23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಪ್ರಮುಖ ಸುದ್ದಿ

ಯೂಟ್ಯೂಬರ್ ಸಮೀರ್ ಎಮ್.ಡಿ ಎರಡು ಮನೆಗೆ ಪೊಲೀಸ್ ಎಂಟ್ರಿ

ಬೆಳ್ತಂಗಡಿ: ಯೂಟ್ಯೂಬರ್ ಸಮೀರ್ ಎಮ್.ಡಿಗೆ ಮಂಗಳೂರು ಕೋರ್ಟ್ ನಿಂದ ಜಾಮೀನು ಲಭಿಸಿದರೂ ಧರ್ಮಸ್ಥಳ ಪೊಲೀಸರ ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಧರ್ಮಸ್ಥಳ ಪೊಲೀಸರು ಸಮೀರ್ ಎಮ್.ಡಿ ಕೋರ್ಟ್ ಗೆ ನೀಡಿದ ವಿಳಾಸಗಳಾದ ಬಳ್ಳಾರಿ ಜಿಲ್ಲೆಯ ಕೌಲ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಬಂಡಿಹಟ್ಟಿ ನಿವಾಸಕ್ಕೆ ಆ.22 ರಂದು ನೋಟಿಸ್ ನೀಡಲು ತೆರಳಿದಾಗ ಮನೆ ಬಾಗಿಲಿಗೆ ಬೀಗ ಹಾಕಿದ್ದು ನಂತರ ನೋಟಿಸ್ ಮನೆಯ ಗೋಡೆಗೆ ಅಂಟಿಸಿದ್ದಾರೆ.

ಧರ್ಮಸ್ಥಳ ಪೊಲೀಸರ ಮತ್ತೊಂದು ತಂಡ ಬೆಂಗಳೂರು ಜಿಗಣಿಯಲ್ಲಿರುವ ಹುಲ್ಲಹಳ್ಳಿಯಲ್ಲಿರುವ ಬಾಡಿಗೆ ಮನೆಗೆ ಹೋದಾಗ ಕೂಡ ಮನೆ ಬಾಗಿಲಿಗೆ ಬೀಗ ಹಾಕಲಾಗಿತ್ತು ಬಳಿಕ ಪೊಲೀಸರು ಗೋಡೆಗೆ ನೋಟಿಸ್ ಅಂಟಿಸಿದ್ದಾರೆ. ಧರ್ಮಸ್ಥಳ ಪೊಲೀಸರು ಇ-ಮೇಲ್ ಹಾಗೂ ಮೊಬೈಲ್ ನಂಬರ್ ಗೆ ಸಂಪರ್ಕ ಮಾಡಿದ್ರೂ ಯಾವುದೇ ಉತ್ತರ ಬರುತ್ತಿಲ್ಲ. ನೋಟಿಸ್ ನಲ್ಲಿ ಆ.24 ರಂದು ಭಾನುವಾರ ಧರ್ಮಸ್ಥಳ ಪೊಲೀಸ್ ಠಾಣೆ ಅಥವಾ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ಕಚೇರಿಗೆ ತನಿಖೆಗೆ ಬರಲು ಸೂಚನೆ ನೀಡಿದ್ದಾರೆ. ಧರ್ಮಸ್ಥಳ ಪೊಲೀಸರು ಕೋರ್ಟ್ ಗೆ ದಾಖಲೆ ಸಲ್ಲಿಸಿ ನಿರೀಕ್ಷಣಾ ಜಾಮೀನು ರದ್ದು ಮಾಡಿ ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Related posts

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

Suddi Udaya

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya

ನಿಡ್ಲೆ, ಕರಿಮಣೇಲು ಹಾಗೂ ಕನ್ಯಾಡಿ ಪಂಚಾಯತ್ ಮಟ್ಟದ ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಲಂಚಕ್ಕೆ ಬೇಡಿಕೆ: ಮಂಗಳೂರು ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ

Suddi Udaya

ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿಯಾದ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪದಾಧಿಕಾರಿಗಳುಅರಣ್ಯವಾಸಿಗಳ ಸಮಸ್ಯೆಗಳನ್ನು ಬಗೆಹರಿಸಲು ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ: ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಸೀರೆಗೆ ಗೊಂಡೆ ಹಾಕುವ ತರಬೇತಿ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya
error: Content is protected !!