ಪ್ರಮುಖ ಸುದ್ದಿ

ಸುಲ್ಕೇರಿಮೊಗ್ರು: ಅಡಿಕೆ ತೋಟದಲ್ಲಿ ಜಾಷಧಿ ಸಿಂಪಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಜಾರಿ ಬಿದ್ದು ಮೃತ್ಯು

ಬೆಳ್ತಂಗಡಿ: ಅಡಿಕೆ ಮರವೇರಿ ಜಾಷಧ ಸಿಂಪಡಿಸುತ್ತಿದ್ದ ವ್ಯಕ್ತಿಯೋರ್ವ ಕಾಲು ಜಾರಿ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಆ.22ರಂದು ಸಲ್ಕೇರಿಮೊಗ್ರುನಲ್ಲಿ ಸಂಭವಿಸಿದೆ.

ಸುಲ್ಕೇರಿ ಮೊಗ್ರು ಗ್ರಾಮದ ಹಿತ್ತಿಲು ಮನೆ ಗಂಗಯ್ಯ ನಾಯ್ಕ(62ವ), ಮೃತ ಪಟ್ಟವರು.ಗಂಗಯ್ಯ ನಾಯ್ಕ ಎಂಬವರು ಆ. 22ರಂದು 12.45ಕ್ಕೆ ತಮ್ಮ ಅಡಿಕೆ ತೋಟದಲ್ಲಿ ಪುತ್ರ ಪ್ರದೀಪ್ ಜೊತೆ ಜಾಷಧಿ ಸಿಂಪಡಣೆಗೆ ತಯಾರಿ ನಡೆಸಿ, ಗಂಗಯ್ಯ ನಾಯ್ಕ ಅವರು ಅಡಿಕೆ ತೋಟದಲ್ಲಿ ಅಡಿಕೆ ಮರಕ್ಕೆ ಹತ್ತಿ ಮದ್ದು ಸಿಂಪಡಿಸುತ್ತಿರುವ ಸಮಯ ಆಕಸ್ಮಿಕವಾಗಿ ಕಾಲು ಜಾರಿ ಸುಮಾರು 30 ಅಡಿ ಎತ್ತರದಿಂದ ಕೆಳಗೆ ಕವುಚಿ ಬಿದ್ದರೆನ್ನಲಾಗಿದೆ. ಪ್ರಜ್ಞಾಹೀನರಾಗಿದ್ದವರನ್ನು ಪುತ್ರ ಪ್ರದೀಪ್ ಮತ್ತಿತರರು ಸೇರಿ ಎತ್ತಿ ಉಪಚರಿಸಿ, ಅಂಬುಲೆನ್ಸ್‌ ವಾಹನವೊಂದರಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರುಸಂಜೆ ಮೃತಪಟ್ಟದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ರೂ. 1.10 ಕೋಟಿ ವೆಚ್ಚದ ಕೂಕ್ರಬೆಟ್ಟು ಪ್ರಾಥಮಿಕ ಶಾಲಾ ನೂತನ ಕಟ್ಟಡದ ಲೋಕಾರ್ಪಣೆ: ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಜಾರಿಗೆ ತನ್ನಿ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಆ.12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಎಂಜಿಐಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳ ಕುರಿತು ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ

Suddi Udaya

ಧರ್ಮಸ್ಥಳ: ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಡಿ.14 -20: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಸಪ್ತಾಹ- 2024: ಸಾಧಕರಿಗೆ ಸನ್ಮಾನ, ಸಮಾಜಸೇವಾ ಸಂಘಟನೆಗಳಿಗೆ ಸೇವಾಶ್ರೀ ಪುರಸ್ಕಾರ, ಮನೋರಂಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!