September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿಗೆಉಡುಪಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು

ಬೆಳ್ತಂಗಡಿ: ಮಹೇಶ ಶೆಟ್ಟಿ ತಿಮರೋಡಿ ಅವರನ್ನು ಎರಡು ಗಂಟೆಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ಆದೇಶದ ಬಳಿಕ ಸಂಜೆ ಪೊಲೀಸರು ಮತ್ತೆ ಹಾಜರು ಪಡಿಸಿದ್ದು ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡುವಂತೆ ಬ್ರಹ್ಮಾವರ ಪೊಲೀಸರು ಅರ್ಜಿ ಸಲ್ಲಿಸಿದರು.

ಈ ಹಿನ್ನೆಲೆಯಲ್ಲಿ ನ್ಯಾಯಾಧೀಶ ನಾಗೇಶ್ ಅವರು ತಿಮರೋಡಿ ಅವರನ್ನು ಕೋರ್ಟಿಗೆ ಹಾಜರುಪಡಿಸುವಂತೆ ಆದೇಶ ನೀಡಿದರು. ಅದರಂತೆ ಪೊಲೀಸರು ಹಿರಿಯಡ್ಕ ಜೈಲಿನಲ್ಲಿದ್ದ ತಿಮರೋಡಿ ಅವರನ್ನು ಬಿಗಿ ಪೊಲೀಸ್‌ ಭದ್ರತೆಯಲ್ಲಿ ಮಧ್ಯಾಹ್ನ 1:30 ಸುಮಾರಿಗೆ ಕೋರ್ಟಿಗೆ ಹಾಜರು ಪಡಿಸಿದರುಬಳಿಕ ನ್ಯಾಯಾಧೀಶರು ತಿಮರೋಡಿ ಅವರನ್ನು ವಿಚಾರಣೆಗಾಗಿ ಪೊಲೀಸ್ ಎರಡು ಗಂಟೆ ಕಸ್ಟಡಿಗೆ ನೀಡಿದ್ದು, ಮಧ್ಯಾಹ್ನ 3:40ಕ್ಕೆ ಮತ್ತೆ ಕೋರ್ಟ್ ಗೆ ಹಾಜರುಪಡಿಸುವಂತೆ ಆದೇಶಿಸಿದರು.

ಅದರಂತೆ ಕಸ್ಟಡಿಗೆ ಪಡೆದುಕೊಂಡ ಪೊಲೀಸರು, ವಿಚಾರಣೆಗಾಗಿ ತಿಮರೋಡಿ ಅವರನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ ಬಳಿಕ ಮತ್ತೆ ಕೋಟಿ೯ಗೆ ಹಾಜರು ಪಡಿಸಿದ್ದರು. ನ್ಯಾಯಾಲಯ ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು ನೀಡಿದೆ.

Related posts

ಹೋಟೆಲ್ ಸಮತಾ ಮಾಲಕರಾಗಿದ್ದ ವಿಠಲ್ ಭಟ್ ನಿಧನ

Suddi Udaya

ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆ ಸರಿಯಲ್ಲ: ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ

Suddi Udaya

ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಮಕ್ಕಳ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya
error: Content is protected !!