25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಜಿರೆ ಪಿಎಂಶ್ರೀ ಶಾಲೆಯಲ್ಲಿ ಹದಿಹರೆಯದವರ ಮಾಹಿತಿ ಶಿಬಿರ

ಬಜಿರೆ: ಇಲ್ಲಿಯ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆಯಲ್ಲಿ ಹದಿಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ ಕುರಿತು ಮಾಹಿತಿ ಕಾರ್ಯಾಗಾರವು ಜರುಗಿತು.

ಕಾರ್ಯಕ್ರಮದಲ್ಲಿ ವೇಣೂರು ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ್, ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್ ಪಿ., ತಾಯಂದಿರ ಸಮಿತಿ ಅಧ್ಯಕ್ಷೆ ಜಯಶ್ರೀ, ಎಸ್‌ಡಿಎಂಸಿಯ ಸದಸ್ಯರು, ತಾಯಂದಿರ ಸಮಿತಿಯ ಸದಸ್ಯರು ಎಸ್‌ಬಿಸಿಯ ಸದಸ್ಯರು, ಕ್ಷೇತ್ರ, ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಸಿಸ್ಟರ್, ಮುಖ್ಯಶಿಕ್ಷಕಿ ಕಮಲಾಜಿ ಎಸ್. ಜೈನ್, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ಸಂದರ್ಭ ಇಲಾಖೆಯು ಒದಗಿಸುವ ಉಚಿತ ಸಮವಸ್ತ್ರದೊಂದಿಗೆ ಶಾಲೆಯ ಪೋಷಕರ ಒತ್ತಾಸೆಯಂತೆ ಒಂದು ಜೊತೆ ಆಕರ್ಷಕ ಸಮವಸ್ತ್ರದ ವ್ಯವಸ್ಥೆಯನ್ನು ಆರ್ಥಿಕವಾಗಿ ಹಿಂದುಳಿದ 16 ವಿದ್ಯಾರ್ಥಿಗಳಿಗೆ ತಾಯಂದಿರ ಸಮಿತಿಯ ದಾನಿಗಳ ಸಹಕಾರದಿಂದ ಈ ಪ್ರತ್ಯೇಕ ಸಮವಸ್ತ್ರವನ್ನು ಒದಗಿಸಿ ವಿತರಿಸಲಾಯಿತು.


ತಾಯಂದಿರ ಸಮಿತಿಯ ಉಪಾಧ್ಯಕ್ಷೆ ಶ್ರೀಮತಿ ಸವಿತಾ ಸ್ವಾಗತಿಸಿ, ಸದಸ್ಯೆ ರಜನಿ ವಂದಿಸಿದರು. ಮೀನಾ ಸಂಘದ ಅಧ್ಯಕ್ಷೆ ಕ್ಷಮಾ ಕಾರ್ಯಕ್ರಮ ನಿರೂಪಿಸಿದರು.

Related posts

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಆಗ್ರಹ

Suddi Udaya

ಅಂಡಿಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ರಾಘವ ಪುತ್ರನ್ ನಿಧನ

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

Suddi Udaya

ಬಂದಾರು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya
error: Content is protected !!