ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಚೂಪಾದ ಆಯುಧಗಳಿಂದ ಆಗಿರುವ ಗಾಯ ಅಲ್ಲ ಓಡಿಲ್ನಾಳ ಸಂಬೋಳ್ಯದ ಸುಮಂತ್‌ ಶವದ ಪರೀಕ್ಷಾ ವರದಿ: ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ: ದ.ಕ ಎಸ್.ಪಿ

Suddi Udaya

ಅರಸಿನಮಕ್ಕಿ: ಕಾರ್ಗಿಲ್ ಕದನದ 25 ವರ್ಷದ ನೆನಪಿಗಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!