July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಜಿರೆ ಪಿಎಂಶ್ರೀ ಶಾಲೆಯಲ್ಲಿ ಹದಿಹರೆಯದವರ ಮಾಹಿತಿ ಶಿಬಿರ

ಬಜಿರೆ: ಇಲ್ಲಿಯ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆಯಲ್ಲಿ ಹದಿಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ ಕುರಿತು ಮಾಹಿತಿ ಕಾರ್ಯಾಗಾರವು ಜರುಗಿತು.

ಕಾರ್ಯಕ್ರಮದಲ್ಲಿ ವೇಣೂರು ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ್, ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್ ಪಿ., ತಾಯಂದಿರ ಸಮಿತಿ ಅಧ್ಯಕ್ಷೆ ಜಯಶ್ರೀ, ಎಸ್‌ಡಿಎಂಸಿಯ ಸದಸ್ಯರು, ತಾಯಂದಿರ ಸಮಿತಿಯ ಸದಸ್ಯರು ಎಸ್‌ಬಿಸಿಯ ಸದಸ್ಯರು, ಕ್ಷೇತ್ರ, ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಸಿಸ್ಟರ್, ಮುಖ್ಯಶಿಕ್ಷಕಿ ಕಮಲಾಜಿ ಎಸ್. ಜೈನ್, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ಸಂದರ್ಭ ಇಲಾಖೆಯು ಒದಗಿಸುವ ಉಚಿತ ಸಮವಸ್ತ್ರದೊಂದಿಗೆ ಶಾಲೆಯ ಪೋಷಕರ ಒತ್ತಾಸೆಯಂತೆ ಒಂದು ಜೊತೆ ಆಕರ್ಷಕ ಸಮವಸ್ತ್ರದ ವ್ಯವಸ್ಥೆಯನ್ನು ಆರ್ಥಿಕವಾಗಿ ಹಿಂದುಳಿದ 16 ವಿದ್ಯಾರ್ಥಿಗಳಿಗೆ ತಾಯಂದಿರ ಸಮಿತಿಯ ದಾನಿಗಳ ಸಹಕಾರದಿಂದ ಈ ಪ್ರತ್ಯೇಕ ಸಮವಸ್ತ್ರವನ್ನು ಒದಗಿಸಿ ವಿತರಿಸಲಾಯಿತು.


ತಾಯಂದಿರ ಸಮಿತಿಯ ಉಪಾಧ್ಯಕ್ಷೆ ಶ್ರೀಮತಿ ಸವಿತಾ ಸ್ವಾಗತಿಸಿ, ಸದಸ್ಯೆ ರಜನಿ ವಂದಿಸಿದರು. ಮೀನಾ ಸಂಘದ ಅಧ್ಯಕ್ಷೆ ಕ್ಷಮಾ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈ.ಲಿ. ನ ಸಿ.ಎಸ್.ಆರ್ ಅನುದಾನದಿಂದ ಸೇವಾಧಾಮದಲ್ಲಿ ಸೋಲಾರ್ ಅಳವಡಿಕೆ

Suddi Udaya

ಅಕ್ರಮ ಗೋಹತ್ಯೆ ಆರೋಪಿಗಳನ್ನು ಬಂಧಿಸಲು ಉಪ್ಪಿನಂಗಡಿ ವಿ.ಹಿ.ಪ. ಬಜರಂಗದಳದಿಂದ ಆಗ್ರಹ

Suddi Udaya

ಕಲ್ಮಂಜ: ಪುರುಷೋತ್ತಮ ನಾಯ್ಕ ರವರ ಮನೆಯಲ್ಲಿ ಬೃಹದಾಕಾರದ ಕಾಳಿಂಗ ಸರ್ಪ ಪತ್ತೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಉಪಾಧ್ಯಕ್ಷರಾಗಿ ದಿನೇಶ್ ಕೋಟ್ಯಾನ್

Suddi Udaya

ಪುತ್ತೂರು ವಿನ್ಸೆಂಟ್ ಪ್ರಕಾಶ್ ಪಿಂಟೋ ಹಾಗೂ ತೇರೆಸಾ ಪಿಂಟೋ ರವರಿಂದ ಮೇಲಂತಬೆಟ್ಟು ಅಂಗನವಾಡಿ ಮಕ್ಕಳಿಗೆ ಪಾದರಕ್ಷೆ ವಿತರಣೆ

Suddi Udaya
error: Content is protected !!