September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿಗೆಉಡುಪಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು

ಬೆಳ್ತಂಗಡಿ: ಮಹೇಶ ಶೆಟ್ಟಿ ತಿಮರೋಡಿ ಅವರನ್ನು ಎರಡು ಗಂಟೆಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ಆದೇಶದ ಬಳಿಕ ಸಂಜೆ ಪೊಲೀಸರು ಮತ್ತೆ ಹಾಜರು ಪಡಿಸಿದ್ದು ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡುವಂತೆ ಬ್ರಹ್ಮಾವರ ಪೊಲೀಸರು ಅರ್ಜಿ ಸಲ್ಲಿಸಿದರು.

ಈ ಹಿನ್ನೆಲೆಯಲ್ಲಿ ನ್ಯಾಯಾಧೀಶ ನಾಗೇಶ್ ಅವರು ತಿಮರೋಡಿ ಅವರನ್ನು ಕೋರ್ಟಿಗೆ ಹಾಜರುಪಡಿಸುವಂತೆ ಆದೇಶ ನೀಡಿದರು. ಅದರಂತೆ ಪೊಲೀಸರು ಹಿರಿಯಡ್ಕ ಜೈಲಿನಲ್ಲಿದ್ದ ತಿಮರೋಡಿ ಅವರನ್ನು ಬಿಗಿ ಪೊಲೀಸ್‌ ಭದ್ರತೆಯಲ್ಲಿ ಮಧ್ಯಾಹ್ನ 1:30 ಸುಮಾರಿಗೆ ಕೋರ್ಟಿಗೆ ಹಾಜರು ಪಡಿಸಿದರುಬಳಿಕ ನ್ಯಾಯಾಧೀಶರು ತಿಮರೋಡಿ ಅವರನ್ನು ವಿಚಾರಣೆಗಾಗಿ ಪೊಲೀಸ್ ಎರಡು ಗಂಟೆ ಕಸ್ಟಡಿಗೆ ನೀಡಿದ್ದು, ಮಧ್ಯಾಹ್ನ 3:40ಕ್ಕೆ ಮತ್ತೆ ಕೋರ್ಟ್ ಗೆ ಹಾಜರುಪಡಿಸುವಂತೆ ಆದೇಶಿಸಿದರು.

ಅದರಂತೆ ಕಸ್ಟಡಿಗೆ ಪಡೆದುಕೊಂಡ ಪೊಲೀಸರು, ವಿಚಾರಣೆಗಾಗಿ ತಿಮರೋಡಿ ಅವರನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ ಬಳಿಕ ಮತ್ತೆ ಕೋಟಿ೯ಗೆ ಹಾಜರು ಪಡಿಸಿದ್ದರು. ನ್ಯಾಯಾಲಯ ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು ನೀಡಿದೆ.

Related posts

ಮುಂಡಾಜೆ: ಚಾಮುಂಡಿನಗರ ಸ.ಕಿ.ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಡಿ. 30: ಬಳಂಜ ಬೊಂಟ್ರೋಟ್ಟು ಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಶಾಸಕ ಹರೀಶ್ ಪೂಂಜರವರ ನಿವಾಸಕ್ಕೆ ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಸೆ.25 ರಿಂದ ಬೆಳ್ತಂಗಡಿ ಜೈನ್ ಮೊಬೈಲ್ ಹಾಗೂ ನ್ಯೂ ಜೈನ್ ಮೊಬೈಲ್ ನಲ್ಲಿ ಹಬ್ಬದ ಆಫರ್ : ಆಯ್ದ ಬ್ರಾಂಡೆಡ್ ಮೊಬೈಲ್ ಗಳ ಮೇಲೆ ಭರ್ಜರಿ ದರ ಕಡಿತ ಮಾರಾಟ

Suddi Udaya

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

Suddi Udaya
error: Content is protected !!