22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾರ್ಕಳ ಸೀಮೆಯ ಜೈನ ಸಮಾಜದಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ


ಧರ್ಮಸ್ಥಳ: ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳ ಚರ್ತುವಿಧ ದಾನ ಪರಂಪರೆಯೊಂದಿಗೆ ಇಂದು ವಿಶ್ವವಿಖ್ಯಾತವಾಗಿದೆ. ಕ್ಷುಲ್ಲಕ ಕಾರಣದಿಂದ, ಮಾಧ್ಯಮಗಳಲ್ಲಿ ಅಪಪ್ರಚಾರದಿಂದ ಎಲ್ಲರಿಗೂ ತೀವ್ರ ದುಃಖವಾಗಿದೆ. ಧರ್ಮಸ್ಥಳದ ಭವ್ಯ ಪರಂಪರೆ ಹಾಗೂ ಹೆಗ್ಗಡೆಯವರ ಬಹುಮುಖಿ ಸಮಾಜಸೇವಾ ಕಾರ್ಯಗಳನ್ನು ಬೆಂಬಲಿಸಿ ಸಕ್ರಿಯ ಸಹಕಾರ ನೀಡುವುದು ಸಮಗ್ರ ಜೈನಸಮಾಜದ ಕರ್ತವ್ಯವಾಗಿದೆ ಎಂದು ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.

ಅವರು ಕಾರ್ಕಳ ಸೀಮೆಯ ಜೈನ ಬಾಂಧವರೊಂದಿಗೆ ಆ.23 ರಂದು ಧರ್ಮಸ್ಥಳಕ್ಕೆ ಬಂದು ಹೆಗ್ಗಡೆಯವರನ್ನು ಗೌರವಿಸಿ ಶುಭ ಹಾರೈಸಿದರು.


ಕೆಸರಾದ ನೀರನ್ನು ಮತ್ತೆ ತಿಳಿಯಾಗಿ ಪರಿಶುದ್ಧಗೊಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಅಪಪ್ರಚಾರ, ಆರೋಪಗಳಲೆಲ್ಲ ದೂರವಾಗಲಿ. ಹೆಗ್ಗಡೆಯವರಿಗೆ ಎಲ್ಲಾ ದೈವ-ದೇವರುಗಳು ದೀರ್ಘಾಯುರಾರೋಗ್ಯವನ್ನಿತ್ತು ಇನ್ನಷ್ಟು ಲೋಕಕಲ್ಯಾಣ ಕಾರ್ಯಗಳನ್ನು ಮಾಡುವಂತೆ ಹರಸಲೆಂದು ಸ್ವಾಮೀಜಿ ಪ್ರಾರ್ಥಿಸಿದರು.
ಕಾರ್ಕಳ ಸೀಮೆಯ ಎಲ್ಲಾ ಬಸದಿಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಪುರೋಹಿತರು ತಂದ ಪ್ರಸಾದವನ್ನು ಹೆಗ್ಗಡೆಯವರಿಗೆ ಅರ್ಪಿಸಿದರು.


ಸ್ವಾಮೀಜಿಯವರು ಕಾರ್ಕಳ ಮಠದ ಬಸದಿಯ ವಿಶೇಷ ಪ್ರಸಾದವನ್ನು ಹೆಗ್ಗಡೆಯವರಿಗೆ ನೀಡಿ ಶುಭ ಹಾರೈಸಿದರು.
ಕಾರ್ಕಳದ ಡಾ. ಎಂ.ಎನ್. ರಾಜೇಂದ್ರಕುಮಾರ್ ಮಾತನಾಡಿ, ಸತ್ಯಕ್ಕೆ ಸದಾ ಜಯವಿದೆ. ಮಾತುಬಿಡ ಮಂಜುನಾಥ ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಸತ್ಯ ಪ್ರಕಟವಾಗುವುದರೊಂದಿಗೆ ಆರೋಪಿಗಳಿಗೆ ಶಿಕ್ಷೆಯಾಗಲಿ. ಹೆಗ್ಗಡೆಯವರ  ಜೊತೆ ನಾವೆಲ್ಲ ಸದಾ ಪೂರ್ಣ ಬೆಂಬಲ ನೀಡಲು ಸಿದ್ಧರು, ಬದ್ಧರು ಎಂದು ಅವರು ಭರವಸೆ ನೀಡಿದರು.


ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.
ಶಿರ್ತಾಡಿಯ ಎಸ್.ಡಿ. ಸಂಪತ್ ಸಾಮ್ರಾಜ್ಯ, ಸುದರ್ಶನ ಜೈನ್ ಬಂಟ್ವಾಳ, ಪುಷ್ಪರಾಜ ಜೈನ್, ಮಂಗಳೂರು, ಕುಲದೀಪ್, ಚೌಟರ ಅರಮನೆ, ಮೂಡಬಿದ್ರೆ, ಅಂಡಾರು ಮಹಾವೀರ ಹೆಗ್ಡೆ, ಅನಂತ್ರಾಜ ಪೂವಣಿ, ಶಿಶುಪಾಲ ಜೈನ್, ಮೋಹನ ಪಡಿವಾಳ್, ನಿವೃತ್ತ ಪ್ರಾಂಶುಪಾಲ ಗುಣಪಾಲ ಕಡಂಬ, ಗುಣವರ್ಮ ಜೈನ್, ಕಾರ್ಕಳ, ನೇಮಿರಾಜ ಆರಿಗಾ ಮೊದಲಾದವರು ಇದ್ದರು.
ತಮ್ಮ ಬಗ್ಯೆ ಹಾಗೂ ಧರ್ಮಸ್ಥಳ ಕ್ಷೇತ್ರದ ಬಗ್ಯೆ ಸಮಾಜ ಬಾಂಧವರ ಭಕ್ತಿ-ಗೌರವ, ಅಭಿಮಾನ ಸದಾ ಇದೇ ರೀತಿ ಇರಲೆಂದು ಹಾರೈಸಿ, ಹೆಗ್ಗಡೆಯವರು ಎಲ್ಲರಿಗೂ ಶುಭ ಹಾರೈಸಿದರು.


ಕಾರ್ಕಳ ಸೀಮೆಯಿಂದ ಸುಮಾರು ಮುನ್ನೂರು ಮಂದಿ ಶ್ರಾವಕರು-ಶ್ರಾವಕಿಯರು ಆಗಮಿಸಿದರು.

Related posts

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ತಾಲೂಕಿಗೆ ಶೇ. 94.18 ಫಲಿತಾಂಶ

Suddi Udaya

ಚೆಸ್ ಪಂದ್ಯಾಟ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಲಕ್ಮೀಶ ಭಟ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಈದ್ ಹಬ್ಬದ ಪ್ರಯುಕ್ತ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಶೇ.20 ಡಿಸ್ಕೌಂಟ್ ಸೇಲ್: ಶಾಲಾ ಮಕ್ಕಳ ಬುಕ್ಸ್, ಬ್ಯಾಗ್‌ಗಳು, ಕೊಡೆ, ಸ್ಟೇಷನರಿ ವಸ್ತುಗಳು ರಿಯಾಯಿತಿ ದರದಲ್ಲಿ ಲಭ್ಯ

Suddi Udaya

ಸಹೋದರರಿಬ್ಬರು ಒಂದೇ ದಿನ ನಿಧನ

Suddi Udaya

ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭಾಗಿ

Suddi Udaya
error: Content is protected !!