25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿಗೆಉಡುಪಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು

ಬೆಳ್ತಂಗಡಿ: ಮಹೇಶ ಶೆಟ್ಟಿ ತಿಮರೋಡಿ ಅವರನ್ನು ಎರಡು ಗಂಟೆಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ಆದೇಶದ ಬಳಿಕ ಸಂಜೆ ಪೊಲೀಸರು ಮತ್ತೆ ಹಾಜರು ಪಡಿಸಿದ್ದು ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡುವಂತೆ ಬ್ರಹ್ಮಾವರ ಪೊಲೀಸರು ಅರ್ಜಿ ಸಲ್ಲಿಸಿದರು.

ಈ ಹಿನ್ನೆಲೆಯಲ್ಲಿ ನ್ಯಾಯಾಧೀಶ ನಾಗೇಶ್ ಅವರು ತಿಮರೋಡಿ ಅವರನ್ನು ಕೋರ್ಟಿಗೆ ಹಾಜರುಪಡಿಸುವಂತೆ ಆದೇಶ ನೀಡಿದರು. ಅದರಂತೆ ಪೊಲೀಸರು ಹಿರಿಯಡ್ಕ ಜೈಲಿನಲ್ಲಿದ್ದ ತಿಮರೋಡಿ ಅವರನ್ನು ಬಿಗಿ ಪೊಲೀಸ್‌ ಭದ್ರತೆಯಲ್ಲಿ ಮಧ್ಯಾಹ್ನ 1:30 ಸುಮಾರಿಗೆ ಕೋರ್ಟಿಗೆ ಹಾಜರು ಪಡಿಸಿದರುಬಳಿಕ ನ್ಯಾಯಾಧೀಶರು ತಿಮರೋಡಿ ಅವರನ್ನು ವಿಚಾರಣೆಗಾಗಿ ಪೊಲೀಸ್ ಎರಡು ಗಂಟೆ ಕಸ್ಟಡಿಗೆ ನೀಡಿದ್ದು, ಮಧ್ಯಾಹ್ನ 3:40ಕ್ಕೆ ಮತ್ತೆ ಕೋರ್ಟ್ ಗೆ ಹಾಜರುಪಡಿಸುವಂತೆ ಆದೇಶಿಸಿದರು.

ಅದರಂತೆ ಕಸ್ಟಡಿಗೆ ಪಡೆದುಕೊಂಡ ಪೊಲೀಸರು, ವಿಚಾರಣೆಗಾಗಿ ತಿಮರೋಡಿ ಅವರನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ ಬಳಿಕ ಮತ್ತೆ ಕೋಟಿ೯ಗೆ ಹಾಜರು ಪಡಿಸಿದ್ದರು. ನ್ಯಾಯಾಲಯ ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು ನೀಡಿದೆ.

Related posts

ಮೊಗ್ರು: ಕಂಚಿನಡ್ಕ ದಲ್ಲಿ ಗುಡ್ಡ ಕುಸಿತ: ಬಿರುಕು ಬಿಟ್ಟ ಮನೆ: ಸಂಪೂರ್ಣ ಹಾನಿ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ: ಸಮಾರೋಪ ಸಮಾರಂಭ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಕೂಟ: ಬೆಳ್ತಂಗಡಿ ಶೊರಿನ್ ರಿಯೊ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಎಲ್ ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆ: ಸ್ಮಾರ್ಟ್‌ ಕ್ಲಾಸ್‌ ಲೋಕಾರ್ಪಣೆ

Suddi Udaya
error: Content is protected !!