September 6, 2026
ಅಪರಾಧ ಸುದ್ದಿಪ್ರಮುಖ ಸುದ್ದಿ

ಯೂಟ್ಯೂಬರ್ ಸಮೀರ್ ಎಮ್.ಡಿ ಎರಡು ಮನೆಗೆ ಪೊಲೀಸ್ ಎಂಟ್ರಿ

ಬೆಳ್ತಂಗಡಿ: ಯೂಟ್ಯೂಬರ್ ಸಮೀರ್ ಎಮ್.ಡಿಗೆ ಮಂಗಳೂರು ಕೋರ್ಟ್ ನಿಂದ ಜಾಮೀನು ಲಭಿಸಿದರೂ ಧರ್ಮಸ್ಥಳ ಪೊಲೀಸರ ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಧರ್ಮಸ್ಥಳ ಪೊಲೀಸರು ಸಮೀರ್ ಎಮ್.ಡಿ ಕೋರ್ಟ್ ಗೆ ನೀಡಿದ ವಿಳಾಸಗಳಾದ ಬಳ್ಳಾರಿ ಜಿಲ್ಲೆಯ ಕೌಲ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಬಂಡಿಹಟ್ಟಿ ನಿವಾಸಕ್ಕೆ ಆ.22 ರಂದು ನೋಟಿಸ್ ನೀಡಲು ತೆರಳಿದಾಗ ಮನೆ ಬಾಗಿಲಿಗೆ ಬೀಗ ಹಾಕಿದ್ದು ನಂತರ ನೋಟಿಸ್ ಮನೆಯ ಗೋಡೆಗೆ ಅಂಟಿಸಿದ್ದಾರೆ.

ಧರ್ಮಸ್ಥಳ ಪೊಲೀಸರ ಮತ್ತೊಂದು ತಂಡ ಬೆಂಗಳೂರು ಜಿಗಣಿಯಲ್ಲಿರುವ ಹುಲ್ಲಹಳ್ಳಿಯಲ್ಲಿರುವ ಬಾಡಿಗೆ ಮನೆಗೆ ಹೋದಾಗ ಕೂಡ ಮನೆ ಬಾಗಿಲಿಗೆ ಬೀಗ ಹಾಕಲಾಗಿತ್ತು ಬಳಿಕ ಪೊಲೀಸರು ಗೋಡೆಗೆ ನೋಟಿಸ್ ಅಂಟಿಸಿದ್ದಾರೆ. ಧರ್ಮಸ್ಥಳ ಪೊಲೀಸರು ಇ-ಮೇಲ್ ಹಾಗೂ ಮೊಬೈಲ್ ನಂಬರ್ ಗೆ ಸಂಪರ್ಕ ಮಾಡಿದ್ರೂ ಯಾವುದೇ ಉತ್ತರ ಬರುತ್ತಿಲ್ಲ. ನೋಟಿಸ್ ನಲ್ಲಿ ಆ.24 ರಂದು ಭಾನುವಾರ ಧರ್ಮಸ್ಥಳ ಪೊಲೀಸ್ ಠಾಣೆ ಅಥವಾ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ಕಚೇರಿಗೆ ತನಿಖೆಗೆ ಬರಲು ಸೂಚನೆ ನೀಡಿದ್ದಾರೆ. ಧರ್ಮಸ್ಥಳ ಪೊಲೀಸರು ಕೋರ್ಟ್ ಗೆ ದಾಖಲೆ ಸಲ್ಲಿಸಿ ನಿರೀಕ್ಷಣಾ ಜಾಮೀನು ರದ್ದು ಮಾಡಿ ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Related posts

ಪಿಲಿಚಾಮುಂಡಿಕಲ್ಲು ದೊಂಪದಬಲಿ ಉತ್ಸವ ಸಮಿತಿಯ ನಿಕಟಪೂರ್ವ ಉಪಾಧ್ಯಕ್ಷ ವಿಶ್ವನಾಥ ಕೋಟ್ಯಾನ್ ನಿಧನ

Suddi Udaya

ಪರಿಶಿಷ್ಟ ಜಾತಿ-ಪಂಗಡಗಳ ವಿಶೇಷ ಗ್ರಾಮಸಭೆ ಬೆನ್ನಲ್ಲೇ ಸ್ಥಳಕ್ಕೆ ಬಂದ ಅಧಿಕಾರಿಗಳು – ನಡುಗುಡ್ಡೆ ಕಾಲುಸಂಕ ಪ್ರದೇಶ ಹಾಗೂ ರಸ್ತೆ ವಂಚಿತ ಬಜಕ್ರೆಸಾಲು ಪ್ರದೇಶದಲ್ಲಿ ಸಮಸ್ಯೆಗಳ ಪರಿಶೀಲನೆ

Suddi Udaya

ಪಣಕಜೆ ಮುಹಿಯ್ಯದ್ದೀನ್ ಜುಮ್ಮಾ ಮಸೀದಿಯ ಮಹಾಸಭೆ: ನೂತನ ಅಧ್ಯಕ್ಷರಾಗಿ ಡಾ. ನಿಯಾಝ್, ಪ್ರಧಾನ ಕಾರ್ಯದರ್ಶಿಯಾಗಿ ಬಿ ಯಂ ಅಶ್ರಫ್

Suddi Udaya

ಅಳದಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸರಸ್ವತಿ, ಉಪಾಧ್ಯಕ್ಷರಾಗಿ ಶಾಲಿನಿ ಅವಿರೋಧವಾಗಿ ಆಯ್ಕೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ

Suddi Udaya
error: Content is protected !!