July 23, 2026
ಪ್ರಮುಖ ಸುದ್ದಿ

ಸುಲ್ಕೇರಿಮೊಗ್ರು: ಅಡಿಕೆ ತೋಟದಲ್ಲಿ ಜಾಷಧಿ ಸಿಂಪಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಜಾರಿ ಬಿದ್ದು ಮೃತ್ಯು

ಬೆಳ್ತಂಗಡಿ: ಅಡಿಕೆ ಮರವೇರಿ ಜಾಷಧ ಸಿಂಪಡಿಸುತ್ತಿದ್ದ ವ್ಯಕ್ತಿಯೋರ್ವ ಕಾಲು ಜಾರಿ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಆ.22ರಂದು ಸಲ್ಕೇರಿಮೊಗ್ರುನಲ್ಲಿ ಸಂಭವಿಸಿದೆ.

ಸುಲ್ಕೇರಿ ಮೊಗ್ರು ಗ್ರಾಮದ ಹಿತ್ತಿಲು ಮನೆ ಗಂಗಯ್ಯ ನಾಯ್ಕ(62ವ), ಮೃತ ಪಟ್ಟವರು.ಗಂಗಯ್ಯ ನಾಯ್ಕ ಎಂಬವರು ಆ. 22ರಂದು 12.45ಕ್ಕೆ ತಮ್ಮ ಅಡಿಕೆ ತೋಟದಲ್ಲಿ ಪುತ್ರ ಪ್ರದೀಪ್ ಜೊತೆ ಜಾಷಧಿ ಸಿಂಪಡಣೆಗೆ ತಯಾರಿ ನಡೆಸಿ, ಗಂಗಯ್ಯ ನಾಯ್ಕ ಅವರು ಅಡಿಕೆ ತೋಟದಲ್ಲಿ ಅಡಿಕೆ ಮರಕ್ಕೆ ಹತ್ತಿ ಮದ್ದು ಸಿಂಪಡಿಸುತ್ತಿರುವ ಸಮಯ ಆಕಸ್ಮಿಕವಾಗಿ ಕಾಲು ಜಾರಿ ಸುಮಾರು 30 ಅಡಿ ಎತ್ತರದಿಂದ ಕೆಳಗೆ ಕವುಚಿ ಬಿದ್ದರೆನ್ನಲಾಗಿದೆ. ಪ್ರಜ್ಞಾಹೀನರಾಗಿದ್ದವರನ್ನು ಪುತ್ರ ಪ್ರದೀಪ್ ಮತ್ತಿತರರು ಸೇರಿ ಎತ್ತಿ ಉಪಚರಿಸಿ, ಅಂಬುಲೆನ್ಸ್‌ ವಾಹನವೊಂದರಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರುಸಂಜೆ ಮೃತಪಟ್ಟದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಭಜನಾ ಮಂಡಳಿಯ ಬೆಳ್ಳಿಹಬ್ಬ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸೇತುವೆಯಿಲ್ಲದೆ ಶಿಶಿಲ- ಒಟ್ಲ ಭಾಗದ ಜನರಿಗೆ ಸಂಕಷ್ಟ: ಸೇತುವೆ ನಿರ್ಮಾಣಕ್ಕೆ ಒಟ್ಲ ಭಾಗದ ಜನರ ಒತ್ತಾಯ

Suddi Udaya

ಆಮಂತ್ರಣ ವೇದಿಕೆ ತಾಲೂಕು ಪದಗ್ರಹಣ ಮತ್ತು ಮುದ್ದು ಮಕ್ಕಳ ಫೋಟೋ ಸ್ಪರ್ಧೆ ಬಹುಮಾನ ವಿತರಣೆ

Suddi Udaya

ಅಕ್ರಮ ಮರಳು ದಾಸ್ತಾನು ಅಡ್ಡೆ ಪತ್ತೆಹಚ್ಚಿದ ವೇಣೂರು ಪೊಲೀಸರು

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

Suddi Udaya
error: Content is protected !!