25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾರ್ಕಳ ಸೀಮೆಯ ಜೈನ ಸಮಾಜದಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ


ಧರ್ಮಸ್ಥಳ: ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳ ಚರ್ತುವಿಧ ದಾನ ಪರಂಪರೆಯೊಂದಿಗೆ ಇಂದು ವಿಶ್ವವಿಖ್ಯಾತವಾಗಿದೆ. ಕ್ಷುಲ್ಲಕ ಕಾರಣದಿಂದ, ಮಾಧ್ಯಮಗಳಲ್ಲಿ ಅಪಪ್ರಚಾರದಿಂದ ಎಲ್ಲರಿಗೂ ತೀವ್ರ ದುಃಖವಾಗಿದೆ. ಧರ್ಮಸ್ಥಳದ ಭವ್ಯ ಪರಂಪರೆ ಹಾಗೂ ಹೆಗ್ಗಡೆಯವರ ಬಹುಮುಖಿ ಸಮಾಜಸೇವಾ ಕಾರ್ಯಗಳನ್ನು ಬೆಂಬಲಿಸಿ ಸಕ್ರಿಯ ಸಹಕಾರ ನೀಡುವುದು ಸಮಗ್ರ ಜೈನಸಮಾಜದ ಕರ್ತವ್ಯವಾಗಿದೆ ಎಂದು ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.

ಅವರು ಕಾರ್ಕಳ ಸೀಮೆಯ ಜೈನ ಬಾಂಧವರೊಂದಿಗೆ ಆ.23 ರಂದು ಧರ್ಮಸ್ಥಳಕ್ಕೆ ಬಂದು ಹೆಗ್ಗಡೆಯವರನ್ನು ಗೌರವಿಸಿ ಶುಭ ಹಾರೈಸಿದರು.


ಕೆಸರಾದ ನೀರನ್ನು ಮತ್ತೆ ತಿಳಿಯಾಗಿ ಪರಿಶುದ್ಧಗೊಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಅಪಪ್ರಚಾರ, ಆರೋಪಗಳಲೆಲ್ಲ ದೂರವಾಗಲಿ. ಹೆಗ್ಗಡೆಯವರಿಗೆ ಎಲ್ಲಾ ದೈವ-ದೇವರುಗಳು ದೀರ್ಘಾಯುರಾರೋಗ್ಯವನ್ನಿತ್ತು ಇನ್ನಷ್ಟು ಲೋಕಕಲ್ಯಾಣ ಕಾರ್ಯಗಳನ್ನು ಮಾಡುವಂತೆ ಹರಸಲೆಂದು ಸ್ವಾಮೀಜಿ ಪ್ರಾರ್ಥಿಸಿದರು.
ಕಾರ್ಕಳ ಸೀಮೆಯ ಎಲ್ಲಾ ಬಸದಿಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಪುರೋಹಿತರು ತಂದ ಪ್ರಸಾದವನ್ನು ಹೆಗ್ಗಡೆಯವರಿಗೆ ಅರ್ಪಿಸಿದರು.


ಸ್ವಾಮೀಜಿಯವರು ಕಾರ್ಕಳ ಮಠದ ಬಸದಿಯ ವಿಶೇಷ ಪ್ರಸಾದವನ್ನು ಹೆಗ್ಗಡೆಯವರಿಗೆ ನೀಡಿ ಶುಭ ಹಾರೈಸಿದರು.
ಕಾರ್ಕಳದ ಡಾ. ಎಂ.ಎನ್. ರಾಜೇಂದ್ರಕುಮಾರ್ ಮಾತನಾಡಿ, ಸತ್ಯಕ್ಕೆ ಸದಾ ಜಯವಿದೆ. ಮಾತುಬಿಡ ಮಂಜುನಾಥ ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಸತ್ಯ ಪ್ರಕಟವಾಗುವುದರೊಂದಿಗೆ ಆರೋಪಿಗಳಿಗೆ ಶಿಕ್ಷೆಯಾಗಲಿ. ಹೆಗ್ಗಡೆಯವರ  ಜೊತೆ ನಾವೆಲ್ಲ ಸದಾ ಪೂರ್ಣ ಬೆಂಬಲ ನೀಡಲು ಸಿದ್ಧರು, ಬದ್ಧರು ಎಂದು ಅವರು ಭರವಸೆ ನೀಡಿದರು.


ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.
ಶಿರ್ತಾಡಿಯ ಎಸ್.ಡಿ. ಸಂಪತ್ ಸಾಮ್ರಾಜ್ಯ, ಸುದರ್ಶನ ಜೈನ್ ಬಂಟ್ವಾಳ, ಪುಷ್ಪರಾಜ ಜೈನ್, ಮಂಗಳೂರು, ಕುಲದೀಪ್, ಚೌಟರ ಅರಮನೆ, ಮೂಡಬಿದ್ರೆ, ಅಂಡಾರು ಮಹಾವೀರ ಹೆಗ್ಡೆ, ಅನಂತ್ರಾಜ ಪೂವಣಿ, ಶಿಶುಪಾಲ ಜೈನ್, ಮೋಹನ ಪಡಿವಾಳ್, ನಿವೃತ್ತ ಪ್ರಾಂಶುಪಾಲ ಗುಣಪಾಲ ಕಡಂಬ, ಗುಣವರ್ಮ ಜೈನ್, ಕಾರ್ಕಳ, ನೇಮಿರಾಜ ಆರಿಗಾ ಮೊದಲಾದವರು ಇದ್ದರು.
ತಮ್ಮ ಬಗ್ಯೆ ಹಾಗೂ ಧರ್ಮಸ್ಥಳ ಕ್ಷೇತ್ರದ ಬಗ್ಯೆ ಸಮಾಜ ಬಾಂಧವರ ಭಕ್ತಿ-ಗೌರವ, ಅಭಿಮಾನ ಸದಾ ಇದೇ ರೀತಿ ಇರಲೆಂದು ಹಾರೈಸಿ, ಹೆಗ್ಗಡೆಯವರು ಎಲ್ಲರಿಗೂ ಶುಭ ಹಾರೈಸಿದರು.


ಕಾರ್ಕಳ ಸೀಮೆಯಿಂದ ಸುಮಾರು ಮುನ್ನೂರು ಮಂದಿ ಶ್ರಾವಕರು-ಶ್ರಾವಕಿಯರು ಆಗಮಿಸಿದರು.

Related posts

ರಾತ್ರಿ ಬೆಳ್ತಂಗಡಿ ಠಾಣೆಗೆ ಬಂದು ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ ಫೆ.17, 18, 19ರಂದು ಮಾರಿಗುಡಿ ಮೈದಾನದಲ್ಲಿ ‘ಬೆಳ್ತಂಗಡಿ ಸಂಭ್ರಮ’

Suddi Udaya

ನಾವೂರು: ಕಿರ್ನಡ್ಕ ಜನತಾ ಕಾಲೋನಿ ಬಳಿ ರಸ್ತೆಗುರುಳಿದ ಅಕೇಶಿಯದ ಮರ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದಿಂದ ವಿದ್ಯಾರ್ಥಿಗಳಿಗೆ ವಿಜಯವಾಣಿ ವಿದ್ಯಾರ್ಥಿ ಮಿತ್ರ ಕೊಡುಗೆ

Suddi Udaya
error: Content is protected !!