23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ಸಾಧಕರಿಗೆ ಸನ್ಮಾನ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 2024-25ನೇ ಸಾಲಿನ 18ನೇ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಭಗೀರಥ ಜಿ.ಅವರ ಅಧ್ಯಕ್ಷತೆಯಲ್ಲಿ ಆ.23ರಂದು ಬೆಳ್ತಂಗಡಿ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣದ ಸಭಾಭವನದಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಭಗೀರಥ ಜಿ ಮಾತನಾಡಿ ನಮ್ಮ ಸಹಕಾರ ಸಂಘವು “ನಿಮ್ಮ ಸ್ಪೂರ್ತಿ ನಮ್ಮ ಉತ್ಕೃಷ್ಟ ಸೇವೆ” ಎನ್ನುವ ಧೈಯವಾಕ್ಯದೊಂದಿಗೆ ಸದಸ್ಯರ ಸಹಕಾರದಿಂದ ಸಹಕಾರ ಕ್ಷೇತ್ರದಲ್ಲಿ ಕಳೆದ 16 ವರ್ಷಗಳ ಅತ್ಯಲ್ಪ ಅವಧಿಯಲ್ಲಿ ಅದ್ವಿತೀಯ ಸಾಧನೆ ಮಾಡಿದೆ ಎಂದು ಆಶಯ ವ್ಯಕ್ತಪಡಿಸಿದರು.

1500 ಕೋಟಿ ರೂ.ವಾರ್ಷಿಕವಾಗಿ ವ್ಯವಹಾರ ನಡೆಸಿ, 225 ಕೋಟಿ ರೂ.ಮಿಕ್ಕಿ ಸಾಲ ಹಂಚಿಕೆ ಮಾಡಿ, 267 ಕೋಟಿ ರೂ.ಠೇವಣಿ , 480ಕೋಟಿ ರೂ.ಲಾಭಗಳಿಸಿರುವ ಸಂಸ್ಥೆ ಸದಸ್ಯರಿಗೆ 15% ಡಿವಿಡೆಂಡ್ ಘೋಷಣೆ ಮಾಡಲಾಯಿತು.

ಸನ್ಮಾನ:
ವೆನ್ಲಾಕ್ ಆಸ್ಪತ್ರೆಯ ಮೂತ್ರರೋಗ ತಜ್ಞ ಡಾ.ಸದಾನಂದ ಪೂಜಾರಿ ಹಾಗೂ ಲೋಕಾಯುಕ್ತ ಇನ್ಸ್ಪೆಕ್ಟರ್ ಪ್ರದೀಪ್ ಪೂಜಾರಿ ಕೆಯ್ಯರು ಅವರನ್ನು ಸನ್ಮಾನಿಸಲಾಯಿತು. ಚಿಕಿತ್ಸಾ ಮತ್ತು ವಿದ್ಯಾರ್ಥಿ ವೇತನ ವಿತರಿಸಲಾಯಿತು. ಅತ್ಯುತ್ತಮ ವ್ಯವಹಾರ ಗಳಿಸಿದ ಬೆಳ್ತಂಗಡಿ ಶಾಖೆ, ಅತೀ ಹೆಚ್ಚು ಠೇವಣಿ ಸಂಗ್ರಹಿಸಿದ ಪಡೀಲು ಶಾಖೆ, ಅತೀ ಹೆಚ್ಚು ಸಾಲ ನೀಡಿದ ಪುರಸರಕಟ್ಟೆ ಶಾಖೆ, ಶೇ.100ರಷ್ಟು ಸಾಲ ವಸೂಲಾತಿಯ ಕಬಕ ಶಾಖೆ, ಲೆಕ್ಕ ಪರಿಶೋಧನೆಯಲ್ಲಿ ಎ ಗ್ರೇಡ್ ಪಡೆದ ಹಳೆಯಂಗಡಿ ಶಾಖೆ, ನೂತನ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಉಪ್ಪಿನಂಗಡಿ ಶಾಖೆ , ಅತೀ ಕಡಿಮೆ ಖರ್ಚು ಮಾಡಿ ಅಭಿವೃದ್ಧಿ ಗಳಿಸಿದ ಕಲ್ಲಡ್ಕ ಶಾಖೆ, ಕ್ಷಿಪ್ರ ಅಭಿವೃದ್ಧಿ ಕುಂಬ್ರ ಶಾಖೆ, ಅತೀ ಹೆಚ್ಚು ದೈಹಿಕ ಠೇವಣಿ ಸಂಗ್ರಹಿಸಿದ ಶಿರ್ತಾಡಿ ಶಾಖೆಯ ಶಶಿಧರ್ , ಮುಡಿಪು ಶಾಖೆಯ ನಾರಾಯಣ ಭಟ್, ಮತ್ತು ಸಿಬ್ಬಂದಿಗಳ ಪ್ರಾಮಾಣಿಕ ಸೇವೆಯನ್ನು ಗೌರವಿಸಲಾಯಿತು.

ಉಪಾಧ್ಯಕ್ಷ ಜಗದೀಶ್ ಚಂದ್ರ ಡಿ., ಸಂಘದ ನಿರ್ದೇಶಕರಾದ ತನುಜಾ ಶೇಖರ್, ಸುಜಿತ ವಿ ಬಂಗೇರ, ಚಂದ್ರಶೇಖರ್, ಸಂಜೀವ ಪೂಜಾರಿ, ಕೆ.ಪಿ ದಿವಾಕರ, ಧರಣೇಂದ್ರ ಕುಮಾರ್, ಜಯವಿಕ್ರಮ್ ಪಿ, ಆನಂದ ಪೂಜಾರಿ, ರಕ್ಷಿತ್ ಶಿವರಾಮ್, ಚಿದಾನಂದ ಪೂಜಾರಿ, ಸೂರಜ್ ಕುಮಾರ್, ವಿಶೇಷಾಧಿಕಾರಿ ಮೋನಪ್ಪ ಪೂಜಾರಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಶ್ವಥ್ ಕುಮಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ನಿರ್ದೇಶಕರಾದ ಗಂಗಾಧರ ಮಿತ್ತಮಾರ್ ಸ್ವಾಗತಿಸಿ, ಡಾ.ರಾಜಾರಾಮ ಕೆ.ಬಿ, ವಂದಿಸಿ , ಕಡಬ ಶಾಖಾ ವ್ಯವಸ್ಥಾಪಕ ಪ್ರದೀಶ್ ಎನ್., ಬಜಗೋಳಿ ಶಾಖಾ ವ್ಯವಸ್ಥಾಪಕ ಪ್ರವೀಣ್ ಪೂಜಾರಿ ನಿರೂಪಿಸಿದರು.

Related posts

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರಿಂದ ಸಭಾಧ್ಯಕ್ಷ ಯು ಟಿ ಖಾದರ್ ಗೆ ಮನವಿ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಹೊಸಂಗಡಿಯ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳ: ನೇರ್ತನೆ ಪರಿಸರದಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ : ಕೃಷಿಗೆ ವ್ಯಾಪಕ ಹಾನಿ

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.142.59 ಕೋಟಿ ವಾರ್ಷಿಕ ವ್ಯವಹಾರ, ರೂ.54 ಲಕ್ಷ ಲಾಭ, ಸದಸ್ಯರಿಗೆ 10% ಡಿವಿಡೆಂಟ್:ಸಹಕಾರಿ ಸಂಘದ ಪ್ರಗತಿಯ ಹಿಂದೆ ಸದಸ್ಯರ ಕೊಡುಗೆ ಅಪಾರ: ರಂಜನ್ ಜಿ ಗೌಡ

Suddi Udaya

ಫೆ. 14 : ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ

Suddi Udaya

ಬ್ರೂನೇ ದೇಶಕ್ಕೆ ಭಾರತದ ಪ್ರಧಾನಿ‌ ನರೇಂದ್ರ ಮೋದಿಜೀಯವರ ಆಗಮನ: ಬ್ರೂನೇ ದೇಶದಲ್ಲಿ ನೆಲೆಸಿರುವ ಬಳಂಜ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣ

Suddi Udaya
error: Content is protected !!