22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ರೂ. 164.75 ಕೋಟಿ ವ್ಯವಹಾರ, ರೂ.72.70 ಲಕ್ಷ ನಿವ್ವಳ ಲಾಭ, ಶೇ.16 ಡಿವಿಡೆಂಟ್ ಘೋಷಣೆ

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ 2024-25 ನೇ ಸಾಲಿನ 16 ನೇ ವಾರ್ಷಿಕ ಮಹಾಸಭೆ ಆ. 23 ರಂದು ಲ್ಯಾಲ ಜ್ಯೋತಿ ಹಾಸ್ಪಿಟಲ್ ಬಳಿ ಇರುವ ಸಂಗಮ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಅನಿಲ್ ಎ.ಜೆ ರವರ ಅಧ್ಯಕ್ಷತೆಯಲ್ಲಿ ಜರುಗಿತು.

ಸಂಘ ಸತತ 14 ವರ್ಷ ದಿಂದ ಲಾಭ ಗಳಿಸಿದ್ದು. 2024-25 ನೇ ಸಾಲಿನಲ್ಲಿ ರೂ 164. 75 ಕೋಟಿ ವ್ಯವಹಾರ ನಡೆಸಿ ನಿವ್ವಳ ರೂ 72.70ಲಕ್ಷ ಲಾಭ ಗಳಿಸಿದೆ. ಸದಸ್ಯರಿಗೆ ಶೇ.16 ರಷ್ಟು ಡಿವಿಡೆಂಟ್ ನೀಡಲು ತೀರ್ಮಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಎ.ಜೆ ರವರು ತಿಳಿಸಿದರು.


ಸಂಘದ ಉಪಾಧ್ಯಕ್ಷ ಜಾರ್ಜ್ ಎಮ್. ವಿ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೋಜ್ ಪಿ.ಎ 2024-25 ಸಾಲಿನ ಲೆಕ್ಕ ಪತ್ರವನ್ನು ಮಂಡಿಸಿದರು.


ನಿರ್ದೇಶಕರುಗಳಾದ ಸೆಭಾಸ್ಟೀನ್ ವಿ.ಟಿ, ಜ್ಯೆಸನ್ ಪಟ್ಟೇರಿಲ್, ಅಂದಾನಿ ಕೆ.ಡಿ, ಬಾಬು ತೋಮಸ್, ಬಿಜು ಪಿ.ಪಿ, ಬಿಜು ಎಮ್.ಜೆ, ಸೆಬಾಸ್ಟೀನ್, ಸೋಪಿ ಜೋಸೆಫ್, ಫಿಲೋಮಿನಾ ವಿ ಉಪಸ್ಥಿತರಿದ್ದರು.


ಬೆಳ್ತಂಗಡಿ ಮತ್ತು ಕಡಬ ತಾಲೂಕಿನಲ್ಲಿರುವ ನಮ್ಮ ಸಂಘದ ಸದಸ್ಯರುಗಳ ಮಕ್ಕಳು ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಶೇಕಡಾ 95 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಮಕ್ಕಳನ್ನು ಸಂಘದ ವತಿಯಿಂದ ಅಭಿನಂದಿಸಲಾಯಿತ್ತು. ಕ್ರೀಡೆಯಲ್ಲಿ ಸಾಧನೆ ಮಾಡಿದ ಓರ್ವ ರನ್ನು ಹಾಗೂ ಅದೇ ರೀತಿ ಸಂಘದ ಸದಸ್ಯರುಗಳಾಗಿರುವ 15 ಮಂದಿ ಮಾಜಿ ಸೈನಿಕರನ್ನು ಗುರುತಿಸಿ ಸನ್ಮಾನಿಸಲಾಯಿತು.


ನಿರ್ದೇಶಕ ಸೆಬಾಸ್ಟೀನ್ ಬಂಗಾಡಿ ವಂದಿಸಿ, ಕಾರ್ಯಕ್ರಮಗಳನ್ನು ಯಶ್ವಸಿಯಾಗಿ ನಡೆಸಲು ಸಿಬ್ಬಂದಿ ವರ್ಗದವರು ಸಹಕರಿಸಿದರು. ಶಾಖಾ ವ್ಯವಸ್ಥಾಪಕ ಸುಜಾ ಜೇಮ್ಸ್ & ರೇಷ್ಮಾ ಅಬ್ರಾಹಂ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಫೆ.20 ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಸಾಂಸ್ಕೃತಿಕ ವೈಭವ

Suddi Udaya

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ಮಂಜೂರು; ಸಮಾಜ ಕಲ್ಯಾಣ ಸಚಿವರಿಗೆ ಅಭಿನಂದನೆ

Suddi Udaya

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ

Suddi Udaya

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕಕ್ಕೆ ಅತ್ಯುತ್ತಮ ‘ಟೈಮ್ಸ್ ಬ್ಯುಸಿನೆಸ್ ಅವಾರ್ಡ್ಸ್-2024’ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈಯವರಿಗೆ ಪ್ರಶಸ್ತಿ ಹಸ್ತಾಂತರ

Suddi Udaya
error: Content is protected !!