22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಪ್ರಮುಖ ಸುದ್ದಿ

ಯೂಟ್ಯೂಬರ್ ಸಮೀರ್ ಎಮ್.ಡಿ ಎರಡು ಮನೆಗೆ ಪೊಲೀಸ್ ಎಂಟ್ರಿ

ಬೆಳ್ತಂಗಡಿ: ಯೂಟ್ಯೂಬರ್ ಸಮೀರ್ ಎಮ್.ಡಿಗೆ ಮಂಗಳೂರು ಕೋರ್ಟ್ ನಿಂದ ಜಾಮೀನು ಲಭಿಸಿದರೂ ಧರ್ಮಸ್ಥಳ ಪೊಲೀಸರ ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಧರ್ಮಸ್ಥಳ ಪೊಲೀಸರು ಸಮೀರ್ ಎಮ್.ಡಿ ಕೋರ್ಟ್ ಗೆ ನೀಡಿದ ವಿಳಾಸಗಳಾದ ಬಳ್ಳಾರಿ ಜಿಲ್ಲೆಯ ಕೌಲ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಬಂಡಿಹಟ್ಟಿ ನಿವಾಸಕ್ಕೆ ಆ.22 ರಂದು ನೋಟಿಸ್ ನೀಡಲು ತೆರಳಿದಾಗ ಮನೆ ಬಾಗಿಲಿಗೆ ಬೀಗ ಹಾಕಿದ್ದು ನಂತರ ನೋಟಿಸ್ ಮನೆಯ ಗೋಡೆಗೆ ಅಂಟಿಸಿದ್ದಾರೆ.

ಧರ್ಮಸ್ಥಳ ಪೊಲೀಸರ ಮತ್ತೊಂದು ತಂಡ ಬೆಂಗಳೂರು ಜಿಗಣಿಯಲ್ಲಿರುವ ಹುಲ್ಲಹಳ್ಳಿಯಲ್ಲಿರುವ ಬಾಡಿಗೆ ಮನೆಗೆ ಹೋದಾಗ ಕೂಡ ಮನೆ ಬಾಗಿಲಿಗೆ ಬೀಗ ಹಾಕಲಾಗಿತ್ತು ಬಳಿಕ ಪೊಲೀಸರು ಗೋಡೆಗೆ ನೋಟಿಸ್ ಅಂಟಿಸಿದ್ದಾರೆ. ಧರ್ಮಸ್ಥಳ ಪೊಲೀಸರು ಇ-ಮೇಲ್ ಹಾಗೂ ಮೊಬೈಲ್ ನಂಬರ್ ಗೆ ಸಂಪರ್ಕ ಮಾಡಿದ್ರೂ ಯಾವುದೇ ಉತ್ತರ ಬರುತ್ತಿಲ್ಲ. ನೋಟಿಸ್ ನಲ್ಲಿ ಆ.24 ರಂದು ಭಾನುವಾರ ಧರ್ಮಸ್ಥಳ ಪೊಲೀಸ್ ಠಾಣೆ ಅಥವಾ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ಕಚೇರಿಗೆ ತನಿಖೆಗೆ ಬರಲು ಸೂಚನೆ ನೀಡಿದ್ದಾರೆ. ಧರ್ಮಸ್ಥಳ ಪೊಲೀಸರು ಕೋರ್ಟ್ ಗೆ ದಾಖಲೆ ಸಲ್ಲಿಸಿ ನಿರೀಕ್ಷಣಾ ಜಾಮೀನು ರದ್ದು ಮಾಡಿ ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ

Suddi Udaya

ಪಡ್ಡಂದಡ್ಕ: ಶ್ರೀ ವೆಂಕಟೇಶ್ವರ ಪ್ಯೂಲ್ ಸರ್ವಿಸ್ ಶುಭಾರಂಭ

Suddi Udaya

ಉಜಿರೆಯ ಕಲ್ಲೆಯಲ್ಲಿ ಹಾಡುಗಲೇ ಲಕ್ಷಾಂತರ ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಪ್ರಕರಣ: ಮೈಸೂರು ಜಿಲ್ಲೆಯ ಝೂ ಪಾರ್ಕ್‌ನಲ್ಲಿ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು: ಮೈಸೂರು ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡಿದ್ದ ಚಿನ್ನಭರಣ ವಶ: ಬೆಳ್ತಂಗಡಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

Suddi Udaya

ಜ.4: ಮರೋಡಿ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೈರ್ ವಿತರಣೆ

Suddi Udaya

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

Suddi Udaya
error: Content is protected !!