July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ: ಇನ್ನೂ ಕೇವಲ ನಾಲ್ಕು ದಿನ ಮಾತ್ರ

ಬೆಳ್ತಂಗಡಿ: ರಾಜಸ್ಥಾನ ಆರ್ಟ್ ಹಾಗೂ ಕ್ರಾಫ್ಟ್ ವಿವಿಧ ಕರಕುಶಲ ವಸ್ತುಗಳು, ಕೈಮಗ್ಗ ಸೀರೆಗಳು, ಆಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ರಾಜಸ್ಥಾನ ಬೃಹತ್ ಮಾರಾಟ ಮೇಳವು ಬೆಳ್ತಂಗಡಿ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ಆ. 26 ರವರೆಗೆ ನಡೆಯಲಿದ್ದು ಕೇವಲ ನಾಲ್ಕು ದಿನಗಳು ಮಾತ್ರ ಇರಲಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಆಯೋಜಕರು ತಿಳಿಸಿದ್ದಾರೆ.

ಈ ಗ್ರಾಮೀಣ ಮೇಳದಲ್ಲಿ ರಾಜಸ್ಥಾನ ಸಹಿತ ವಿವಿಧ ರಾಜ್ಯಗಳ ಕೈಮಗ್ಗದ ಸೀರೆ ಹಾಗೂ ಸಿಲ್ಕ್ ಸೀರೆಗಳು, ಕರಕುಶಲ ವಸ್ತುಗಳ ಬೃಹತ್ ಸಂಗ್ರಹವಿದ್ದು ಮಾರಾಟ, ಪ್ರದರ್ಶನ ನಡೆಯಲಿದೆ. ರಾಜಸ್ಥಾನ ಸಿಲ್ಕ್ ಸಾರಿ, ಮೈಸೂರ್ ಸಿಲ್ಕ್ ಸಾರಿ, ಓಡಿಶಾ ಸಿಲ್ಕ್ ಸೀರೆಗಳು, ಕಾಂತ ವರ್ಕ್ ಸಿಲ್ಕ್ ಸೀರೆಗಳು, ಕೋಸಿಯಾ ಕೈ ಮಗ್ಗದ ಸೀರೆಗಳು, ಬಾಗಲ್ಪುರ್ ಸಿಲ್ಕ್ ಸೀರೆಗಳು, ಬನರಸ್ ಸಿಲ್ಕ್ ಸಾರಿ, ವೆಜ್ ಡೈ ಬ್ಲಾಕ್ ಪ್ರಿಂಟೆಡ್ ಸೀರೆಗಳು, ಮಧುರೈ ಸುಗುಡಿ ಕಾಟನ್ ಸೀರೆಗಳು, ಸಾಂಬಪುರಿ ಇಕ್ತಾ ಸೀರೆಗಳು, ಕೈಮಗ್ಗದ ಕಾಟನ್ ಸೀರೆಗಳು, ಚಾಂದಾರ್ ಕಾಟನ್ ಸೀರೆಗಳು, ಪೌಂಚಪಲ್ಲಿ ಕೈಮಗ್ಗದ ಸೀರೆಗಳು, ಫೋಲ್ಕರಿ ವಿನ್ಯಾಸದ ಪಾಟಿಯಾಲ, ಫೋಲ್ಕರಿ ಬೆಡ್ ಶೀಟ್ಗಳು, ಸೋಫಾ ಸೆಟ್ ಕವರ್, ಸಿಲ್ಕ್ ಕುಶನ್ ಕವರ್, ರಾಜಸ್ಥಾನ್ ಬೆಡ್ ಶೀಟ್ ಗಳು, ಇನ್ನಿತರ ಕೈಮಗ್ಗದ ಸೀರೆಗಳು ಲಭ್ಯವಿವೆ. ಜೋಧುರ್ ಕರಕುಶಲ ಮರದ ಪೀಠೋಪಕರಣಗಳು, ಸಾರಂಗ್ಟುರ್ ಮರದ ಪೀಠೋಪಕರಣ ಗಳು. ಹೈದರಬಾದ್ ಕಪ್ಪು ಮೇಟಲ್‌ನ ವಿಗ್ರಹಗಳು, ಹಿತ್ತಳೆಯ ಕಲಾಕೃತಿಗಳು, ವಿಶೇಷ ಶೈಲಿಯ ಜೈಪುರ್ ಆಭರಣಗಳು, ವಿಶೇಷ ವಿನ್ಯಾಸದ ವೈವಿಧ್ಯಮಯ ಮಣ್ಣಿನ ವಿಗ್ರಹಗಳು, ನೀಲಿ ಬಣ್ಣದ ಕ್ರಾಕರಿ ಐಟಮ್‌ ಗಳ ಬೃಹತ್ ಸಂಗ್ರಹವಿದೆ.

Related posts

ಬೆನಕ ಹೆಲ್ತ್ ಸೆಂಟರ್ ಗೆ IUI  & IVF  ( ಬಂಜೆತನ ನಿವಾರಣೆ ) ವಿಭಾಗಕ್ಕೆ ಕರ್ನಾಟಕ ಸರಕಾರದ ಮಾನ್ಯತೆ

Suddi Udaya

ಉಜಿರೆ ಎಸ್.ಡಿ.ಎಂ. (ಜನಾರ್ದನ ) ಹಿ.ಪ್ರಾ. ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ 

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ

Suddi Udaya

ಉಜಿರೆ ಶ್ರೀ ಧ ಮಂ ಸ್ವಾಯತ್ತ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ವತಿಯಿಂದ ಕಾಳಿದಾಸ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕೇಂದ್ರ ಕಛೇರಿ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಮತ್ತು ಆಡಳಿತ ಕಛೇರಿಯ ಉದ್ಘಾಟನೆ

Suddi Udaya
error: Content is protected !!